ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಿರುವ ಗ್ರಾಮ ಪಂಚಾಯಿತಿ ಆಡಳಿತ ಪಕ್ಷಾತಾತೀತವಾಗಿ ಮತ್ತು ಬದ್ಧತೆಯಿಂದ ಕೆಲಸ ಮಾಡಿದೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಉತ್ತರದಾಯಿಯಾಗಿ ಕೆಲಸ ಮಾಡಿದೆ. ಹೀಗಾಗಿ, ಆಡಳಿತಾಧಿಕಾರಿ ನೇಮಿಸುವಬದಲು, ಸ್ಥಳೀಯ ಸರ್ಕಾರವನ್ನೇ ಮಧ್ಯಂತರ ಸ್ಥಳೀಯ ಸ್ವಯಂ ಸರ್ಕಾರವಾಗಿ (ಸ್ಥಳೀಯಾಡಳಿತ ಸಮಿತಿ) ಮುಂದು ವರಿಸಬೇಕು ಎಂದೂ ಆಗ್ರಹಿಸಿದೆ.