<p><strong>ಕಲಬುರಗಿ</strong>: 'ರಾಜ್ಯದಲ್ಲಿ ಮುಂಗಾರು ಮಳೆಯಿಂದ ಸಂಭವಿಸಿದ ಅತಿವೃಷ್ಟಿಯಿಂದ ರಾಜ್ಯದಲ್ಲಿ ಪ್ರಾಥಮಿಕ ವರದಿ ಪ್ರಕಾರ 9 ಲಕ್ಷ ಹೆಕ್ಟೇರಗಳಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ. ಈ ಭಾಗದ ನಾಲ್ಕು ಜಿಲ್ಲೆಗಳಲ್ಲೇ 6ರಿಂದ 7 ಲಕ್ಷ ಹೆಕ್ಟರಗಳಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p><p>ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದ ಸರ್ವೇ ನಂಬರ್ 92/1ರಲ್ಲಿನ ರೈತ ಸೋಮಶೇಖರ್ ಪೊಲೀಸ್ ಪಾಟೀಲ ಅವರ ಐದು ಎಕರೆ ತೊಗರಿ ಬೆಳೆ ಹಾನಿಯಾದ ಪ್ರದೇಶವನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ಪ್ರಕೃತಿ ವಿಕೋಪ ಯಾರ ಕೈಯಲ್ಲೂ ಇಲ್ಲ. ಬೆಳೆವಿಮೆ ಮಾಡಿದವರಿಗೆ ಪರಿಹಾರ ಸಿಗಲಿದೆ. ಜೊತೆಗೆ ವಿಮೆ ಮಾಡಿಸದ ರೈತರಿಗೂ ಸರ್ಕಾರದಿಂದ ಪರಿಹಾರ ನೀಡುವ ನಿಟ್ಟಿನಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಅವರೊಂದಿಗೆ ನಡೆಯುವ ಸಭೆಯ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: 'ರಾಜ್ಯದಲ್ಲಿ ಮುಂಗಾರು ಮಳೆಯಿಂದ ಸಂಭವಿಸಿದ ಅತಿವೃಷ್ಟಿಯಿಂದ ರಾಜ್ಯದಲ್ಲಿ ಪ್ರಾಥಮಿಕ ವರದಿ ಪ್ರಕಾರ 9 ಲಕ್ಷ ಹೆಕ್ಟೇರಗಳಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ. ಈ ಭಾಗದ ನಾಲ್ಕು ಜಿಲ್ಲೆಗಳಲ್ಲೇ 6ರಿಂದ 7 ಲಕ್ಷ ಹೆಕ್ಟರಗಳಷ್ಟು ಬೆಳೆ ಹಾನಿ ಅಂದಾಜಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p><p>ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದ ಸರ್ವೇ ನಂಬರ್ 92/1ರಲ್ಲಿನ ರೈತ ಸೋಮಶೇಖರ್ ಪೊಲೀಸ್ ಪಾಟೀಲ ಅವರ ಐದು ಎಕರೆ ತೊಗರಿ ಬೆಳೆ ಹಾನಿಯಾದ ಪ್ರದೇಶವನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p><p>ಪ್ರಕೃತಿ ವಿಕೋಪ ಯಾರ ಕೈಯಲ್ಲೂ ಇಲ್ಲ. ಬೆಳೆವಿಮೆ ಮಾಡಿದವರಿಗೆ ಪರಿಹಾರ ಸಿಗಲಿದೆ. ಜೊತೆಗೆ ವಿಮೆ ಮಾಡಿಸದ ರೈತರಿಗೂ ಸರ್ಕಾರದಿಂದ ಪರಿಹಾರ ನೀಡುವ ನಿಟ್ಟಿನಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಅವರೊಂದಿಗೆ ನಡೆಯುವ ಸಭೆಯ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>