ಸೋಮೇಶ್ವರ ಉಚ್ಚಿಲ ಸಮೀಪದ ಪೆರಿಬೈಲ್ನಲ್ಲಿ ಕಡಲಿನ ಅಲೆಗಳು ಅಬ್ಬರಿಸುತ್ತಿದ್ದು, ಪಕ್ಕದ ರಸ್ತೆಯನ್ನೂ ದಾಟಿ ನೀರು ನುಗ್ಗುತ್ತಿದೆ. ಇದರಿಂದ ಸಮುದ್ರ ಕಸಕಡ್ಡಿಗಳು ರಸ್ತೆಯಲ್ಲಿ ಸಂಗ್ರಹವಾಗಿವೆ. ಸ್ಥಳೀಯವಾಗಿ ನಾಲ್ಕೈದು ಮನೆಗಳಿಗೆ ನೀರು ನುಗ್ಗಿದ್ದು, ಬಾವಿ ನೀರು ಕೂಡಾ ಉಪ್ಪು ನೀರಾಗಿ ಪರಿವರ್ತನೆಗೊಂಡಿದೆ.