<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಎಲ್ಲ ಅಂಗವಿಕಲರಿಗೆ ಲಸಿಕೆಯನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿಯು ಸರ್ಕಾರಕ್ಕೆ ಒತ್ತಾಯಿಸಿದೆ.</p>.<p>ಈ ಸಂಬಂಧ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಅವರು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಲಸಿಕೆ ಅಭಿಯಾನದಡಿ ಅಂಗವಿಕಲರನ್ನು ಕಡೆಗಣಿಸಲಾಗಿದೆ. ಬೌದ್ಧಿಕ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ 45 ವರ್ಷದೊಳಗಿನವರಿಗೆ ಕೂಡ ಲಸಿಕೆ ಒದಗಿಸಬೇಕಿದೆ. ಅಂಗವಿಕಲರು ಕೋವಿಡ್ ಪೀಡಿತರಾದಲ್ಲಿ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ. ಸೋಂಕಿನಿಂದ ಚೇತರಿಸಿಕೊಳ್ಳುವಿಕೆ ಅವರಿಗೆ ಸವಾಲಾಗಲಿದೆ.</p>.<p>2011ರ ಜನಗಣತಿ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 1.8ರಷ್ಟು ಮಂದಿ (13.24 ಲಕ್ಷ ) ಅಂಗವಿಕಲರಿದ್ದಾರೆ. ಅಂಗವಿಕಲರ ಹಕ್ಕುಗಳ ಕಾಯ್ದೆ 2016ರ ಸೆಕ್ಷನ್ 25ರ ಪ್ರಕಾರ ಅವರಿಗೆ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳು ಆರೋಗ್ಯ ರಕ್ಷಣೆ ಒದಗಿಸಬೇಕು. ಅದೇ ರೀತಿ, ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದು ಚಂದ್ರಶೇಖರ್ ಪುಟ್ಟಪ್ಪ ತಿಳಿಸಿದ್ದಾರೆ.</p>.<p>ಈ ಕೂಡಲೇ ಎಲ್ಲ ಅಂಗವಿಕಲರಿಗೆ ‘ಕೋವಿಶೀಲ್ಡ್’ ಅಥವಾ ‘ಕೋವ್ಯಾಕ್ಸಿನ್’ ಲಸಿಕೆ ಒದಗಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಸರ್ಕಾರದ ಮಾಹಿತಿ ಪ್ರಕಾರಸದ್ಯ ಅಗತ್ಯ ಪ್ರಮಾಣದಲ್ಲಿ ಲಸಿಕೆ ಲಭ್ಯವಿದೆ. ಹಾಗಾಗಿ, ಅವರಿಗೆ ಆರೋಗ್ಯ ಭದ್ರತೆ ಒದಗಿಸಲು ಲಸಿಕೆಯನ್ನು ಉಚಿತವಾಗಿ ನೀಡಬೇಕು. ಈ ಸಂಬಂಧ ವಿಶೇಷ ಶಿಬಿರಗಳನ್ನು ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಎಲ್ಲ ಅಂಗವಿಕಲರಿಗೆ ಲಸಿಕೆಯನ್ನು ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ರಕ್ಷಣಾ ಸಮಿತಿಯು ಸರ್ಕಾರಕ್ಕೆ ಒತ್ತಾಯಿಸಿದೆ.</p>.<p>ಈ ಸಂಬಂಧ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಅವರು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಲಸಿಕೆ ಅಭಿಯಾನದಡಿ ಅಂಗವಿಕಲರನ್ನು ಕಡೆಗಣಿಸಲಾಗಿದೆ. ಬೌದ್ಧಿಕ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ 45 ವರ್ಷದೊಳಗಿನವರಿಗೆ ಕೂಡ ಲಸಿಕೆ ಒದಗಿಸಬೇಕಿದೆ. ಅಂಗವಿಕಲರು ಕೋವಿಡ್ ಪೀಡಿತರಾದಲ್ಲಿ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ. ಸೋಂಕಿನಿಂದ ಚೇತರಿಸಿಕೊಳ್ಳುವಿಕೆ ಅವರಿಗೆ ಸವಾಲಾಗಲಿದೆ.</p>.<p>2011ರ ಜನಗಣತಿ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 1.8ರಷ್ಟು ಮಂದಿ (13.24 ಲಕ್ಷ ) ಅಂಗವಿಕಲರಿದ್ದಾರೆ. ಅಂಗವಿಕಲರ ಹಕ್ಕುಗಳ ಕಾಯ್ದೆ 2016ರ ಸೆಕ್ಷನ್ 25ರ ಪ್ರಕಾರ ಅವರಿಗೆ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳು ಆರೋಗ್ಯ ರಕ್ಷಣೆ ಒದಗಿಸಬೇಕು. ಅದೇ ರೀತಿ, ಚಿಕಿತ್ಸೆಗೆ ಆದ್ಯತೆ ನೀಡಬೇಕು ಎಂದು ಚಂದ್ರಶೇಖರ್ ಪುಟ್ಟಪ್ಪ ತಿಳಿಸಿದ್ದಾರೆ.</p>.<p>ಈ ಕೂಡಲೇ ಎಲ್ಲ ಅಂಗವಿಕಲರಿಗೆ ‘ಕೋವಿಶೀಲ್ಡ್’ ಅಥವಾ ‘ಕೋವ್ಯಾಕ್ಸಿನ್’ ಲಸಿಕೆ ಒದಗಿಸಲು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಸರ್ಕಾರದ ಮಾಹಿತಿ ಪ್ರಕಾರಸದ್ಯ ಅಗತ್ಯ ಪ್ರಮಾಣದಲ್ಲಿ ಲಸಿಕೆ ಲಭ್ಯವಿದೆ. ಹಾಗಾಗಿ, ಅವರಿಗೆ ಆರೋಗ್ಯ ಭದ್ರತೆ ಒದಗಿಸಲು ಲಸಿಕೆಯನ್ನು ಉಚಿತವಾಗಿ ನೀಡಬೇಕು. ಈ ಸಂಬಂಧ ವಿಶೇಷ ಶಿಬಿರಗಳನ್ನು ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>