<p><strong>ಬೆಂಗಳೂರು</strong>:‘ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’ಯ ಕುರಿತು ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ಮಸೂದೆ ಹಿಂದಕ್ಕೆ ಪಡೆದು, ಸದನ ಸಮಿತಿಯನ್ನು ರಚಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ವಿಧಾನಸಭೆಯಲ್ಲಿ ಗುರುವಾರ ಮಸೂದೆಯನ್ನು ಪರ್ಯಾಲೋಚನೆಗೆ ಮಂಡಿಸಿದ ಶಿವಕುಮಾರ್ ಅವರು, ‘ಸುಮಾರು 1.40 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಆಡಳಿತ ಸುಧಾರಣೆ ಆಗಬೇಕು, ನಾಗರಿಕ ಸೌಲಭ್ಯಗಳನ್ನು ನೀಡಬೇಕು. ಈ ಮೂಲಕ ಬೆಂಗಳೂರಿಗೆ ಹೊಸ ರೂಪ ಕೊಟ್ಟು, ಬ್ರ್ಯಾಂಡ್ ಬೆಂಗಳೂರು ಆಗಿಸುವುದೇ ನಮ್ಮ ಉದ್ದೇಶ’ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ‘ಈ ಮಸೂದೆಯ ಬಗ್ಗೆ ಚರ್ಚೆ ಆಗಬೇಕು. ಮಸೂದೆಯನ್ನು ಈಗಿರುವ ರೂಪದಲ್ಲಿ ಜಾರಿ ಮಾಡಿದರೆ ಬೆಂಗಳೂರು ಛಿದ್ರ ಆಗುತ್ತದೆ. ಆದ್ದರಿಂದ ಮಸೂದೆಯನ್ನು ಹಿಂದಕ್ಕೆ ಪಡೆದು ಸದನ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.</p><p>ಬಿಜೆಪಿಯ ಎಸ್.ಟಿಸೋಮಶೇಖರ್ ಮಾತನಾಡಿ, ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯ ಇರುವುದರಿಂದ ಸದನ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ‘ನಮ್ಮ ಪಕ್ಷ ಮತ್ತು ವಿರೋಧ ಪಕ್ಷದ ಶಾಸಕರು ವಿಸ್ತೃತ ಚರ್ಚೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ನನ್ನ ತಕರಾರಿಲ್ಲ. ಎಲ್ಲರ ಸಲಹೆ– ಸೂಚನೆಗಳನ್ನು ಕೇಳಿಯೇ ಮುಂದುವರೆಯುತ್ತೇನೆ. ಸದನಸಮಿತಿ ರಚಿಸಲು ತಯಾರಿದ್ದೇನೆ’ ಎಂದು ಹೇಳಿದರು.</p>.ಸರ್ವತೋಮುಖ ಅಭಿವೃದ್ಧಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’: ಡಿ.ಕೆಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:‘ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’ಯ ಕುರಿತು ವಿಸ್ತೃತ ಚರ್ಚೆಯ ಅಗತ್ಯವಿರುವುದರಿಂದ ಮಸೂದೆ ಹಿಂದಕ್ಕೆ ಪಡೆದು, ಸದನ ಸಮಿತಿಯನ್ನು ರಚಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p><p>ವಿಧಾನಸಭೆಯಲ್ಲಿ ಗುರುವಾರ ಮಸೂದೆಯನ್ನು ಪರ್ಯಾಲೋಚನೆಗೆ ಮಂಡಿಸಿದ ಶಿವಕುಮಾರ್ ಅವರು, ‘ಸುಮಾರು 1.40 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಆಡಳಿತ ಸುಧಾರಣೆ ಆಗಬೇಕು, ನಾಗರಿಕ ಸೌಲಭ್ಯಗಳನ್ನು ನೀಡಬೇಕು. ಈ ಮೂಲಕ ಬೆಂಗಳೂರಿಗೆ ಹೊಸ ರೂಪ ಕೊಟ್ಟು, ಬ್ರ್ಯಾಂಡ್ ಬೆಂಗಳೂರು ಆಗಿಸುವುದೇ ನಮ್ಮ ಉದ್ದೇಶ’ ಎಂದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ‘ಈ ಮಸೂದೆಯ ಬಗ್ಗೆ ಚರ್ಚೆ ಆಗಬೇಕು. ಮಸೂದೆಯನ್ನು ಈಗಿರುವ ರೂಪದಲ್ಲಿ ಜಾರಿ ಮಾಡಿದರೆ ಬೆಂಗಳೂರು ಛಿದ್ರ ಆಗುತ್ತದೆ. ಆದ್ದರಿಂದ ಮಸೂದೆಯನ್ನು ಹಿಂದಕ್ಕೆ ಪಡೆದು ಸದನ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.</p><p>ಬಿಜೆಪಿಯ ಎಸ್.ಟಿಸೋಮಶೇಖರ್ ಮಾತನಾಡಿ, ಈ ವಿಷಯದ ಬಗ್ಗೆ ವಿಸ್ತೃತ ಚರ್ಚೆಯ ಅಗತ್ಯ ಇರುವುದರಿಂದ ಸದನ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.</p><p>ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ‘ನಮ್ಮ ಪಕ್ಷ ಮತ್ತು ವಿರೋಧ ಪಕ್ಷದ ಶಾಸಕರು ವಿಸ್ತೃತ ಚರ್ಚೆಗೆ ಒತ್ತಾಯಿಸಿದ್ದಾರೆ. ಇದಕ್ಕೆ ನನ್ನ ತಕರಾರಿಲ್ಲ. ಎಲ್ಲರ ಸಲಹೆ– ಸೂಚನೆಗಳನ್ನು ಕೇಳಿಯೇ ಮುಂದುವರೆಯುತ್ತೇನೆ. ಸದನಸಮಿತಿ ರಚಿಸಲು ತಯಾರಿದ್ದೇನೆ’ ಎಂದು ಹೇಳಿದರು.</p>.ಸರ್ವತೋಮುಖ ಅಭಿವೃದ್ಧಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ’: ಡಿ.ಕೆಶಿವಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>