<p><strong>ಬೆಂಗಳೂರು:</strong> ‘ಪೆಟ್ರೋಲ್, ಡೀಸೆಲ್ ಬೆಲೆ ದರ ಪರಿಷ್ಕರಣೆಗೆ ಅನುಗುಣವಾಗಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಪರಿಷ್ಕರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.</p>.<p>‘2013-14ರಲ್ಲಿ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಮತ್ತೆ ಹೆಚ್ಚಳ ಮಾಡಿಲ್ಲ. ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಹೀಗಾಗಿ, ಡೀಸೆಲ್, ಪೆಟ್ರೋಲ್ ದರ ಹೆಚ್ಚಳಕ್ಕೆ ಅನುಗುಣವಾಗಿ ಮೂರು ತಿಂಗಳಿಗೊಮ್ಮೆ ಪ್ರಯಾಣ ದರ ಕೂಡ ಪರಿಷ್ಕರಿಸುವಂತೆ ಪ್ರಸ್ತಾವಿಸಲಾಗಿದೆ’ ಎಂದರು.</p>.<p><strong>3 ಸಾವಿರ ಬಸ್ ಖರೀದಿ:</strong> ಐಷಾರಾಮಿ ಸೇರಿದಂತೆ ಮೂರು ಸಾವಿರ ಹೊಸ ಬಸ್ ಖರೀದಿ ಮಾಡಲಾಗುವುದು. ಸ್ಲೀಪರ್ ಕೋಚ್ 24 ಬಸ್ಗಳನ್ನು ಖರೀದಿ ಮಾಡಲಾಗುತ್ತದೆ ಎಂದರು.</p>.<p>‘8 ಲಕ್ಷ ಕಿ.ಮೀ. ಕ್ರಮಿಸಿದ ಬಸ್ಗಳನ್ನು ಗುಜರಿಗೆ ಹಾಕಲಾಗುತ್ತಿದ್ದು, ನಮ್ಮ ಬಸ್ಗಳ ಚಾರ್ಸಿ 20 ಲಕ್ಷ ಕಿ. ಮೀ. ಬಾಳಿಕೆ ಬರುತ್ತವೆ. ಹೀಗಾಗಿ 7 ಲಕ್ಷ ಕಿ.ಮೀ. ಕ್ರಮಿಸಿದ ಬಸ್ಗಳನ್ನು ಹರಾಜು ಮಾಡದೆ ಮರು ಕವಚ ನಿರ್ಮಾಣ ಮಾಡಿ ಮತ್ತೆ 6-7 ಲಕ್ಷ ಕಿ.ಮೀ. ಬಳಸಲು ಉದ್ದೇಶಿಸಲಾಗಿದೆ’ ಎಂದರು.</p>.<p>ಕಾವೇರಿ ನದಿ ನೀರು ಹೋರಾಟಗಾರರ ಮೇಲೆ ಹೂಡಲಾಗಿದ್ದ ಶೇ 90ರಷ್ಟು ಮೊಕದ್ದಮೆ ಹಿಂಪಡೆಯಲಾಗುತ್ತಿದೆ. ಆದರೆ, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟು ಮಾಡಿದ ಪ್ರಕರಣ ಹಿಂದಕ್ಕೆ ಪಡೆದಿಲ್ಲ’ ಎಂದರು.</p>.<p><strong>ವರಿಷ್ಠರ ತೀರ್ಮಾನ ಅಂತಿಮ:</strong> ‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಕೈಗೊಳ್ಳುವ ತೀರ್ಮಾನವೇ ಅಂತಿಮ’ ಎಂದರು.</p>.<p><strong>ರೆಕ್ಸಿನ್, ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ</strong></p>.<p><strong>ಬೆಂಗಳೂರು:</strong> ‘ಸಾರಿಗೆ ನಿಗಮದಲ್ಲಿ ರೆಕ್ಸಿನ್, ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ ನಡೆದಿರುವುದನ್ನು ವಿಚಕ್ಷಣ ದಳ ಪತ್ತೆ ಹಚ್ಚಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ’ ಎಂದು ಡಿ.ಸಿ. ತಮ್ಮಣ್ಣ ಹೇಳಿದರು.</p>.<p>‘₹ 17 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದ್ದು ಈ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ’ ಎಂದರು.</p>.<p>‘ಈಶಾನ್ಯ ಸಾರಿಗೆ ನಿಗಮದಲ್ಲೂ ಅಕ್ರಮ ನಡೆದಿದೆ. 141 ನೌಕರರು ವರ್ಗಾವಣೆಗಾಗಿ ವ್ಯವಸ್ಥಾಪಕ ನಿರ್ದೇಶಕರ ಸಹಿ ನಕಲಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 15 ನೌಕರರನ್ನು ಅಮಾನತು ಮಾಡಲಾಗಿದೆ’ ಎಂದರು.</p>.<p>‘ಐದು ವರ್ಷಗಳ ಅವಧಿಯಲ್ಲಿ ನಡೆದ ಎಲ್ಲ ವ್ಯವಹಾರಗಳ ತನಿಖೆ ನಡೆಸಲಾಗಿದೆ. ಬಸ್ ಬಾಡಿ ಬಿಲ್ಡಿಂಗ್, ಬಿಡಿಭಾಗಗಳ ಖರೀದಿಯಲ್ಲೂ ಅಕ್ರಮ ನಡೆದಿದೆ. ಬಸ್ ಬಾಡಿ ಬಿಲ್ಡಿಂಗ್ಗೆ 2017-18ರಲ್ಲಿ ₹ 112 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಯಾವ ಬಸ್, ಏನೇನು ಕೆಲಸ ಮಾಡಲಾಗಿದೆ ಎಂದು ಎಲ್ಲ ವರದಿ ಕೇಳಿದ್ದೇನೆ’ ಎಂದರು.</p>.<p>‘ಯಾವುದೋ ಕಂಪನಿ ಹೆಸರು ಹೇಳಿ ಬಿಡಿಭಾಗ ಖರೀದಿ ಮಾಡಲಾಗುತ್ತಿದೆ. ಅದೇ ಅಕ್ರಮಕ್ಕೆ ಮೂಲ. ಈಗ ಬೇಕಾಬಿಟ್ಟಿ ಬಿಡಿಭಾಗಗಳ ಖರೀದಿ ನಡೆಯುತ್ತಿದೆ. ಇದನ್ನು ತಪ್ಪಿಸಲು ಇನ್ನು ಮುಂದೆ ಬಿಡಿಭಾಗಗಳ ಉತ್ಪಾದಿಸುವ ಕಂಪನಿಗಳಿಗೆ ನಿಗಮದಲ್ಲಿ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ನಾಲ್ಕೂ ಸಾರಿಗೆ ನಿಗಮಗಳಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ನಿತ್ಯದ ಆದಾಯ ಉತ್ತಮವಾಗಿದ್ದರೂ ಅಕ್ರಮಗಳಿಂದ ನಷ್ಟ ಉಂಟಾಗುತ್ತಿದೆ. ಬಿಎಂಟಿಸಿಯಲ್ಲಿ ವರ್ಷಕ್ಕೆ ₹ 250 ಕೋಟಿ ನಷ್ಟ ಆಗುತ್ತಿದೆ. ಮೂರು ವರ್ಷ ಅವಕಾಶ ಸಿಕ್ಕರೆ ನಿಗಮಗಳನ್ನು ಲಾಭಕ್ಕೆ ಬರುವಂತೆ ಮಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪೆಟ್ರೋಲ್, ಡೀಸೆಲ್ ಬೆಲೆ ದರ ಪರಿಷ್ಕರಣೆಗೆ ಅನುಗುಣವಾಗಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಪರಿಷ್ಕರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.</p>.<p>‘2013-14ರಲ್ಲಿ ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು. ಮತ್ತೆ ಹೆಚ್ಚಳ ಮಾಡಿಲ್ಲ. ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಹೀಗಾಗಿ, ಡೀಸೆಲ್, ಪೆಟ್ರೋಲ್ ದರ ಹೆಚ್ಚಳಕ್ಕೆ ಅನುಗುಣವಾಗಿ ಮೂರು ತಿಂಗಳಿಗೊಮ್ಮೆ ಪ್ರಯಾಣ ದರ ಕೂಡ ಪರಿಷ್ಕರಿಸುವಂತೆ ಪ್ರಸ್ತಾವಿಸಲಾಗಿದೆ’ ಎಂದರು.</p>.<p><strong>3 ಸಾವಿರ ಬಸ್ ಖರೀದಿ:</strong> ಐಷಾರಾಮಿ ಸೇರಿದಂತೆ ಮೂರು ಸಾವಿರ ಹೊಸ ಬಸ್ ಖರೀದಿ ಮಾಡಲಾಗುವುದು. ಸ್ಲೀಪರ್ ಕೋಚ್ 24 ಬಸ್ಗಳನ್ನು ಖರೀದಿ ಮಾಡಲಾಗುತ್ತದೆ ಎಂದರು.</p>.<p>‘8 ಲಕ್ಷ ಕಿ.ಮೀ. ಕ್ರಮಿಸಿದ ಬಸ್ಗಳನ್ನು ಗುಜರಿಗೆ ಹಾಕಲಾಗುತ್ತಿದ್ದು, ನಮ್ಮ ಬಸ್ಗಳ ಚಾರ್ಸಿ 20 ಲಕ್ಷ ಕಿ. ಮೀ. ಬಾಳಿಕೆ ಬರುತ್ತವೆ. ಹೀಗಾಗಿ 7 ಲಕ್ಷ ಕಿ.ಮೀ. ಕ್ರಮಿಸಿದ ಬಸ್ಗಳನ್ನು ಹರಾಜು ಮಾಡದೆ ಮರು ಕವಚ ನಿರ್ಮಾಣ ಮಾಡಿ ಮತ್ತೆ 6-7 ಲಕ್ಷ ಕಿ.ಮೀ. ಬಳಸಲು ಉದ್ದೇಶಿಸಲಾಗಿದೆ’ ಎಂದರು.</p>.<p>ಕಾವೇರಿ ನದಿ ನೀರು ಹೋರಾಟಗಾರರ ಮೇಲೆ ಹೂಡಲಾಗಿದ್ದ ಶೇ 90ರಷ್ಟು ಮೊಕದ್ದಮೆ ಹಿಂಪಡೆಯಲಾಗುತ್ತಿದೆ. ಆದರೆ, ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟು ಮಾಡಿದ ಪ್ರಕರಣ ಹಿಂದಕ್ಕೆ ಪಡೆದಿಲ್ಲ’ ಎಂದರು.</p>.<p><strong>ವರಿಷ್ಠರ ತೀರ್ಮಾನ ಅಂತಿಮ:</strong> ‘ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಕೈಗೊಳ್ಳುವ ತೀರ್ಮಾನವೇ ಅಂತಿಮ’ ಎಂದರು.</p>.<p><strong>ರೆಕ್ಸಿನ್, ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ</strong></p>.<p><strong>ಬೆಂಗಳೂರು:</strong> ‘ಸಾರಿಗೆ ನಿಗಮದಲ್ಲಿ ರೆಕ್ಸಿನ್, ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ ನಡೆದಿರುವುದನ್ನು ವಿಚಕ್ಷಣ ದಳ ಪತ್ತೆ ಹಚ್ಚಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ’ ಎಂದು ಡಿ.ಸಿ. ತಮ್ಮಣ್ಣ ಹೇಳಿದರು.</p>.<p>‘₹ 17 ಕೋಟಿ ವೆಚ್ಚದಲ್ಲಿ ಕಂಪ್ಯೂಟರ್ ಮತ್ತು ಸರ್ವರ್ ಖರೀದಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿದ್ದು ಈ ಪ್ರಕರಣದಲ್ಲಿ ಶಾಮೀಲಾದ ಆರೋಪದಲ್ಲಿ ಏಳು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ’ ಎಂದರು.</p>.<p>‘ಈಶಾನ್ಯ ಸಾರಿಗೆ ನಿಗಮದಲ್ಲೂ ಅಕ್ರಮ ನಡೆದಿದೆ. 141 ನೌಕರರು ವರ್ಗಾವಣೆಗಾಗಿ ವ್ಯವಸ್ಥಾಪಕ ನಿರ್ದೇಶಕರ ಸಹಿ ನಕಲಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 15 ನೌಕರರನ್ನು ಅಮಾನತು ಮಾಡಲಾಗಿದೆ’ ಎಂದರು.</p>.<p>‘ಐದು ವರ್ಷಗಳ ಅವಧಿಯಲ್ಲಿ ನಡೆದ ಎಲ್ಲ ವ್ಯವಹಾರಗಳ ತನಿಖೆ ನಡೆಸಲಾಗಿದೆ. ಬಸ್ ಬಾಡಿ ಬಿಲ್ಡಿಂಗ್, ಬಿಡಿಭಾಗಗಳ ಖರೀದಿಯಲ್ಲೂ ಅಕ್ರಮ ನಡೆದಿದೆ. ಬಸ್ ಬಾಡಿ ಬಿಲ್ಡಿಂಗ್ಗೆ 2017-18ರಲ್ಲಿ ₹ 112 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಯಾವ ಬಸ್, ಏನೇನು ಕೆಲಸ ಮಾಡಲಾಗಿದೆ ಎಂದು ಎಲ್ಲ ವರದಿ ಕೇಳಿದ್ದೇನೆ’ ಎಂದರು.</p>.<p>‘ಯಾವುದೋ ಕಂಪನಿ ಹೆಸರು ಹೇಳಿ ಬಿಡಿಭಾಗ ಖರೀದಿ ಮಾಡಲಾಗುತ್ತಿದೆ. ಅದೇ ಅಕ್ರಮಕ್ಕೆ ಮೂಲ. ಈಗ ಬೇಕಾಬಿಟ್ಟಿ ಬಿಡಿಭಾಗಗಳ ಖರೀದಿ ನಡೆಯುತ್ತಿದೆ. ಇದನ್ನು ತಪ್ಪಿಸಲು ಇನ್ನು ಮುಂದೆ ಬಿಡಿಭಾಗಗಳ ಉತ್ಪಾದಿಸುವ ಕಂಪನಿಗಳಿಗೆ ನಿಗಮದಲ್ಲಿ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ’ ಎಂದರು.</p>.<p>‘ನಾಲ್ಕೂ ಸಾರಿಗೆ ನಿಗಮಗಳಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ನಿತ್ಯದ ಆದಾಯ ಉತ್ತಮವಾಗಿದ್ದರೂ ಅಕ್ರಮಗಳಿಂದ ನಷ್ಟ ಉಂಟಾಗುತ್ತಿದೆ. ಬಿಎಂಟಿಸಿಯಲ್ಲಿ ವರ್ಷಕ್ಕೆ ₹ 250 ಕೋಟಿ ನಷ್ಟ ಆಗುತ್ತಿದೆ. ಮೂರು ವರ್ಷ ಅವಕಾಶ ಸಿಕ್ಕರೆ ನಿಗಮಗಳನ್ನು ಲಾಭಕ್ಕೆ ಬರುವಂತೆ ಮಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>