ಸಾಮಾಜಿಕವಾಗಿ ಮುಂದುವರಿದ ವ್ಯಕ್ತಿಗಳು, ವರ್ಗಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರಗಿಡಲು ಕೆನೆಪದರ ನೀತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ವಾರ್ಷಿಕ ಆದಾಯ ₹6 ಲಕ್ಷಕ್ಕಿಂತ ಹೆಚ್ಚು ಇದ್ದ ವ್ಯಕ್ತಿಗಳಿಗೆ ಕೆನೆಪದರ ಮೀಸಲಾತಿಯ ಸೌಲಭ್ಯ ಸಿಗುತ್ತಿರಲಿಲ್ಲ. ಈಗ ಆದಾಯ ಮಿತಿ ಏರಿಸಿರುವುದರಿಂದ ಹಿಂದುಳಿದ ವರ್ಗಗಳಿಗೆ ಸೇರಿರುವ ಹೆಚ್ಚಿನ ವ್ಯಕ್ತಿಗಳಿಗೆ ಈ ಸೌಲಭ್ಯ ಸಿಗಲಿದೆ.