<p><strong>ಬೆಂಗಳೂರು</strong>: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಿಂದೆ ಜಾತಿ ರಾಜಕಾರಣವನ್ನೇ ಮಾಡುತ್ತಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಅದನ್ನೇ ಮಾಡುತ್ತಿದ್ದಾರೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಇಷ್ಟರವರೆಗೆ ದೇವೇಗೌಡರು ಜಾತಿಯನ್ನೇ ಹಿಡಿದು ರಾಜಕಾರಣ ಮಾಡುತ್ತಿದ್ದರು. ಈಗ ಶಿವಕುಮಾರ್ ಮುಂದೆ ಬಂದು ಅದೇ ಕೆಲಸ ಮಾಡುತ್ತಿದ್ದಾರೆ. ಈಗ ನಡೆಯುತ್ತಿರುವ ಉಪ ಚುನಾವಣೆ ಜಾತಿ ರಾಜಕಾರಣ ಮತ್ತು ಶಿವಕುಮಾರ್ ರಾಜಕೀಯ ಭವಿಷ್ಯ ಎರಡಕ್ಕೂ ಇತಿಶ್ರೀ ಹಾಡಲಿದೆ’ ಎಂದರು.</p>.<p>ಕಾಂಗ್ರೆಸ್ನಲ್ಲಿ ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಸಮಯಸಾಧಕ ರಾಜಕಾರಣಕ್ಕೆ ಇದು ಉತ್ತಮ ಉದಾಹರಣೆ. ಕಾಂಗ್ರೆಸ್ನ 15 ಶಾಸಕರು ಅಲ್ಲಿನ ವಾತಾವರಣ ಸರಿ ಇಲ್ಲ ಎಂದು ಬಿಜೆಪಿಗೆ ಬಂದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಿಂದೆ ಜಾತಿ ರಾಜಕಾರಣವನ್ನೇ ಮಾಡುತ್ತಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಅದನ್ನೇ ಮಾಡುತ್ತಿದ್ದಾರೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಇಷ್ಟರವರೆಗೆ ದೇವೇಗೌಡರು ಜಾತಿಯನ್ನೇ ಹಿಡಿದು ರಾಜಕಾರಣ ಮಾಡುತ್ತಿದ್ದರು. ಈಗ ಶಿವಕುಮಾರ್ ಮುಂದೆ ಬಂದು ಅದೇ ಕೆಲಸ ಮಾಡುತ್ತಿದ್ದಾರೆ. ಈಗ ನಡೆಯುತ್ತಿರುವ ಉಪ ಚುನಾವಣೆ ಜಾತಿ ರಾಜಕಾರಣ ಮತ್ತು ಶಿವಕುಮಾರ್ ರಾಜಕೀಯ ಭವಿಷ್ಯ ಎರಡಕ್ಕೂ ಇತಿಶ್ರೀ ಹಾಡಲಿದೆ’ ಎಂದರು.</p>.<p>ಕಾಂಗ್ರೆಸ್ನಲ್ಲಿ ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಸಮಯಸಾಧಕ ರಾಜಕಾರಣಕ್ಕೆ ಇದು ಉತ್ತಮ ಉದಾಹರಣೆ. ಕಾಂಗ್ರೆಸ್ನ 15 ಶಾಸಕರು ಅಲ್ಲಿನ ವಾತಾವರಣ ಸರಿ ಇಲ್ಲ ಎಂದು ಬಿಜೆಪಿಗೆ ಬಂದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>