ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಬೆಳೆಹಾನಿ ಕುರಿತು 16 ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಎಸ್ಪಿಗಳ ಜತೆಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ, ‘ಅಕ್ಟೋಬರ್ ತಿಂಗಳಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿ, ತಿಂಗಳೊಳಗೆ ಪರಿಹಾರ ವಿತರಿಸಬೇಕು’ ಎಂದು ಸೂಚಿಸಿದರು.