‘ನಗರದ ಸೈಬರ್ ಕ್ರೈಂ ಠಾಣೆಗಳಲ್ಲಿ 8 ಪ್ರಕರಣಗಳು ದಾಖಲಾಗಿದ್ದವು. ಇದರ ತನಿಖೆಗೆ ರಚಿಸಲಾಗಿದ್ದ ವಿಶೇಷ ತಂಡ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ’ ಎಂದು ದಯಾನಂದ್ ತಿಳಿಸಿದರು.
5013 ಮಂದಿಗೆ ವಂಚನೆ: ‘ಬಂಧಿತ ಆರೋಪಿಗಳು ಇದುವರೆಗೂ 5013 ಮಂದಿಗೆ ವಂಚನೆ ಮಾಡಿರುವ ಮಾಹಿತಿ ಇದೆ. ಈ ಬಗ್ಗೆ ಎಲ್ಲ ರಾಜ್ಯಗಳ ಪೊಲೀಸ್ರಿಗೆ ಮಾಹಿತಿ ರವಾನಿಸಲಾಗಿದೆ’ ಎಂದು ಕಮಿಷನರ್ ದಯಾನಂದ್ ಹೇಳಿದರು.
‘ಅಂಡಮಾನ್ ಮತ್ತು ನಿಕೋಬಾರ್, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ದೆಹಲಿ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ರಾಜ್ಯಗಳಲ್ಲೂ ಆರೋಪಿಗಳು ಕೃತ್ಯ ಎಸಗಿದ್ದಾರೆ’ ಎಂದು ತಿಳಿಸಿದರು.