<p><strong>ಬೆಂಗಳೂರು</strong>: ‘ಹವಾಮಾನ ವೈಪರೀತ್ಯದಿಂದ ಕೆಲವರು ಜ್ವರ ಪೀಡಿತರಾಗುತ್ತಿದ್ದಾರೆ. ಕೋವಿಡ್ ಬಗೆಗೆ ಆತಂಕ ಪಡಬೇಕಾದ ಅಗತ್ಯವಿಲ್ಲ’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.</p>.<p>‘ಚೀನಾದಲ್ಲಿ ಸಾಮೂಹಿಕವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಆದ್ದರಿಂದ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಒಬ್ಬರು ಸೋಂಕಿತರಾದರೆ ಕಟ್ಟಡದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದೇಶದಲ್ಲಿ ಈ ಪರೀಕ್ಷಾ ಪದ್ಧತಿಯನ್ನು ಕೈಬಿಡಲಾಗಿದೆ. ಈಗ ಕೆಲ ಪ್ರಕರಣ ಪತ್ತೆಯಾದರೂ ಸೋಂಕಿತರು ಲಕ್ಷಣರಹಿತರಾಗಿರುತ್ತಿದ್ದಾರೆ. ಆದ್ದರಿಂದ ಸೋಂಕಿತರ ಸಂಪರ್ಕಿತರಿಗೆ ಪರೀಕ್ಷೆ ಮಾಡುತ್ತಿಲ್ಲ. ಪರೀಕ್ಷೆಗಳ ಸಂಖ್ಯೆಯನ್ನೂ ಇಳಿಕೆ ಮಾಡಿದೆ’ ಎಂದು ಹೇಳಿದರು.</p>.<p>‘ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್ಐ), ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಈ ಪ್ರಕರಣಗಳು ಹೆಚ್ಚಳವಾಗಿಲ್ಲ. ಕೋವಿಡ್ ಸಂಬಂಧಿತ ಆಸ್ಪತ್ರೆ ದಾಖಲಾತಿ ಬೆರಳಣಿಕೆಯಷ್ಟಿದೆ. ಕೋವಿಡ್ ಚಿಕಿತ್ಸಾ ವಿಧಾನವೂ ಬದಲಾಗಿದೆ. ಇದರಿಂದಾಗಿ ಮರಣವೂ ನಿಯಂತ್ರಣಕ್ಕೆ ಬಂದಿದೆ. ಹಾಗಾಗಿ, ಇಲ್ಲಿ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಪರೀಕ್ಷೆಯಲ್ಲಿಯೂ ಬದಲಾವಣೆಯಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹವಾಮಾನ ವೈಪರೀತ್ಯದಿಂದ ಕೆಲವರು ಜ್ವರ ಪೀಡಿತರಾಗುತ್ತಿದ್ದಾರೆ. ಕೋವಿಡ್ ಬಗೆಗೆ ಆತಂಕ ಪಡಬೇಕಾದ ಅಗತ್ಯವಿಲ್ಲ’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.</p>.<p>‘ಚೀನಾದಲ್ಲಿ ಸಾಮೂಹಿಕವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಆದ್ದರಿಂದ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಒಬ್ಬರು ಸೋಂಕಿತರಾದರೆ ಕಟ್ಟಡದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದೇಶದಲ್ಲಿ ಈ ಪರೀಕ್ಷಾ ಪದ್ಧತಿಯನ್ನು ಕೈಬಿಡಲಾಗಿದೆ. ಈಗ ಕೆಲ ಪ್ರಕರಣ ಪತ್ತೆಯಾದರೂ ಸೋಂಕಿತರು ಲಕ್ಷಣರಹಿತರಾಗಿರುತ್ತಿದ್ದಾರೆ. ಆದ್ದರಿಂದ ಸೋಂಕಿತರ ಸಂಪರ್ಕಿತರಿಗೆ ಪರೀಕ್ಷೆ ಮಾಡುತ್ತಿಲ್ಲ. ಪರೀಕ್ಷೆಗಳ ಸಂಖ್ಯೆಯನ್ನೂ ಇಳಿಕೆ ಮಾಡಿದೆ’ ಎಂದು ಹೇಳಿದರು.</p>.<p>‘ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್ಐ), ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಈ ಪ್ರಕರಣಗಳು ಹೆಚ್ಚಳವಾಗಿಲ್ಲ. ಕೋವಿಡ್ ಸಂಬಂಧಿತ ಆಸ್ಪತ್ರೆ ದಾಖಲಾತಿ ಬೆರಳಣಿಕೆಯಷ್ಟಿದೆ. ಕೋವಿಡ್ ಚಿಕಿತ್ಸಾ ವಿಧಾನವೂ ಬದಲಾಗಿದೆ. ಇದರಿಂದಾಗಿ ಮರಣವೂ ನಿಯಂತ್ರಣಕ್ಕೆ ಬಂದಿದೆ. ಹಾಗಾಗಿ, ಇಲ್ಲಿ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಪರೀಕ್ಷೆಯಲ್ಲಿಯೂ ಬದಲಾವಣೆಯಿಲ್ಲ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>