<p><strong>ಮೈಸೂರು</strong>: ‘ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದುವರೆಗೂ 20 ಮಂದಿ ಮೃತಪಟ್ಟಿದ್ದಾರೆ. ಮಳೆ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದ್ದು, ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮಳೆ ಹೆಚ್ಚಾಗಿ, ನಷ್ಟವಾದರೆ ಪರಿಹಾರ ಕೇಳುತ್ತೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. </p>.<p>ನಗರದಲ್ಲಿ ಮಂಗಳವಾರ ಕಂದಾಯ ಇಲಾಖೆ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ಅತಿವೃಷ್ಟಿಯಾಗುವ 1,763 ಸಂಭವನೀಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಲಾಗಿದೆ. ವಿಪತ್ತು ನಿರ್ವಹಿಸಲು ಟಾಸ್ಕ್ಫೋರ್ಸ್ ರಚನೆಗೆ ಸೂಚಿಸಲಾಗಿದೆ’ ಎಂದರು.</p>.<p>‘ಪಂಚಾಯಿತಿ, ಕಂದಾಯ ಇಲಾಖೆ ಅಧಿಕಾರಿಗಳು, ಎಂಜಿನಿಯರುಗಳು, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಸಣ್ಣ ನೀರಾವರಿ ಇಲಾಖೆ ಸಿಬ್ಬಂದಿ ಟಾಸ್ಕ್ಫೋರ್ಸ್ನಲ್ಲಿರಲಿದ್ದಾರೆ. ಸಂಭವನೀಯ ಅತಿವೃಷ್ಟಿ ಗ್ರಾಮಗಳಿಗೆ ಭೇಟಿ ನೀಡಿ ಅಣಕು ಕಾರ್ಯಾಚರಣೆ ಮಾಡಲಿದ್ದಾರೆ’ ಎಂದರು.</p>.<p>₹ 777 ಕೋಟಿ ಬಿಡುಗಡೆ: ‘ವಿಪತ್ತು ನಿರ್ವಹಣೆಗಾಗಿ ₹ 777 ಕೋಟಿ ಹಣವನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಖಾತೆಗಳಿಗೆ ವಿತರಿಸಲಾಗಿದೆ. ಎರಡ್ಮೂರು ದಿನ ಸತತ ಮಳೆಯಾಗುವ ಮುನ್ಸೂಚನೆ ಬಂದಾಗ ಗ್ರಾಮದಲ್ಲಿಯೇ ತಂಡವು ಮೊಕ್ಕಾಂ ಹೂಡಲು ಹಾಗೂ ಅವಶ್ಯಕತೆ ಇದ್ದರೆ ಕಾಳಜಿ ಕೇಂದ್ರ ತೆರೆಯಲು ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ, ಬೆಂಗಳೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತುಕಡಿ ಹಾಗೂ ಬೆಂಗಳೂರು, ದಾವಣಗೆರೆ, ಬೆಳಗಾವಿ, ಕಲಬುರಗಿ, ಮೈಸೂರಿನಲ್ಲಿ ಎಸ್ಟಿಆರ್ಎಫ್ ತುಕಡಿಗಳನ್ನು ಇರಿಸಲಾಗಿದೆ. ಜವಾಬ್ದಾರಿಯುತ ಸರ್ಕಾರವಾಗಿ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ’ ಎಂದರು. </p>.<p><strong>ಜುಲೈ ಅಂತ್ಯಕ್ಕೆ ಸರ್ವೆ ಪೂರ್ಣ</strong>: ‘ರಾಜ್ಯದಲ್ಲಿ ಸರ್ಕಾರಿ ಜಾಗಗಳ ರಕ್ಷಿಸಲು ಸರ್ವೆ ಆರಂಭಿಸಲಾಗಿದ್ದು, ಒಟ್ಟು 14 ಲಕ್ಷ ಸರ್ಕಾರಿ ಜಾಗಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಒತ್ತುವರಿ ಎಷ್ಟಾಗಿದೆಯೆಂಬ ಸರ್ವೆ ಶುರುವಾಗಿದೆ. ಇದೇ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಒತ್ತುವರಿ ತೆರವು ನಂತರ ನಡೆಸಲಾಗುವುದು’ ಎಂದರು.</p>.<p><strong>‘ಮಠದಲ್ಲಿ ಹೇಳಬಹುದಿತ್ತು’</strong></p><p>ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕೆಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕೃಷ್ಣ ಬೈರೇಗೌಡ ಪ್ರತ್ರಿಕ್ರಿಯಿಸಿ ‘ಅದು ಸರಿಯೋ ತಪ್ಪೋ ಎಂದು ವ್ಯಾಖ್ಯಾನಿಸಲಾರೆ. ಆದರೆ ಸ್ವಾಮೀಜಿ ಮಠದಲ್ಲಿ ಹೇಳಿಕೆ ಕೊಡಬಹುದಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಬೆರೆಸುವುದು ಉಚಿತವಲ್ಲ’ ಎಂದರು.</p><p>‘ಉಪಮುಖ್ಯಮಂತ್ರಿ ಹುದ್ದೆ ಬೇಕಿದ್ದರೆ ವರಿಷ್ಠರ ಬಳಿ ಮಾತನಾಡಬೇಕು. ಸಾರ್ವಜನಿಕವಾಗಿ ಅಲ್ಲ. ನಮ್ಮದೇ ಸಮಸ್ಯೆ ಹೇಳುತ್ತಾ ಕುಳಿತರೇ ಜನರ ಸಮಸ್ಯೆ ಬಗೆಹರಿಸುವುದು ಯಾರು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದುವರೆಗೂ 20 ಮಂದಿ ಮೃತಪಟ್ಟಿದ್ದಾರೆ. ಮಳೆ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದ್ದು, ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮಳೆ ಹೆಚ್ಚಾಗಿ, ನಷ್ಟವಾದರೆ ಪರಿಹಾರ ಕೇಳುತ್ತೇವೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. </p>.<p>ನಗರದಲ್ಲಿ ಮಂಗಳವಾರ ಕಂದಾಯ ಇಲಾಖೆ ಮೈಸೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ಅತಿವೃಷ್ಟಿಯಾಗುವ 1,763 ಸಂಭವನೀಯ ಗ್ರಾಮಗಳನ್ನು ಗುರುತಿಸಲಾಗಿದ್ದು, ಆಯಾ ಜಿಲ್ಲಾಡಳಿತಕ್ಕೆ ಪಟ್ಟಿ ನೀಡಲಾಗಿದೆ. ವಿಪತ್ತು ನಿರ್ವಹಿಸಲು ಟಾಸ್ಕ್ಫೋರ್ಸ್ ರಚನೆಗೆ ಸೂಚಿಸಲಾಗಿದೆ’ ಎಂದರು.</p>.<p>‘ಪಂಚಾಯಿತಿ, ಕಂದಾಯ ಇಲಾಖೆ ಅಧಿಕಾರಿಗಳು, ಎಂಜಿನಿಯರುಗಳು, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಸಣ್ಣ ನೀರಾವರಿ ಇಲಾಖೆ ಸಿಬ್ಬಂದಿ ಟಾಸ್ಕ್ಫೋರ್ಸ್ನಲ್ಲಿರಲಿದ್ದಾರೆ. ಸಂಭವನೀಯ ಅತಿವೃಷ್ಟಿ ಗ್ರಾಮಗಳಿಗೆ ಭೇಟಿ ನೀಡಿ ಅಣಕು ಕಾರ್ಯಾಚರಣೆ ಮಾಡಲಿದ್ದಾರೆ’ ಎಂದರು.</p>.<p>₹ 777 ಕೋಟಿ ಬಿಡುಗಡೆ: ‘ವಿಪತ್ತು ನಿರ್ವಹಣೆಗಾಗಿ ₹ 777 ಕೋಟಿ ಹಣವನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಖಾತೆಗಳಿಗೆ ವಿತರಿಸಲಾಗಿದೆ. ಎರಡ್ಮೂರು ದಿನ ಸತತ ಮಳೆಯಾಗುವ ಮುನ್ಸೂಚನೆ ಬಂದಾಗ ಗ್ರಾಮದಲ್ಲಿಯೇ ತಂಡವು ಮೊಕ್ಕಾಂ ಹೂಡಲು ಹಾಗೂ ಅವಶ್ಯಕತೆ ಇದ್ದರೆ ಕಾಳಜಿ ಕೇಂದ್ರ ತೆರೆಯಲು ಸೂಚಿಸಲಾಗಿದೆ’ ಎಂದು ಹೇಳಿದರು.</p>.<p>‘ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ, ಬೆಂಗಳೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತುಕಡಿ ಹಾಗೂ ಬೆಂಗಳೂರು, ದಾವಣಗೆರೆ, ಬೆಳಗಾವಿ, ಕಲಬುರಗಿ, ಮೈಸೂರಿನಲ್ಲಿ ಎಸ್ಟಿಆರ್ಎಫ್ ತುಕಡಿಗಳನ್ನು ಇರಿಸಲಾಗಿದೆ. ಜವಾಬ್ದಾರಿಯುತ ಸರ್ಕಾರವಾಗಿ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ’ ಎಂದರು. </p>.<p><strong>ಜುಲೈ ಅಂತ್ಯಕ್ಕೆ ಸರ್ವೆ ಪೂರ್ಣ</strong>: ‘ರಾಜ್ಯದಲ್ಲಿ ಸರ್ಕಾರಿ ಜಾಗಗಳ ರಕ್ಷಿಸಲು ಸರ್ವೆ ಆರಂಭಿಸಲಾಗಿದ್ದು, ಒಟ್ಟು 14 ಲಕ್ಷ ಸರ್ಕಾರಿ ಜಾಗಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ಒತ್ತುವರಿ ಎಷ್ಟಾಗಿದೆಯೆಂಬ ಸರ್ವೆ ಶುರುವಾಗಿದೆ. ಇದೇ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಒತ್ತುವರಿ ತೆರವು ನಂತರ ನಡೆಸಲಾಗುವುದು’ ಎಂದರು.</p>.<p><strong>‘ಮಠದಲ್ಲಿ ಹೇಳಬಹುದಿತ್ತು’</strong></p><p>ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕೆಂಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕೃಷ್ಣ ಬೈರೇಗೌಡ ಪ್ರತ್ರಿಕ್ರಿಯಿಸಿ ‘ಅದು ಸರಿಯೋ ತಪ್ಪೋ ಎಂದು ವ್ಯಾಖ್ಯಾನಿಸಲಾರೆ. ಆದರೆ ಸ್ವಾಮೀಜಿ ಮಠದಲ್ಲಿ ಹೇಳಿಕೆ ಕೊಡಬಹುದಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಬೆರೆಸುವುದು ಉಚಿತವಲ್ಲ’ ಎಂದರು.</p><p>‘ಉಪಮುಖ್ಯಮಂತ್ರಿ ಹುದ್ದೆ ಬೇಕಿದ್ದರೆ ವರಿಷ್ಠರ ಬಳಿ ಮಾತನಾಡಬೇಕು. ಸಾರ್ವಜನಿಕವಾಗಿ ಅಲ್ಲ. ನಮ್ಮದೇ ಸಮಸ್ಯೆ ಹೇಳುತ್ತಾ ಕುಳಿತರೇ ಜನರ ಸಮಸ್ಯೆ ಬಗೆಹರಿಸುವುದು ಯಾರು’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>