<p><strong>ಬೆಂಗಳೂರು: </strong>₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದ ಆರೋಪದಿಂದ ನನ್ನನ್ನು ಕೈಬಿಡಬೇಕು ಎಂದು ಕೋರಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.</p>.<p>ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಸಂಜೆ 5.20ಕ್ಕೆ ಪ್ರಕಟಿಸಿದರು.</p>.<p>ಇದರಿಂದಾಗಿ ಶಿವಕುಮಾರ್ ಸೇರಿದಂತೆ ಪ್ರಕರಣದ ಉಳಿದ ಆರೋಪಿಗಳ ವಿರುದ್ಧ ಇದೇ ನ್ಯಾಯಾಲಯ ದೋಷರೋಪ ಪ್ರಕ್ರಿಯೆ ಆರಂಭಿಸಲಿದೆ.</p>.<p>ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಈ ಹಿಂದಿನ ನ್ಯಾಯಾಧೀಶ ಬಿ.ವಿ.ಪಾಟೀಲ ಪ್ರಕರಣದಿಂದ ಮುಕ್ತಿ ನೀಡಿ ಆದೇಶಿಸಿದ್ದರು.</p>.<p>ಆದಾಯ ತೆರಿಗೆ ಇಲಾಖೆಯು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120–‘ಬಿ’ (ಅಪರಾಧಿಕ ಒಳಸಂಚು) ಅನುಸಾರ ದಾಖಲಿಸಿರುವ ದೂರು ಸರಿಯಾಗಿಯೇ ಇದೆ. ಇದರಲ್ಲಿ ಇನಿತೂ ಲೋಪವಿಲ್ಲ’ ಎಂಬ ಆದಾಯ ತೆರಿಗೆ ಇಲಾಖೆ ವಾದವನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮ, ಎನ್.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಆರೋಪಿಗಳಾಗಿದ್ದಾರೆ.</p>.<p>‘ಶಿವಕುಮಾರ್ ಅವರು, ಆದಾಯ ತೆರಿಗೆ ಕಾಯ್ದೆ–1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ತನಿಖೆಯ ವೇಳೆ ಇನ್ನಷ್ಟು ಅಪರಾಧಗಳು ಬೆಳಕಿಗೆ ಬರಬಹುದು’ ಎಂಬುದು ಐ.ಟಿ. ವಾದ.</p>.<p>ಐ.ಟಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದ ಆರೋಪದಿಂದ ನನ್ನನ್ನು ಕೈಬಿಡಬೇಕು ಎಂದು ಕೋರಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.</p>.<p>ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಸಂಜೆ 5.20ಕ್ಕೆ ಪ್ರಕಟಿಸಿದರು.</p>.<p>ಇದರಿಂದಾಗಿ ಶಿವಕುಮಾರ್ ಸೇರಿದಂತೆ ಪ್ರಕರಣದ ಉಳಿದ ಆರೋಪಿಗಳ ವಿರುದ್ಧ ಇದೇ ನ್ಯಾಯಾಲಯ ದೋಷರೋಪ ಪ್ರಕ್ರಿಯೆ ಆರಂಭಿಸಲಿದೆ.</p>.<p>ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಈ ಹಿಂದಿನ ನ್ಯಾಯಾಧೀಶ ಬಿ.ವಿ.ಪಾಟೀಲ ಪ್ರಕರಣದಿಂದ ಮುಕ್ತಿ ನೀಡಿ ಆದೇಶಿಸಿದ್ದರು.</p>.<p>ಆದಾಯ ತೆರಿಗೆ ಇಲಾಖೆಯು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120–‘ಬಿ’ (ಅಪರಾಧಿಕ ಒಳಸಂಚು) ಅನುಸಾರ ದಾಖಲಿಸಿರುವ ದೂರು ಸರಿಯಾಗಿಯೇ ಇದೆ. ಇದರಲ್ಲಿ ಇನಿತೂ ಲೋಪವಿಲ್ಲ’ ಎಂಬ ಆದಾಯ ತೆರಿಗೆ ಇಲಾಖೆ ವಾದವನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮ, ಎನ್.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಆರೋಪಿಗಳಾಗಿದ್ದಾರೆ.</p>.<p>‘ಶಿವಕುಮಾರ್ ಅವರು, ಆದಾಯ ತೆರಿಗೆ ಕಾಯ್ದೆ–1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ತನಿಖೆಯ ವೇಳೆ ಇನ್ನಷ್ಟು ಅಪರಾಧಗಳು ಬೆಳಕಿಗೆ ಬರಬಹುದು’ ಎಂಬುದು ಐ.ಟಿ. ವಾದ.</p>.<p>ಐ.ಟಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>