<p><strong>ಮೈಸೂರು</strong>: ‘ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್ಸಿ) ವರ್ತನೆಯು ಪಾಕಿಸ್ತಾನ್ ನ್ಯಾಷನಲ್ ಕಾಂಗ್ರೆಸ್ (ಪಿ.ಎನ್.ಸಿ) ರೀತಿ ಇದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯರ ಹೇಳಿಕೆಗಳನ್ನೇ ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ಬಳಸಿಕೊಳ್ಳುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ದೂರಿದರು.</p><p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಪಾಕಿಸ್ತಾನಿಯರಿಗೆ ಅವರ ನಾಯಕರ ಮೇಲೆ ವಿಶ್ವಾಸವಿಲ್ಲ. ಅವರಿಗೆ ಇರುವ ಏಕೈಕ ಭರವಸೆ ರಾಹುಲ್ ಗಾಂಧಿ. <br>ಸಿದ್ದರಾಮಯ್ಯ ಕೂಡ ಈಗೀಗ ಪಾಕಿಸ್ತಾನದಲ್ಲಿ ಜನಪ್ರಿಯ ಆಗುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p><p>‘ ರಾಹುಲ್ ಗಾಂಧಿಗೆ ಕರ್ನಾಟಕವೇ ಎಟಿಎಂ. ಅಸಹಾಯಕ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಲೇ ಬೇಕು. ಸಿದ್ದು ಕುರ್ಚಿ ಉಳಿಸಿಕೊಳ್ಳಲು ಹಣ ಕೊಟ್ಟರೆ, ಡಿ.ಕೆ. ಶಿವಕುಮಾರ್ ಕುರ್ಚಿ ಗಳಿಸಲು ಕೊಡುತ್ತಿದ್ದಾರೆ’ ಎಂದು ಟೀಕಿಸಿದರು.</p><p>‘ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡು ವರ್ಷವೂ ರಾಜ್ಯದ ಪಾಲಿಗೆ ಕರಾಳ ದಿನ. ಈ ಅವಧಿಯಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ್ಲಿ 736 ಬಾಣಂತಿಯರು, 1100ಕ್ಕೂ ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೆಲ್ಲ ಸಂಭ್ರಮಿಸುವ ಸಂಗತಿಗಳ?’ ಎಂದು ಪ್ರಶ್ನಿಸಿದರು.</p><p>‘ ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು. ಅವರ ಮನೆತನದ ಆದಾಯ ಹೆಚ್ಚಾಗಿದೆ. ಸರ್ಕಾರದ ಸಾಲವೂ ಜಾಸ್ತಿ ಆಗುತ್ತಿದೆ. ರಾಜ್ಯದ ₹7.64 ಲಕ್ಷ ಕೋಟಿ ಸಾಲದ ಪೈಕಿ ಸಿದ್ದರಾಮಯ್ಯ ಒಬ್ಬರೆ ₹4 ಲಕ್ಷ ಕೋಟಿ ಸಾಲ ಮಾಡಿದ್ದಾರೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್ಸಿ) ವರ್ತನೆಯು ಪಾಕಿಸ್ತಾನ್ ನ್ಯಾಷನಲ್ ಕಾಂಗ್ರೆಸ್ (ಪಿ.ಎನ್.ಸಿ) ರೀತಿ ಇದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯರ ಹೇಳಿಕೆಗಳನ್ನೇ ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ಬಳಸಿಕೊಳ್ಳುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ದೂರಿದರು.</p><p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಪಾಕಿಸ್ತಾನಿಯರಿಗೆ ಅವರ ನಾಯಕರ ಮೇಲೆ ವಿಶ್ವಾಸವಿಲ್ಲ. ಅವರಿಗೆ ಇರುವ ಏಕೈಕ ಭರವಸೆ ರಾಹುಲ್ ಗಾಂಧಿ. <br>ಸಿದ್ದರಾಮಯ್ಯ ಕೂಡ ಈಗೀಗ ಪಾಕಿಸ್ತಾನದಲ್ಲಿ ಜನಪ್ರಿಯ ಆಗುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p><p>‘ ರಾಹುಲ್ ಗಾಂಧಿಗೆ ಕರ್ನಾಟಕವೇ ಎಟಿಎಂ. ಅಸಹಾಯಕ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಸರ್ಕಾರವನ್ನು ಹೊಗಳಲೇ ಬೇಕು. ಸಿದ್ದು ಕುರ್ಚಿ ಉಳಿಸಿಕೊಳ್ಳಲು ಹಣ ಕೊಟ್ಟರೆ, ಡಿ.ಕೆ. ಶಿವಕುಮಾರ್ ಕುರ್ಚಿ ಗಳಿಸಲು ಕೊಡುತ್ತಿದ್ದಾರೆ’ ಎಂದು ಟೀಕಿಸಿದರು.</p><p>‘ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡು ವರ್ಷವೂ ರಾಜ್ಯದ ಪಾಲಿಗೆ ಕರಾಳ ದಿನ. ಈ ಅವಧಿಯಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ್ಲಿ 736 ಬಾಣಂತಿಯರು, 1100ಕ್ಕೂ ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ. 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೆಲ್ಲ ಸಂಭ್ರಮಿಸುವ ಸಂಗತಿಗಳ?’ ಎಂದು ಪ್ರಶ್ನಿಸಿದರು.</p><p>‘ ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು. ಅವರ ಮನೆತನದ ಆದಾಯ ಹೆಚ್ಚಾಗಿದೆ. ಸರ್ಕಾರದ ಸಾಲವೂ ಜಾಸ್ತಿ ಆಗುತ್ತಿದೆ. ರಾಜ್ಯದ ₹7.64 ಲಕ್ಷ ಕೋಟಿ ಸಾಲದ ಪೈಕಿ ಸಿದ್ದರಾಮಯ್ಯ ಒಬ್ಬರೆ ₹4 ಲಕ್ಷ ಕೋಟಿ ಸಾಲ ಮಾಡಿದ್ದಾರೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>