<p><strong>ಲಖನೌ: </strong>ಕೋವಿಡ್-19 ಸಾಂಕ್ರಾಮಿಕ ರೋಗದ ಸದ್ಯದ ಪರಿಸ್ಥಿತಿಯಲ್ಲಿ, ಆಸ್ಪತ್ರೆಗಳಲ್ಲಿ ಮಾನವಶಕ್ತಿ ಹೆಚ್ಚಿಸಲು ನಿವೃತ್ತ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ಬಳಸಿಕೊಳ್ಳಬಹುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.</p>.<p>ಅಲ್ಲದೆ ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಕೆಲಸ ಮಾಡಬೇಕು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.</p>.<p>'ಕೋವಿಡ್-19 ವಿರುದ್ಧದ ಯುದ್ಧದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ ಅನೇಕರು ರೋಗಿಗಳಿಗೆ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವಶಕ್ತಿಯನ್ನು ಹೆಚ್ಚಿಸುವ ಸಲುವಾಗಿ, ನಿವೃತ್ತ ವೈದ್ಯರು, ಲ್ಯಾಬ್ ತಂತ್ರಜ್ಞರು ಮತ್ತು ಪ್ಯಾರಾ-ವೈದ್ಯಕೀಯ ಸಿಬ್ಬಂದಿ ಜೊತೆಗೆ ಸಶಸ್ತ್ರ ಪಡೆಗಳ ನಿವೃತ್ತ ಸಿಬ್ಬಂದಿಯ ಅನುಭವಗಳನ್ನು ಪಡೆಯಬಹುದು' ಎಂದು ವರ್ಚುಯಲ್ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಅವರು ಹೇಳಿದ್ದಾರೆ.</p>.<p>ಅಗತ್ಯವಿರುವ ಆಮ್ಲಜನಕವನ್ನು ಪೂರೈಸಲಾಗುತ್ತಿದೆ ಮತ್ತು ಆಮ್ಲಜನಕದ ಲೆಕ್ಕಪರಿಶೋಧನೆಯನ್ನು ಕೈಗೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ. ಕೋವಿಡ್-19ಗಾಗಿ ಸ್ವಾಧೀನಪಡಿಸಿಕೊಂಡಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಆಮ್ಲಜನಕದ ಮಾಹಿತಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.</p>.<p>ಟೆಲಿ-ಕನ್ಸಲ್ಟೆನ್ಸಿಯನ್ನು ಸಮಗ್ರವಾಗಿ ಬಳಸಿಕೊಳ್ಳಬೇಕು. ಇದರಿಂದಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಜನರನ್ನು ಸುಲಭವಾಗಿ ಸಂಪರ್ಕಿಸಬಹುದು ಎಂದು ಆದಿತ್ಯನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಕೋವಿಡ್-19 ಸಾಂಕ್ರಾಮಿಕ ರೋಗದ ಸದ್ಯದ ಪರಿಸ್ಥಿತಿಯಲ್ಲಿ, ಆಸ್ಪತ್ರೆಗಳಲ್ಲಿ ಮಾನವಶಕ್ತಿ ಹೆಚ್ಚಿಸಲು ನಿವೃತ್ತ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ಬಳಸಿಕೊಳ್ಳಬಹುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.</p>.<p>ಅಲ್ಲದೆ ಕೋವಿಡ್ ಹಾಸಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಕೆಲಸ ಮಾಡಬೇಕು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.</p>.<p>'ಕೋವಿಡ್-19 ವಿರುದ್ಧದ ಯುದ್ಧದಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ ಅನೇಕರು ರೋಗಿಗಳಿಗೆ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವಶಕ್ತಿಯನ್ನು ಹೆಚ್ಚಿಸುವ ಸಲುವಾಗಿ, ನಿವೃತ್ತ ವೈದ್ಯರು, ಲ್ಯಾಬ್ ತಂತ್ರಜ್ಞರು ಮತ್ತು ಪ್ಯಾರಾ-ವೈದ್ಯಕೀಯ ಸಿಬ್ಬಂದಿ ಜೊತೆಗೆ ಸಶಸ್ತ್ರ ಪಡೆಗಳ ನಿವೃತ್ತ ಸಿಬ್ಬಂದಿಯ ಅನುಭವಗಳನ್ನು ಪಡೆಯಬಹುದು' ಎಂದು ವರ್ಚುಯಲ್ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಅವರು ಹೇಳಿದ್ದಾರೆ.</p>.<p>ಅಗತ್ಯವಿರುವ ಆಮ್ಲಜನಕವನ್ನು ಪೂರೈಸಲಾಗುತ್ತಿದೆ ಮತ್ತು ಆಮ್ಲಜನಕದ ಲೆಕ್ಕಪರಿಶೋಧನೆಯನ್ನು ಕೈಗೊಳ್ಳಲು ನಿರ್ದೇಶನಗಳನ್ನು ನೀಡಲಾಗಿದೆ. ಕೋವಿಡ್-19ಗಾಗಿ ಸ್ವಾಧೀನಪಡಿಸಿಕೊಂಡಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಆಮ್ಲಜನಕದ ಮಾಹಿತಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.</p>.<p>ಟೆಲಿ-ಕನ್ಸಲ್ಟೆನ್ಸಿಯನ್ನು ಸಮಗ್ರವಾಗಿ ಬಳಸಿಕೊಳ್ಳಬೇಕು. ಇದರಿಂದಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಜನರನ್ನು ಸುಲಭವಾಗಿ ಸಂಪರ್ಕಿಸಬಹುದು ಎಂದು ಆದಿತ್ಯನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>