<p><strong>ಬೆಂಗಳೂರು:</strong> ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಖುದ್ದಾಗಿ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು(ಶುಕ್ರವಾರ) ಬೆಂಗಳೂರಿಗೆ ಬಂದಿದ್ದಾರೆ.</p> <p>ರಾಜ್ಯಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ.</p> <ul><li><p>ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಮಾಡಿ ರಾಜೀನಾಮೆ ನೀಡಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಪಕ್ಷದಿಂದ ಯಾವಾಗ ಉಚ್ಛಾಟಿಸುತ್ತೀರಿ?.</p></li><li><p> ಎಲ್ಲವನ್ನು ನುಂಗುವ ಪ್ರಾಚೀನ 'ಸಿದ್ದ ಹಸ್ತ' ಕಲೆಯನ್ನು ಕರಗತ ಮಾಡಿಕೊಂಡ ನಿಮ್ಮದು 100% ಭ್ರಷ್ಟ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುತ್ತೀರಾ?.</p></li><li><p>ಭ್ರಷ್ಟಾಚಾರ ತಮ್ಮ ಮೂಗಿನ ಕೆಳಗೆ ನಡೆಯುತ್ತಿರುವಾಗ ಜಾಣ ಕುರುಡನಂತೆ ವರ್ತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಿಮ್ಮ ಕ್ರಮ ಏನು?.</p></li><li><p>ಶಿಕ್ಷಣ ಮಂತ್ರಿ 5,8 ಮತ್ತು 9 ನೇ ತರಗತಿಯ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇವರ ಬದಲಾವಣೆ ಎಂದು?.</p></li><li><p>ಲೋಕಸಭಾ ಚುನಾವಣೆಯಲ್ಲಿ ತಮ್ಮ ಜಿಲ್ಲೆಯಲ್ಲಿ ಮುನ್ನಡೆ ಕೊಡಿಸಲು ವಿಫಲವಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 17 ಸಚಿವರ ವಿರುದ್ದ ಕ್ರಮ ಯಾವಾಗ ತೆಗೆದುಕೊಳ್ಳುತ್ತೀರಿ? .</p></li><li><p>ರಾಜ್ಯದ ಅಭಿವೃದ್ಧಿಯನ್ನು ನಿಮ್ಮ ಮತಬ್ಯಾಂಕ್ ರಾಜಕೀಯಕ್ಕಾಗಿ ಬಲಿಕೊಟ್ಟಿದ್ದೀರಿ. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಲ್ಲಿ ಹಿನ್ನಡೆಯಾಗಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಇದಕ್ಕೆ ಯಾರು ಹೊಣೆ?.</p></li><li><p> ಅನೇಕ ಉದ್ದಿಮೆಗಳು ನೆರೆ ರಾಜ್ಯಗಳ ಪಾಲಾಗಿ ರಾಜ್ಯದ ಯುವಕರು ಉದ್ಯೋಗ ವಂಚಿತರಾಗಿದ್ದಾರೆ. ನಿಮ್ಮ ಸರ್ಕಾರದ ನಿಷ್ಕ್ರಿಯತೆಗೆ ರಾಜ್ಯದ ಕ್ಷಮೆಯಾಚಿಸುತ್ತೀರಾ?.</p></li><li><p>ರಾಜ್ಯದಲ್ಲಿ ಸರ್ಕಾರವನ್ನು ಟೀಕಿಸಿದವರನ್ನು ಬಂಧಿಸಿ, ಅಭಿಪ್ರಾಯ ಸ್ವಾತಂತ್ರ ಹತ್ತಿಕ್ಕಿ, ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ದವಾಗಿ ನಿಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಇದರ ಬಗ್ಗೆ ನಿಮ್ಮ ಅಭಿಪ್ರಾಯ?</p></li></ul><p>ಇನ್ನೂ ಹಲವು ಪ್ರಶ್ನೆಗಳು ಇವೆ, ಸದ್ಯಕ್ಕೆ ಈ ಕೆಲ ಪ್ರಶ್ನೆಗಳಿಗೆ ಉತ್ತರಿಸುವಿರೇ? ಎಂದು ಸಿ.ಟಿ. ರವಿ ಪ್ರಶ್ನಿಸಿದ್ದಾರೆ.</p>.ಸುಳ್ಳು ಜಾಹೀರಾತು ಪ್ರಕರಣ: ಕೋರ್ಟ್ಗೆ ಹಾಜರಾಗಲು ಬೆಂಗಳೂರಿಗೆ ಬಂದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಖುದ್ದಾಗಿ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು(ಶುಕ್ರವಾರ) ಬೆಂಗಳೂರಿಗೆ ಬಂದಿದ್ದಾರೆ.</p> <p>ರಾಜ್ಯಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ.</p> <ul><li><p>ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಮಾಡಿ ರಾಜೀನಾಮೆ ನೀಡಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಪಕ್ಷದಿಂದ ಯಾವಾಗ ಉಚ್ಛಾಟಿಸುತ್ತೀರಿ?.</p></li><li><p> ಎಲ್ಲವನ್ನು ನುಂಗುವ ಪ್ರಾಚೀನ 'ಸಿದ್ದ ಹಸ್ತ' ಕಲೆಯನ್ನು ಕರಗತ ಮಾಡಿಕೊಂಡ ನಿಮ್ಮದು 100% ಭ್ರಷ್ಟ ಸರ್ಕಾರ ಎಂಬುದನ್ನು ಒಪ್ಪಿಕೊಳ್ಳುತ್ತೀರಾ?.</p></li><li><p>ಭ್ರಷ್ಟಾಚಾರ ತಮ್ಮ ಮೂಗಿನ ಕೆಳಗೆ ನಡೆಯುತ್ತಿರುವಾಗ ಜಾಣ ಕುರುಡನಂತೆ ವರ್ತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಿಮ್ಮ ಕ್ರಮ ಏನು?.</p></li><li><p>ಶಿಕ್ಷಣ ಮಂತ್ರಿ 5,8 ಮತ್ತು 9 ನೇ ತರಗತಿಯ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇವರ ಬದಲಾವಣೆ ಎಂದು?.</p></li><li><p>ಲೋಕಸಭಾ ಚುನಾವಣೆಯಲ್ಲಿ ತಮ್ಮ ಜಿಲ್ಲೆಯಲ್ಲಿ ಮುನ್ನಡೆ ಕೊಡಿಸಲು ವಿಫಲವಾಗಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 17 ಸಚಿವರ ವಿರುದ್ದ ಕ್ರಮ ಯಾವಾಗ ತೆಗೆದುಕೊಳ್ಳುತ್ತೀರಿ? .</p></li><li><p>ರಾಜ್ಯದ ಅಭಿವೃದ್ಧಿಯನ್ನು ನಿಮ್ಮ ಮತಬ್ಯಾಂಕ್ ರಾಜಕೀಯಕ್ಕಾಗಿ ಬಲಿಕೊಟ್ಟಿದ್ದೀರಿ. ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಲ್ಲಿ ಹಿನ್ನಡೆಯಾಗಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಇದಕ್ಕೆ ಯಾರು ಹೊಣೆ?.</p></li><li><p> ಅನೇಕ ಉದ್ದಿಮೆಗಳು ನೆರೆ ರಾಜ್ಯಗಳ ಪಾಲಾಗಿ ರಾಜ್ಯದ ಯುವಕರು ಉದ್ಯೋಗ ವಂಚಿತರಾಗಿದ್ದಾರೆ. ನಿಮ್ಮ ಸರ್ಕಾರದ ನಿಷ್ಕ್ರಿಯತೆಗೆ ರಾಜ್ಯದ ಕ್ಷಮೆಯಾಚಿಸುತ್ತೀರಾ?.</p></li><li><p>ರಾಜ್ಯದಲ್ಲಿ ಸರ್ಕಾರವನ್ನು ಟೀಕಿಸಿದವರನ್ನು ಬಂಧಿಸಿ, ಅಭಿಪ್ರಾಯ ಸ್ವಾತಂತ್ರ ಹತ್ತಿಕ್ಕಿ, ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ದವಾಗಿ ನಿಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಇದರ ಬಗ್ಗೆ ನಿಮ್ಮ ಅಭಿಪ್ರಾಯ?</p></li></ul><p>ಇನ್ನೂ ಹಲವು ಪ್ರಶ್ನೆಗಳು ಇವೆ, ಸದ್ಯಕ್ಕೆ ಈ ಕೆಲ ಪ್ರಶ್ನೆಗಳಿಗೆ ಉತ್ತರಿಸುವಿರೇ? ಎಂದು ಸಿ.ಟಿ. ರವಿ ಪ್ರಶ್ನಿಸಿದ್ದಾರೆ.</p>.ಸುಳ್ಳು ಜಾಹೀರಾತು ಪ್ರಕರಣ: ಕೋರ್ಟ್ಗೆ ಹಾಜರಾಗಲು ಬೆಂಗಳೂರಿಗೆ ಬಂದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>