<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿವೆ. ಸದ್ಯ9,906 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಸೋಮವಾರ611 ಜನರಿಗೆ ಕಾಯಿಲೆ ವಾಸಿಯಾಗಿದ್ದು ಈವರೆಗೆ29.33 ಲಕ್ಷ ಮಂದಿ ಗುಣಮುಖರಾದಂತಾಗಿದೆ.</p>.<p>ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಒಂದು ದಿನದಲ್ಲಿ373 ಜನರಿಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ಖಾತರಿಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ29.81 ಲಕ್ಷಕ್ಕೆ ಏರಿದೆ. ಕೋವಿಡ್ ದೃಢ ಪ್ರಮಾಣವು ಶೇ0.45ರಷ್ಟಿದೆ.</p>.<p>ಕೋವಿಡ್ ಪೀಡಿತರ ಪೈಕಿ ಸೋಮವಾರ 10 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ37,895ಕ್ಕೆ ತಲುಪಿದ್ದು, ಮರಣ ಪ್ರಮಾಣ ದರವು ಶೇ 2.68 ರಷ್ಟಿದೆ.</p>.<p>ಕೋವಿಡ್ ಪರೀಕ್ಷೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ 82,853 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<p>ಬೆಂಗಳೂರಿನಲ್ಲೂ ಕೋವಿಡ್ ಹೊಸ ಪ್ರಕರಣಗಳು ಇಳಿದಿವೆ. ಸೋಮವಾರ146 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ (38), ಕೊಡಗು (15) ಹಾಗೂ ಮೈಸೂರಿನಲ್ಲಿ (43) ಹೊಸ ಪ್ರಕರಣಗಳು 50ಕ್ಕಿಂತ ಕಡಿಮೆ ಇವೆ.ಹಾಸನ (38), ಮಂಡ್ಯ (10), ತುಮಕೂರು (17), ಉಡುಪಿ (15) ಹಾಗೂ ಉತ್ತರ ಕನ್ನಡ (12) ಜಿಲ್ಲೆಗಳಲ್ಲೂ ಪ್ರಕರಣಗಳು ಕಡಿಮೆಯಾಗಿವೆ. ಬಾಗಲಕೋಟೆ, ಚಿಕ್ಕಮಗಳೂರು, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 14 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.</p>.<p>ಕೋವಿಡ್ನಿಂದಾಗಿ ಬೆಂಗಳೂರಿನಲ್ಲಿ ಸೋಮವಾರ 5 ಮಂದಿ ಮೃತರಾಗಿದ್ದಾರೆ. ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರು ಅಸುನೀಗಿದ್ದಾರೆ. ಧಾರವಾಡದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಪೈಕಿ 9 ಮಂದಿ 60 ವರ್ಷ ಮೇಲ್ಪಟ್ಟವರು. ಬಹುತೇಕರು ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿವೆ. ಸದ್ಯ9,906 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಸೋಮವಾರ611 ಜನರಿಗೆ ಕಾಯಿಲೆ ವಾಸಿಯಾಗಿದ್ದು ಈವರೆಗೆ29.33 ಲಕ್ಷ ಮಂದಿ ಗುಣಮುಖರಾದಂತಾಗಿದೆ.</p>.<p>ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಒಂದು ದಿನದಲ್ಲಿ373 ಜನರಿಗೆ ಸೋಂಕು ತಗುಲಿರುವುದು ಪರೀಕ್ಷೆಯಿಂದ ಖಾತರಿಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ29.81 ಲಕ್ಷಕ್ಕೆ ಏರಿದೆ. ಕೋವಿಡ್ ದೃಢ ಪ್ರಮಾಣವು ಶೇ0.45ರಷ್ಟಿದೆ.</p>.<p>ಕೋವಿಡ್ ಪೀಡಿತರ ಪೈಕಿ ಸೋಮವಾರ 10 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ37,895ಕ್ಕೆ ತಲುಪಿದ್ದು, ಮರಣ ಪ್ರಮಾಣ ದರವು ಶೇ 2.68 ರಷ್ಟಿದೆ.</p>.<p>ಕೋವಿಡ್ ಪರೀಕ್ಷೆಗಳ ಸಂಖ್ಯೆ ಇಳಿಕೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ 82,853 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<p>ಬೆಂಗಳೂರಿನಲ್ಲೂ ಕೋವಿಡ್ ಹೊಸ ಪ್ರಕರಣಗಳು ಇಳಿದಿವೆ. ಸೋಮವಾರ146 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ (38), ಕೊಡಗು (15) ಹಾಗೂ ಮೈಸೂರಿನಲ್ಲಿ (43) ಹೊಸ ಪ್ರಕರಣಗಳು 50ಕ್ಕಿಂತ ಕಡಿಮೆ ಇವೆ.ಹಾಸನ (38), ಮಂಡ್ಯ (10), ತುಮಕೂರು (17), ಉಡುಪಿ (15) ಹಾಗೂ ಉತ್ತರ ಕನ್ನಡ (12) ಜಿಲ್ಲೆಗಳಲ್ಲೂ ಪ್ರಕರಣಗಳು ಕಡಿಮೆಯಾಗಿವೆ. ಬಾಗಲಕೋಟೆ, ಚಿಕ್ಕಮಗಳೂರು, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 14 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.</p>.<p>ಕೋವಿಡ್ನಿಂದಾಗಿ ಬೆಂಗಳೂರಿನಲ್ಲಿ ಸೋಮವಾರ 5 ಮಂದಿ ಮೃತರಾಗಿದ್ದಾರೆ. ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರು ಅಸುನೀಗಿದ್ದಾರೆ. ಧಾರವಾಡದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಪೈಕಿ 9 ಮಂದಿ 60 ವರ್ಷ ಮೇಲ್ಪಟ್ಟವರು. ಬಹುತೇಕರು ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>