<p><strong>ಬೆಳಗಾವಿ (ಸುವರ್ಣ ಸೌಧ):</strong> ಸಿ.ಟಿ. ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ನೀಡಿದ ದೂರಿನ ಕುರಿತು ಸದನದಲ್ಲಿ ರೂಲಿಂಗ್ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದರು.</p><p>ರವಿ ಅವರು ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಮಾಡಿರುವ ಆರೋಪಕ್ಕೆ ಸದಸ್ಯರಾದ ಉಮಾಶ್ರೀ, ಬಲ್ಕೀಸ್ ಬಾನು, ನಾಗರಾಜ್ ಯಾದವ್ ಸಾಕ್ಷ್ಯ ನುಡಿದಿದ್ದಾರೆ. ಪೀಠ ಇಂತಹ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದರು.</p>.CT ರವಿ ಅವಾಚ್ಯ ಪದ ಬಳಕೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ದೂರು ನೀಡಿದ್ದಾರೆ– ಸಿಎಂ.<p>ಪ್ರತಿಯೊಬ್ಬರೂ ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗಿನ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಅಸಾಂವಿಧಾನಿಕ ಪದಗಳ ಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲು ಅವಕಾಶ ನೀಡಬಾರದು ಎಂದರು.</p><p>ಸಿ.ಟಿ. ರವಿ ವಿರುದ್ಧ ಹಲ್ಲೆಗೆ ಯತ್ನ ನಡೆಸಿದ ಪ್ರಕರಣ ಕುರಿತು ಬಿಜೆಪಿ–ಜೆಡಿಎಸ್ ಸದಸ್ಯರು ನೀಡಿದ ದೂರುಗಳ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂದರು.</p><p>ಸಿ.ಟಿ. ರವಿ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದ ಲಕ್ಷ್ಮೀ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ಮತ್ತೆ ಆಕ್ರೋಶ ಹೊರಹಾಕಿದರು.</p>.CT Ravi Arrest | ಮಾನಹಾನಿ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ಸೌಧ):</strong> ಸಿ.ಟಿ. ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ನೀಡಿದ ದೂರಿನ ಕುರಿತು ಸದನದಲ್ಲಿ ರೂಲಿಂಗ್ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಸಲಹೆ ನೀಡಿದರು.</p><p>ರವಿ ಅವರು ವಿರುದ್ಧ ಲಕ್ಷ್ಮಿ ಹೆಬ್ಬಾಳಕರ ಮಾಡಿರುವ ಆರೋಪಕ್ಕೆ ಸದಸ್ಯರಾದ ಉಮಾಶ್ರೀ, ಬಲ್ಕೀಸ್ ಬಾನು, ನಾಗರಾಜ್ ಯಾದವ್ ಸಾಕ್ಷ್ಯ ನುಡಿದಿದ್ದಾರೆ. ಪೀಠ ಇಂತಹ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದರು.</p>.CT ರವಿ ಅವಾಚ್ಯ ಪದ ಬಳಕೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ದೂರು ನೀಡಿದ್ದಾರೆ– ಸಿಎಂ.<p>ಪ್ರತಿಯೊಬ್ಬರೂ ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಹಾಗೂ ಹೊರಗಿನ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು. ಅಸಾಂವಿಧಾನಿಕ ಪದಗಳ ಬಳಕೆ ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಲು ಅವಕಾಶ ನೀಡಬಾರದು ಎಂದರು.</p><p>ಸಿ.ಟಿ. ರವಿ ವಿರುದ್ಧ ಹಲ್ಲೆಗೆ ಯತ್ನ ನಡೆಸಿದ ಪ್ರಕರಣ ಕುರಿತು ಬಿಜೆಪಿ–ಜೆಡಿಎಸ್ ಸದಸ್ಯರು ನೀಡಿದ ದೂರುಗಳ ಕುರಿತು ಪ್ರಸ್ತಾಪಿಸಿದ ಅವರು, ಇಂತಹ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂದರು.</p><p>ಸಿ.ಟಿ. ರವಿ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದ ಲಕ್ಷ್ಮೀ ಹೆಬ್ಬಾಳಕರ ಹಾಗೂ ಕಾಂಗ್ರೆಸ್ ಸದಸ್ಯರು ಮತ್ತೆ ಆಕ್ರೋಶ ಹೊರಹಾಕಿದರು.</p>.CT Ravi Arrest | ಮಾನಹಾನಿ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>