ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ‘ಖಾಸಗಿ ಆಸ್ಪತ್ರೆಗಳು ತೆಗೆದುಕೊಳ್ಳಬೇಕಾದ ಪರೀಕ್ಷಾ ದರ, ಚಿಕಿತ್ಸಾ ದರವನ್ನು ಸರ್ಕಾರವೇ ನಿಗದಿಪಡಿಸಲಿದೆ. ಸುಲಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ
ಕ್ರಮ ಕೈಗೊಳ್ಳಲಾಗುವುದು. ರಾಜ್ಯದಾದ್ಯಂತ ಬಹುತೇಕ ಏಕರೂಪದ ಚಿಕಿತ್ಸಾ ದರ ನಿಗದಿಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ’ ಎಂದು ಹೇಳಿದರು.