<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೊರೊನಾ ಸೋಂಕು ದೃಢ ಪ್ರಮಾಣದ ಜತೆಗೆ ಕೋವಿಡ್ ಹೊಸ ಪ್ರಕರಣಗಳು ಕೂಡ ಇಳಿಕೆಯ ಹಾದಿ ಹಿಡಿದಿದೆ. ವಾರದಲ್ಲಿ ಸೋಂಕು ದೃಢ ಪ್ರಮಾಣದಸರಾಸರಿ ಶೇ 8.91ರಷ್ಟಿದ್ದು, ಬೆಂಗಳೂರು ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಈ ಪ್ರಮಾಣವು ಶೇ 5ಕ್ಕಿಂತ ಕಡಿಮೆಯಿದೆ.</p>.<p>ರಾಜ್ಯದಲ್ಲಿ ಇದೇ 14ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಸೋಂಕು ದೃಢ ಪ್ರಮಾಣ ದರವು ಶೇ 5 ಹಾಗೂ ಮರಣ ಪ್ರಮಾಣ ದರವು ಶೇ 1ಕ್ಕೆ ಇಳಿಕೆಯಾಗುವವರೆಗೂ ಲಾಕ್ಡೌನ್ ಮುಂದುವರಿಸಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.</p>.<p>ಕಳೆದ ತಿಂಗಳು ಮೊದಲೆರಡು ವಾರ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣವು ಶೇ 50ರ ಗಡಿಯ ಆಸುಪಾಸಿಗೆ ಏರಿಕೆಯಾಗಿತ್ತು. ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕು ದೃಢ ಪ್ರಮಾಣ ಅಧಿಕವಿತ್ತು. ವೈದ್ಯಕೀಯ ತಜ್ಞರ ಪ್ರಕಾರ ಈ ಪ್ರಮಾಣವು ಶೇ 5ಕ್ಕಿಂತ ಕಡಿಮೆ ವರದಿಯಾದಲ್ಲಿ ಮಾತ್ರ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ಪರಿಗಣಿಸಲಾಗುತ್ತದೆ.</p>.<p>ಶೇ 3ರ ಗಡಿಯ ಆಸುಪಾಸಿಗೆ ಏರಿಕೆಯಾಗಿದ್ದ ಮರಣ ಪ್ರಮಾಣ ದರ ಕೂಡ ಇಳಿಕೆಯಾಗುತ್ತಿದೆ. ಏಳು ದಿನಗಳಲ್ಲಿ ವರದಿಯಾದ ಮರಣ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಶೇ 2.67ರಷ್ಟು ಮರಣ ಪ್ರಮಾಣ ದರವಿದೆ. ಯಾದಗಿರಿ, ಉಡುಪಿ ಸೇರಿದಂತೆ 9 ಜಿಲ್ಲೆಗಳಲ್ಲಿ ಈ ಪ್ರಮಾಣವು ಶೇ 1ಕ್ಕಿಂತ ಕಡಿಮೆಯಿದೆ. ಬೆಂಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ರಾಜ್ಯದ ಸರಾಸರಿಗಿಂತ ಅಧಿಕವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೊರೊನಾ ಸೋಂಕು ದೃಢ ಪ್ರಮಾಣದ ಜತೆಗೆ ಕೋವಿಡ್ ಹೊಸ ಪ್ರಕರಣಗಳು ಕೂಡ ಇಳಿಕೆಯ ಹಾದಿ ಹಿಡಿದಿದೆ. ವಾರದಲ್ಲಿ ಸೋಂಕು ದೃಢ ಪ್ರಮಾಣದಸರಾಸರಿ ಶೇ 8.91ರಷ್ಟಿದ್ದು, ಬೆಂಗಳೂರು ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಈ ಪ್ರಮಾಣವು ಶೇ 5ಕ್ಕಿಂತ ಕಡಿಮೆಯಿದೆ.</p>.<p>ರಾಜ್ಯದಲ್ಲಿ ಇದೇ 14ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಸೋಂಕು ದೃಢ ಪ್ರಮಾಣ ದರವು ಶೇ 5 ಹಾಗೂ ಮರಣ ಪ್ರಮಾಣ ದರವು ಶೇ 1ಕ್ಕೆ ಇಳಿಕೆಯಾಗುವವರೆಗೂ ಲಾಕ್ಡೌನ್ ಮುಂದುವರಿಸಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.</p>.<p>ಕಳೆದ ತಿಂಗಳು ಮೊದಲೆರಡು ವಾರ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣವು ಶೇ 50ರ ಗಡಿಯ ಆಸುಪಾಸಿಗೆ ಏರಿಕೆಯಾಗಿತ್ತು. ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ, ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸೋಂಕು ದೃಢ ಪ್ರಮಾಣ ಅಧಿಕವಿತ್ತು. ವೈದ್ಯಕೀಯ ತಜ್ಞರ ಪ್ರಕಾರ ಈ ಪ್ರಮಾಣವು ಶೇ 5ಕ್ಕಿಂತ ಕಡಿಮೆ ವರದಿಯಾದಲ್ಲಿ ಮಾತ್ರ ರೋಗ ನಿಯಂತ್ರಣಕ್ಕೆ ಬಂದಿದೆ ಎಂದು ಪರಿಗಣಿಸಲಾಗುತ್ತದೆ.</p>.<p>ಶೇ 3ರ ಗಡಿಯ ಆಸುಪಾಸಿಗೆ ಏರಿಕೆಯಾಗಿದ್ದ ಮರಣ ಪ್ರಮಾಣ ದರ ಕೂಡ ಇಳಿಕೆಯಾಗುತ್ತಿದೆ. ಏಳು ದಿನಗಳಲ್ಲಿ ವರದಿಯಾದ ಮರಣ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಶೇ 2.67ರಷ್ಟು ಮರಣ ಪ್ರಮಾಣ ದರವಿದೆ. ಯಾದಗಿರಿ, ಉಡುಪಿ ಸೇರಿದಂತೆ 9 ಜಿಲ್ಲೆಗಳಲ್ಲಿ ಈ ಪ್ರಮಾಣವು ಶೇ 1ಕ್ಕಿಂತ ಕಡಿಮೆಯಿದೆ. ಬೆಂಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ರಾಜ್ಯದ ಸರಾಸರಿಗಿಂತ ಅಧಿಕವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>