<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಮುಂಗಾರು ಬೆಳೆಹಾನಿ ಆಗಿರುವ ಕುರಿತು ಒಂದು ವಾರದೊಳಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಪಶು ಸಂಗೋಪನೆ ಇಲಾಖೆಯ ನಿರ್ದೇಶಕ ಮಹೇಶ್ ಹೇಳಿದರು.</p>.<p>ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ ಕ್ರಾಸ್ ಬಳಿಯ ಹೊಲದಲ್ಲಿ ಹಾನಿಗೊಳಗಾಗಿರುವ ಹತ್ತಿ ಮತ್ತು ಸೂರ್ಯಕಾಂತಿ ಬೆಳೆಯನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.</p>.<p>ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.</p>.<p>ಬೆಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ನೀಡಿರುವ ಸಮಗ್ರ ವರದಿ ಹಾಗೂ ಕ್ಷೇತ್ರ ಭೇಟಿ ವೇಳೆ ಅಧ್ಯಯನ ತಂಡ ಕಂಡುಕೊಂಡ ಪರಿಸ್ಥಿತಿಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗುತ್ತದೆ.</p>.<p>ಬೆಂಗಳೂರಿನಲ್ಲಿ ಸೋಮವಾರ (ನ.19) ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಅಮಿತಾಭ ಗೌತಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಒಟ್ಟಾರೆ ರಾಜ್ಯದ ಪರಿಸ್ಥಿತಿ ಕ್ರೋಢೀಕರಿಸಿ ಸಿದ್ಧಪಡಿಸುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯನ್ನು ವಿವರಿಸಿದರು.</p>.<p>ಜಿಲ್ಲೆಯ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.</p>.<p>ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಶಿಡೋಣಿ ಗ್ರಾಮದ ಈರಬಸವ್ವ ಕೆಂಚನಗೌಡ್ರ ಅವರ 2.29 ಎಕರೆ ಜಮೀನಿನಲ್ಲಿ ನಾಶಗೊಂಡಿರುವ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು ಪರಿಶೀಲಿಸಿದರು.</p>.<p>ಈ ವೇಳೆ ಮಾತನಾಡಿದ ಈರಬಸವ್ವ ಕೆಂಚನಗೌಡ್ರ, ಬೀಜ, ಗೊಬ್ಬರ, ಬಿತ್ತನೆ ಆಳಿನ ಕೂಲಿ, ಕಳೆಕಸ ತೆಗೆಯಲು ಒಟ್ಟಾರೆ ಈ ಬಾರಿ ₹ 15,000 ಖರ್ಚಾಗಿದೆ. ಬೆಳೆ ನಷ್ಟದಿಂದ ಒಂದು ವರ್ಷದ ಶ್ರಮ ಮತ್ತು ಹಣ ಎರಡೂ ವ್ಯರ್ಥವಾಗಿದೆ. ಇದೇ ರೀತಿ ಕಳೆದ ಐದು ವರ್ಷದಿಂದ ಬರ ಪರಿಸ್ಥಿತಿಯಿಂದ ಬೆಳೆ ಹಾನಿಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.</p>.<p><strong>ಕೃಷಿ ಹೊಂಡದ ಭರವಸೆ:</strong> ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ತಂಡದ ಮುಖ್ಯಸ್ಥ ಮಹೇಶ್, ‘ಕೃಷಿ ಹೊಂಡ ನಿರ್ಮಿಸಿಕೊಂಡರೆ ಇಂತಹ ಪರಿಸ್ಥಿತಿ ಬರುವುದಿಲ್ಲ. ನೀವೇಕೆ ಹೊಂಡ ನಿರ್ಮಿಸಿಕೊಂಡಿಲ್ಲ’ ಎಂದು ಪ್ರಶ್ನಿಸಿದರು.</p>.<p>ಕುಟುಂಬದಲ್ಲಿ ಏಳು ಜನ ಅಕ್ಕ ತಂಗಿಯರು ಇರುವುದರಿಂದ ಈ ಬಗ್ಗೆ ಯೋಚಿಸಿಲ್ಲ ಎಂದು ಈರಬಸವ್ವ ಉತ್ತರಿಸಿದರು.</p>.<p>ಸ್ಥಳದಲ್ಲಿಯೇ ಉಪಸ್ಥಿತರಿದ್ದ ಶಾಸಕ ಆನಂದ ಮಾಮನಿ ಮತ್ತು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಕೂಡಲೇ ಕೃಷಿಹೊಂಡ ನಿರ್ಮಿಸಿ ಕೊಡುವ ಭರವಸೆಯನ್ನು ನೀಡಿದರು.</p>.<p>ಇದೇ ಸಂದರ್ಭದಲ್ಲಿ ಶಿವಪ್ಪ ಕೊಳ್ಳಿ ಅವರ ಜಮೀನಿನಲ್ಲಿ ಇರುವ ಹತ್ತಿ ಬೆಳೆಯನ್ನು ಪರಿಶೀಲಿಸಲಾಯಿತು. ಹತ್ತಿ ಬೆಳೆಗೆ ಮಾಡಿದ ಖರ್ಚುವೆಚ್ಚದ ಬಗ್ಗೆ ತಂಡವು ರೈತರಿಂದ ಮಾಹಿತಿ ಪಡೆದುಕೊಂಡಿತು.</p>.<p>ಮಹೇಶ್ ನೇತೃತ್ವದ ತಂಡದಲ್ಲಿ ಕೇಂದ್ರ ಜಲ ಆಯೋಗದ ನಿರ್ದೇಶಕ ಓ.ಆರ್.ಕೆ. ರೆಡ್ಡಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ನೀತಾ ತಹಿಲ್ಲಾನಿ ಇದ್ದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಮುಂಗಾರು ಬೆಳೆಹಾನಿ ಆಗಿರುವ ಕುರಿತು ಒಂದು ವಾರದೊಳಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಪಶು ಸಂಗೋಪನೆ ಇಲಾಖೆಯ ನಿರ್ದೇಶಕ ಮಹೇಶ್ ಹೇಳಿದರು.</p>.<p>ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ ಕ್ರಾಸ್ ಬಳಿಯ ಹೊಲದಲ್ಲಿ ಹಾನಿಗೊಳಗಾಗಿರುವ ಹತ್ತಿ ಮತ್ತು ಸೂರ್ಯಕಾಂತಿ ಬೆಳೆಯನ್ನು ಶನಿವಾರ ಪರಿಶೀಲಿಸಿದ ಬಳಿಕ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.</p>.<p>ಜಿಲ್ಲೆಯ ವಿವಿಧ ಕಡೆಗಳಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಾಗಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಯ ಪ್ರಕಾರ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.</p>.<p>ಬೆಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ನೀಡಿರುವ ಸಮಗ್ರ ವರದಿ ಹಾಗೂ ಕ್ಷೇತ್ರ ಭೇಟಿ ವೇಳೆ ಅಧ್ಯಯನ ತಂಡ ಕಂಡುಕೊಂಡ ಪರಿಸ್ಥಿತಿಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಲಾಗುತ್ತದೆ.</p>.<p>ಬೆಂಗಳೂರಿನಲ್ಲಿ ಸೋಮವಾರ (ನ.19) ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಅಮಿತಾಭ ಗೌತಮ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಒಟ್ಟಾರೆ ರಾಜ್ಯದ ಪರಿಸ್ಥಿತಿ ಕ್ರೋಢೀಕರಿಸಿ ಸಿದ್ಧಪಡಿಸುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ಜಿಲ್ಲೆಯಲ್ಲಿ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಯನ್ನು ವಿವರಿಸಿದರು.</p>.<p>ಜಿಲ್ಲೆಯ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಿದರು.</p>.<p>ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಶಿಡೋಣಿ ಗ್ರಾಮದ ಈರಬಸವ್ವ ಕೆಂಚನಗೌಡ್ರ ಅವರ 2.29 ಎಕರೆ ಜಮೀನಿನಲ್ಲಿ ನಾಶಗೊಂಡಿರುವ ಸೂರ್ಯಕಾಂತಿ ಬೆಳೆಯನ್ನು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು ಪರಿಶೀಲಿಸಿದರು.</p>.<p>ಈ ವೇಳೆ ಮಾತನಾಡಿದ ಈರಬಸವ್ವ ಕೆಂಚನಗೌಡ್ರ, ಬೀಜ, ಗೊಬ್ಬರ, ಬಿತ್ತನೆ ಆಳಿನ ಕೂಲಿ, ಕಳೆಕಸ ತೆಗೆಯಲು ಒಟ್ಟಾರೆ ಈ ಬಾರಿ ₹ 15,000 ಖರ್ಚಾಗಿದೆ. ಬೆಳೆ ನಷ್ಟದಿಂದ ಒಂದು ವರ್ಷದ ಶ್ರಮ ಮತ್ತು ಹಣ ಎರಡೂ ವ್ಯರ್ಥವಾಗಿದೆ. ಇದೇ ರೀತಿ ಕಳೆದ ಐದು ವರ್ಷದಿಂದ ಬರ ಪರಿಸ್ಥಿತಿಯಿಂದ ಬೆಳೆ ಹಾನಿಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.</p>.<p><strong>ಕೃಷಿ ಹೊಂಡದ ಭರವಸೆ:</strong> ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ತಂಡದ ಮುಖ್ಯಸ್ಥ ಮಹೇಶ್, ‘ಕೃಷಿ ಹೊಂಡ ನಿರ್ಮಿಸಿಕೊಂಡರೆ ಇಂತಹ ಪರಿಸ್ಥಿತಿ ಬರುವುದಿಲ್ಲ. ನೀವೇಕೆ ಹೊಂಡ ನಿರ್ಮಿಸಿಕೊಂಡಿಲ್ಲ’ ಎಂದು ಪ್ರಶ್ನಿಸಿದರು.</p>.<p>ಕುಟುಂಬದಲ್ಲಿ ಏಳು ಜನ ಅಕ್ಕ ತಂಗಿಯರು ಇರುವುದರಿಂದ ಈ ಬಗ್ಗೆ ಯೋಚಿಸಿಲ್ಲ ಎಂದು ಈರಬಸವ್ವ ಉತ್ತರಿಸಿದರು.</p>.<p>ಸ್ಥಳದಲ್ಲಿಯೇ ಉಪಸ್ಥಿತರಿದ್ದ ಶಾಸಕ ಆನಂದ ಮಾಮನಿ ಮತ್ತು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಕೂಡಲೇ ಕೃಷಿಹೊಂಡ ನಿರ್ಮಿಸಿ ಕೊಡುವ ಭರವಸೆಯನ್ನು ನೀಡಿದರು.</p>.<p>ಇದೇ ಸಂದರ್ಭದಲ್ಲಿ ಶಿವಪ್ಪ ಕೊಳ್ಳಿ ಅವರ ಜಮೀನಿನಲ್ಲಿ ಇರುವ ಹತ್ತಿ ಬೆಳೆಯನ್ನು ಪರಿಶೀಲಿಸಲಾಯಿತು. ಹತ್ತಿ ಬೆಳೆಗೆ ಮಾಡಿದ ಖರ್ಚುವೆಚ್ಚದ ಬಗ್ಗೆ ತಂಡವು ರೈತರಿಂದ ಮಾಹಿತಿ ಪಡೆದುಕೊಂಡಿತು.</p>.<p>ಮಹೇಶ್ ನೇತೃತ್ವದ ತಂಡದಲ್ಲಿ ಕೇಂದ್ರ ಜಲ ಆಯೋಗದ ನಿರ್ದೇಶಕ ಓ.ಆರ್.ಕೆ. ರೆಡ್ಡಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ನೀತಾ ತಹಿಲ್ಲಾನಿ ಇದ್ದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>