<p><strong>ಬೆಂಗಳೂರು</strong>: ‘ಅತೀವ ಮಳೆಯಿಂದ ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ಹಲವೆಡೆ ಬೆಳೆ ನಾಶವಾಗಿದೆ. ಸರ್ಕಾರವು ಹೆಕ್ಟೇರ್ಗೆ ₹25,000–₹30,000 ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರಕ್ಕೆ ರೈತರು ಮತ್ತು ಜನರ ಬಗ್ಗೆ ಕಾಳಜಿಯೇ ಇಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ತಾವು ಓಡಾಡಲು ₹80 ಕೋಟಿಯ ಹೆಲಿಕಾಪ್ಟರ್ ಹಾಗೂ ₹150 ಕೋಟಿ ವೆಚ್ಚದಲ್ಲಿ ವಿಮಾನ ಖರೀದಿಸಲು ಮುಂದಾಗಿದ್ದಾರೆ. ಆದರೆ, ಅವರಿಗೆ ಮಳೆ ಸಂತ್ರಸ್ತರ ಬಗ್ಗೆ ಮಾತನಾಡಲು ಸಮಯವಿಲ್ಲ’ ಎಂದರು.</p>.<p>‘ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನೆರೆ ಪೀಡಿತ ಪ್ರದೇಶಗಳಿಗೆ ಇದೇ 9 ರಿಂದ ಪ್ರವಾಸ ಕೈಗೊಳ್ಳಲಿದ್ದೇವೆ. ನಷ್ಟಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸರ್ಕಾರವು ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಕೃಷಿ ಸಚಿವರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ₹250 ಬೆಲೆಯ ಗೊಬ್ಬರವನ್ನು ₹1,000 ಕೊಟ್ಟು ರೈತರು ಖರೀದಿಸಿದ್ದಾರೆ. ಆದರೆ ಈ ಬಗ್ಗೆ ತಮಗೆ ಮಾಹಿತಿಯೇ ಇಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಅವರು ರೈತರ ಪರವಾಗಿ ಹೇಗೆ ಕೆಲಸ ಮಾಡಬಹುದು ಎಂಬುದು ಈ ಮಾತಿನಿಂದ ಗೊತ್ತಾಗುತ್ತದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕ ಪಕ್ಷಗಳು. ಅವರ ಹೋರಾಟ ಅವರದ್ದು, ನಮ್ಮ ಹೋರಾಟ ನಮ್ಮದು. ಧರ್ಮಸ್ಥಳದ ವಿಚಾರದಲ್ಲಿ ಪ್ರತ್ಯೇಕ ಹೋರಾಟ ನಡೆಸಿದರೂ, ನಾವು ಒಟ್ಟಿಗೇ ಇದ್ದೇವೆ. ಧರ್ಮಸ್ಥಳ ಪರವಾದ ಹೋರಾಟದಲ್ಲಿ ಎರಡೂ ಮಿತ್ರಪಕ್ಷಗಳು ಪರಸ್ಪರರನ್ನು ಬಿಟ್ಟುಕೊಟ್ಟಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅತೀವ ಮಳೆಯಿಂದ ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ಹಲವೆಡೆ ಬೆಳೆ ನಾಶವಾಗಿದೆ. ಸರ್ಕಾರವು ಹೆಕ್ಟೇರ್ಗೆ ₹25,000–₹30,000 ಪರಿಹಾರ ಘೋಷಿಸಬೇಕು’ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರಕ್ಕೆ ರೈತರು ಮತ್ತು ಜನರ ಬಗ್ಗೆ ಕಾಳಜಿಯೇ ಇಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರು ತಾವು ಓಡಾಡಲು ₹80 ಕೋಟಿಯ ಹೆಲಿಕಾಪ್ಟರ್ ಹಾಗೂ ₹150 ಕೋಟಿ ವೆಚ್ಚದಲ್ಲಿ ವಿಮಾನ ಖರೀದಿಸಲು ಮುಂದಾಗಿದ್ದಾರೆ. ಆದರೆ, ಅವರಿಗೆ ಮಳೆ ಸಂತ್ರಸ್ತರ ಬಗ್ಗೆ ಮಾತನಾಡಲು ಸಮಯವಿಲ್ಲ’ ಎಂದರು.</p>.<p>‘ಈ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನೆರೆ ಪೀಡಿತ ಪ್ರದೇಶಗಳಿಗೆ ಇದೇ 9 ರಿಂದ ಪ್ರವಾಸ ಕೈಗೊಳ್ಳಲಿದ್ದೇವೆ. ನಷ್ಟಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸರ್ಕಾರವು ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಕೃಷಿ ಸಚಿವರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ₹250 ಬೆಲೆಯ ಗೊಬ್ಬರವನ್ನು ₹1,000 ಕೊಟ್ಟು ರೈತರು ಖರೀದಿಸಿದ್ದಾರೆ. ಆದರೆ ಈ ಬಗ್ಗೆ ತಮಗೆ ಮಾಹಿತಿಯೇ ಇಲ್ಲ ಎಂದು ಕೃಷಿ ಸಚಿವರು ಹೇಳಿದ್ದಾರೆ. ಅವರು ರೈತರ ಪರವಾಗಿ ಹೇಗೆ ಕೆಲಸ ಮಾಡಬಹುದು ಎಂಬುದು ಈ ಮಾತಿನಿಂದ ಗೊತ್ತಾಗುತ್ತದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>‘ಜೆಡಿಎಸ್ ಮತ್ತು ಬಿಜೆಪಿ ಪ್ರತ್ಯೇಕ ಪಕ್ಷಗಳು. ಅವರ ಹೋರಾಟ ಅವರದ್ದು, ನಮ್ಮ ಹೋರಾಟ ನಮ್ಮದು. ಧರ್ಮಸ್ಥಳದ ವಿಚಾರದಲ್ಲಿ ಪ್ರತ್ಯೇಕ ಹೋರಾಟ ನಡೆಸಿದರೂ, ನಾವು ಒಟ್ಟಿಗೇ ಇದ್ದೇವೆ. ಧರ್ಮಸ್ಥಳ ಪರವಾದ ಹೋರಾಟದಲ್ಲಿ ಎರಡೂ ಮಿತ್ರಪಕ್ಷಗಳು ಪರಸ್ಪರರನ್ನು ಬಿಟ್ಟುಕೊಟ್ಟಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>