ಕೃಷ್ಣ ಬೈರೇಗೌಡ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬಹಿರಂಗ ಚರ್ಚೆಗೆ ಕರೆದಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತು ಮತ್ತು ರಾಜ್ಯಸಭೆಯಲ್ಲೇ ಈ ಬಗ್ಗೆ ಸುದೀರ್ಘ ಉತ್ತರ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಹಾಜರಿದ್ದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೈರಾಂ ರಮೇಶ್ ಅವರು ಕೇಂದ್ರದ ಮಾಹಿತಿಯ ಬಗ್ಗೆ ಏಕೆ ತಕರಾರು ಎತ್ತಲಿಲ್ಲ. ಸುಮ್ಮನೇ ಏಕೆ ಕುಳಿತಿದ್ದರು. ಒಂದು ವೇಳೆ ನಿರ್ಮಲಾ ಸೀತಾರಾಮನ್ ಅವರು ತಪ್ಪು ಮಾಹಿತಿ ನೀಡಿದ್ದರೆ ಹಕ್ಕುಚ್ಯುತಿ ಮಂಡಿಸುವುದಕ್ಕೂ ಅವಕಾಶವಿತ್ತಲ್ಲವೇ ಎಂದು ಪ್ರಶ್ನಿಸಿದರು.