ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಹೇಳಿಕೆಯ ಜೊತೆಗೆ ಯೋಜನೆಗಳನ್ನು ಜಾರಿಗೊಳಿಸಿದ ಮೋದಿ ಅವರು ಯಾರಿಗೂ ಅಭಿವೃದ್ಧಿ ಯೋಜನೆಯಲ್ಲಿ ದೋಖಾ ಮಾಡಿಲ್ಲ. ತಾರತಮ್ಯ ಮಾಡದೇ ಎಲ್ಲರಿಗೂ ಎಲ್ಲ ಸೌಲಭ್ಯಗಳನ್ನು ತಲುಪಿಸಿದ್ದಾರೆ. ಆದರೂ ಕೆಲವರು ಬಿಜೆಪಿಗೆ ಮತ ಹಾಕಿಲ್ಲ. ಅದಕ್ಕೆ ಮತೀಯ ಕಾರಣವಿದ್ದರೆ ತಪ್ಪಲ್ಲವೇ’ ಎಂದು ಪ್ರಶ್ನಿಸಿದರು.