ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಜಾತಿ ಹೆಸರಿನಲ್ಲಿ ಮತ ಕೇಳಿ ಪ್ರಚೋದನೆ ಮಾಡಿದ್ದಾರೆ. ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ನೂತನ ಬಂಗಲೆಯ ಗೃಹ ಪ್ರವೇಶ, ಮಗನ ಅದ್ದೂರಿ ಮದುವೆ ಮಾಡಿದ್ದಾರೆ. ಚಿನ್ನದ ನಾಣ್ಯಗಳನ್ನು ಮತದಾರರಿಗೆ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇತರೆ ಕ್ಷೇತ್ರಗಳಲ್ಲೂ ಅಕ್ರಮ ನಡೆಯುತ್ತಿದೆ. ಇಷ್ಟೆಲ್ಲ ಆಗುತ್ತಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದ್ದು ಸರಿಯಲ್ಲ. ಅದು ಪ್ರಜಾಪ್ರಭುತ್ವ ಉಳಿಸಲಿ’ ಎಂದು ಆಗ್ರಹಿಸಿದರು.