<p><strong>ಬೆಂಗಳೂರು:</strong> ಹೃದಯಾಘಾತ, ಹೃದಯಸ್ತಂಭನದಿಂದ ಹಠಾತ್ ಸಾವು ಸಂಭವಿಸುವಲ್ಲಿ ಕೊರೊನಾ ಸೋಂಕು, ಕೋವಿಡ್ ಮತ್ತು ಕೋವಿಡ್ ಲಸಿಕೆಗಳ ಅಡ್ಡಪರಿಣಾಮ ಕಾರಣವೇ ಎಂಬುದರ ಬಗ್ಗೆ ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>ರಾಜ್ಯದ ಯುವಕರು ಹಠಾತ್ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದ ಬೆನ್ನಲ್ಲೇ, ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿತ್ತು. ಅದಕ್ಕಾಗಿ, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನೂ ರಚಿಸಿತ್ತು. ಈ ಸಮಿತಿಯ ವರದಿ ಸಿದ್ಧವಾಗಿದ್ದು, ಅದರ ಪ್ರಮುಖಾಂಶಗಳಲ್ಲಿ ಹೀಗೆ ಪ್ರತಿಪಾದಿಸಲಾಗಿದೆ.</p>.<p>‘ಹೃದಯ ಸಂಬಂಧಿ ಕಾಯಿಲೆಗಳಿಂದ ವರದಿಯಾಗುತ್ತಿರುವ ಹಠಾತ್ ಮರಣ ಪ್ರಕರಣಗಳಿಗೆ ‘ದೀರ್ಘಕಾಲದ ಕೋವಿಡ್’ ಕಾರಣ ಎಂಬ ಪ್ರತಿಪಾದನೆಯನ್ನು ಬೆಂಬಲಿಸುವ ದತ್ತಾಂಶಗಳು ನಮ್ಮ ಎದುರು ಇಲ್ಲ’ ಎಂದಿದೆ.</p>.<p>‘ಆದರೆ, ಕೊರೊನಾ ಸೋಂಕು ಮತ್ತು ಲಸಿಕೆಯ ದೀರ್ಘಕಾಲಿನ ಅಡ್ಡ ಪರಿಣಾಮಗಳ ಬಗ್ಗೆ ದೊಡ್ಡ ಮಟ್ಟದ ಸಂಶೋಧನೆಯ ಅಗತ್ಯವಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಂತಹ (ಐಸಿಎಂಆರ್) ಸಂಸ್ಥೆಗಳು ಈ ವಿಚಾರ ಕುರಿತು ಬಹುಶಿಸ್ತೀಯ ಅಧ್ಯಯನ ನಡೆಸಬೇಕು’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<h2>ಶಿಫಾರಸ್ಸು</h2><ul><li><p>ಯುವಜನರ ಹಠಾತ್ ಸಾವು ಪ್ರಕರಣಗಳ ಶವಪರೀಕ್ಷೆ ವರದಿ ಆಧಾರಿತ ನೋಂದಣಿ ಆರಂಭಿಸಬೇಕು</p></li><li><p>ಶಾಲಾ ಹಂತದಲ್ಲಿಯೇ ಹೃದಯ ತಪಾಸಣೆ, ಜನ್ಮಜಾತ ಹೃದಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ವಿವರವಾದ ವೈದ್ಯಕೀಯಪರೀಕ್ಷೆ ನಡೆಸಬೇಕು. ಇದರಿಂದ ಅಧಿಕ ತೂಕ, ಬೊಜ್ಜು, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಗುರುತಿಸಬಹುದಾಗಿದೆ</p></li><li><p>ಹೃದಯ ರಕ್ತನಾಳದ ಕಾಯಿಲೆಗಳು, ಅವುಗಳ ಕಾರಣಗಳು, ಅಪಾಯಕಾರಿ ಅಂಶಗಳು, ಆರಂಭಿಕ ಹಂತದಲ್ಲೇ ಪತ್ತೆ ಮತ್ತು ತಡೆಗಟ್ಟುವ ಬಗ್ಗೆ ಸಾರ್ವಜನಿಕ ಆರೋಗ್ಯ ಅಭಿಯಾನಗಳ ಮೂಲಕ ಅರಿವು ಮೂಡಿಸಬೇಕು</p></li><li><p>ಆರೋಗ್ಯಕರ ಆಹಾರ ಸೇವನೆ ಮತ್ತು ಉತ್ತಮ ಜೀವನಶೈಲಿ ಅಳವಡಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಆಹಾರದಲ್ಲಿ ಸಕ್ಕರೆ ಮತ್ತು ಉಪ್ಪಿನ ಅಂಶವನ್ನು ಕಡಿಮೆ ಮಾಡಬೇಕು</p></li></ul>.<p><strong>‘ಕಳವಳಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ’</strong></p><p>‘ಪ್ರೀತಿಪಾತ್ರರನ್ನು ಅನಿರೀಕ್ಷಿತವಾಗಿ ಕಳೆದುಕೊಂಡ ಜನರ ನಿಜವಾದ ಕಳವಳಗಳಿಗೆ ಸ್ಪಂದಿಸುವ ಕರ್ತವ್ಯ ನನ್ನ ಮೇಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ<br>ಪ್ರತಿಕ್ರಿಯಿಸಿದ್ದಾರೆ.</p><p>‘ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆ ಕಾರಣ ಇರಬಹುದು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ್ದ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ‘ಇದು ವಾಸ್ತವಕ್ಕೆ ವಿರುದ್ಧವಾಗಿದ್ದು, ದಾರಿ ತಪ್ಪಿಸುವಂತಿದೆ’ ಎಂದು ‘ಎಕ್ಸ್’ ವೇದಿಕೆಯಲ್ಲಿ ಹೇಳಿದ್ದರು.</p><p>ಕಿರಣ್ ಮಜುಂದಾರ್ ಶಾ ಅವರ ಈ ಹೇಳಿಕೆಗೆ ತಮ್ಮ ‘ಎಕ್ಸ್’ ಖಾತೆಯಲ್ಲಿ ತಿರುಗೇಟು ನೀಡಿರುವ ಮುಖ್ಯಮಂತ್ರಿ, ‘ಪೋಷಕರು ತಮ್ಮ ಚಿಕ್ಕ ಮಕ್ಕಳನ್ನು ಅಥವಾ ಕುಟುಂಬಗಳು ತಮ್ಮ ಅನ್ನದಾತರನ್ನು ಕಳೆದುಕೊಂಡಾಗ ಸ್ಪಷ್ಟತೆಯನ್ನು ಹುಡುಕುವುದು ತಪ್ಪು ಮಾಹಿತಿಯಲ್ಲ. ಅದು ಸಹಾನುಭೂತಿಯಲ್ಲಿ ಬೇರೂರಿರುವ ಆಡಳಿತದ ಕ್ರಿಯೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೃದಯಾಘಾತ, ಹೃದಯಸ್ತಂಭನದಿಂದ ಹಠಾತ್ ಸಾವು ಸಂಭವಿಸುವಲ್ಲಿ ಕೊರೊನಾ ಸೋಂಕು, ಕೋವಿಡ್ ಮತ್ತು ಕೋವಿಡ್ ಲಸಿಕೆಗಳ ಅಡ್ಡಪರಿಣಾಮ ಕಾರಣವೇ ಎಂಬುದರ ಬಗ್ಗೆ ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ.</p>.<p>ರಾಜ್ಯದ ಯುವಕರು ಹಠಾತ್ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದ ಬೆನ್ನಲ್ಲೇ, ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿತ್ತು. ಅದಕ್ಕಾಗಿ, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನೂ ರಚಿಸಿತ್ತು. ಈ ಸಮಿತಿಯ ವರದಿ ಸಿದ್ಧವಾಗಿದ್ದು, ಅದರ ಪ್ರಮುಖಾಂಶಗಳಲ್ಲಿ ಹೀಗೆ ಪ್ರತಿಪಾದಿಸಲಾಗಿದೆ.</p>.<p>‘ಹೃದಯ ಸಂಬಂಧಿ ಕಾಯಿಲೆಗಳಿಂದ ವರದಿಯಾಗುತ್ತಿರುವ ಹಠಾತ್ ಮರಣ ಪ್ರಕರಣಗಳಿಗೆ ‘ದೀರ್ಘಕಾಲದ ಕೋವಿಡ್’ ಕಾರಣ ಎಂಬ ಪ್ರತಿಪಾದನೆಯನ್ನು ಬೆಂಬಲಿಸುವ ದತ್ತಾಂಶಗಳು ನಮ್ಮ ಎದುರು ಇಲ್ಲ’ ಎಂದಿದೆ.</p>.<p>‘ಆದರೆ, ಕೊರೊನಾ ಸೋಂಕು ಮತ್ತು ಲಸಿಕೆಯ ದೀರ್ಘಕಾಲಿನ ಅಡ್ಡ ಪರಿಣಾಮಗಳ ಬಗ್ಗೆ ದೊಡ್ಡ ಮಟ್ಟದ ಸಂಶೋಧನೆಯ ಅಗತ್ಯವಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಂತಹ (ಐಸಿಎಂಆರ್) ಸಂಸ್ಥೆಗಳು ಈ ವಿಚಾರ ಕುರಿತು ಬಹುಶಿಸ್ತೀಯ ಅಧ್ಯಯನ ನಡೆಸಬೇಕು’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.</p>.<h2>ಶಿಫಾರಸ್ಸು</h2><ul><li><p>ಯುವಜನರ ಹಠಾತ್ ಸಾವು ಪ್ರಕರಣಗಳ ಶವಪರೀಕ್ಷೆ ವರದಿ ಆಧಾರಿತ ನೋಂದಣಿ ಆರಂಭಿಸಬೇಕು</p></li><li><p>ಶಾಲಾ ಹಂತದಲ್ಲಿಯೇ ಹೃದಯ ತಪಾಸಣೆ, ಜನ್ಮಜಾತ ಹೃದಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ವಿವರವಾದ ವೈದ್ಯಕೀಯಪರೀಕ್ಷೆ ನಡೆಸಬೇಕು. ಇದರಿಂದ ಅಧಿಕ ತೂಕ, ಬೊಜ್ಜು, ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಗುರುತಿಸಬಹುದಾಗಿದೆ</p></li><li><p>ಹೃದಯ ರಕ್ತನಾಳದ ಕಾಯಿಲೆಗಳು, ಅವುಗಳ ಕಾರಣಗಳು, ಅಪಾಯಕಾರಿ ಅಂಶಗಳು, ಆರಂಭಿಕ ಹಂತದಲ್ಲೇ ಪತ್ತೆ ಮತ್ತು ತಡೆಗಟ್ಟುವ ಬಗ್ಗೆ ಸಾರ್ವಜನಿಕ ಆರೋಗ್ಯ ಅಭಿಯಾನಗಳ ಮೂಲಕ ಅರಿವು ಮೂಡಿಸಬೇಕು</p></li><li><p>ಆರೋಗ್ಯಕರ ಆಹಾರ ಸೇವನೆ ಮತ್ತು ಉತ್ತಮ ಜೀವನಶೈಲಿ ಅಳವಡಿಕೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಆಹಾರದಲ್ಲಿ ಸಕ್ಕರೆ ಮತ್ತು ಉಪ್ಪಿನ ಅಂಶವನ್ನು ಕಡಿಮೆ ಮಾಡಬೇಕು</p></li></ul>.<p><strong>‘ಕಳವಳಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ’</strong></p><p>‘ಪ್ರೀತಿಪಾತ್ರರನ್ನು ಅನಿರೀಕ್ಷಿತವಾಗಿ ಕಳೆದುಕೊಂಡ ಜನರ ನಿಜವಾದ ಕಳವಳಗಳಿಗೆ ಸ್ಪಂದಿಸುವ ಕರ್ತವ್ಯ ನನ್ನ ಮೇಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ<br>ಪ್ರತಿಕ್ರಿಯಿಸಿದ್ದಾರೆ.</p><p>‘ಹೃದಯಾಘಾತ ಹೆಚ್ಚುತ್ತಿರುವುದಕ್ಕೆ ಕೋವಿಡ್ ಲಸಿಕೆ ಕಾರಣ ಇರಬಹುದು’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿದ್ದ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ‘ಇದು ವಾಸ್ತವಕ್ಕೆ ವಿರುದ್ಧವಾಗಿದ್ದು, ದಾರಿ ತಪ್ಪಿಸುವಂತಿದೆ’ ಎಂದು ‘ಎಕ್ಸ್’ ವೇದಿಕೆಯಲ್ಲಿ ಹೇಳಿದ್ದರು.</p><p>ಕಿರಣ್ ಮಜುಂದಾರ್ ಶಾ ಅವರ ಈ ಹೇಳಿಕೆಗೆ ತಮ್ಮ ‘ಎಕ್ಸ್’ ಖಾತೆಯಲ್ಲಿ ತಿರುಗೇಟು ನೀಡಿರುವ ಮುಖ್ಯಮಂತ್ರಿ, ‘ಪೋಷಕರು ತಮ್ಮ ಚಿಕ್ಕ ಮಕ್ಕಳನ್ನು ಅಥವಾ ಕುಟುಂಬಗಳು ತಮ್ಮ ಅನ್ನದಾತರನ್ನು ಕಳೆದುಕೊಂಡಾಗ ಸ್ಪಷ್ಟತೆಯನ್ನು ಹುಡುಕುವುದು ತಪ್ಪು ಮಾಹಿತಿಯಲ್ಲ. ಅದು ಸಹಾನುಭೂತಿಯಲ್ಲಿ ಬೇರೂರಿರುವ ಆಡಳಿತದ ಕ್ರಿಯೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>