‘ರೂಪಾ, ರೋಹಿಣಿಯವರ ವೈಯಕ್ತಿಕ ತೇಜೋವಧೆಗೆ ಇಳಿದಿದ್ದಾರೆ. ರೋಹಿಣಿಯವರ ಖಾಸಗಿ ಫೋನ್ ನಂಬರ್ ಬಹಿರಂಗಪಡಿಸಿರುವ ಕಾರಣ ರೋಹಿಣಿ ಅವರಿಗೆ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ಆದ್ದರಿಂದ, ದಾವೆದಾರರ ವಿರುದ್ಧ ಆಕ್ಷೇಪಾರ್ಹ ಮತ್ತು ಮಾನಹಾನಿ ಹೇಳಿಕೆ ನೀಡದಂತೆ ರೂಪಾ ಅವರಿಗೆ ನಿರ್ದೇಶಿಸಬೇಕು. ರೂಪಾ ಅವರ ಹೇಳಿಕೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧವೂ ಪ್ರತಿಬಂಧಕ ಆದೇಶ ಹೊರಡಿಸಬೇಕು’ ಎಂದು ಕೋರಿದರು.