ಇದರಲ್ಲಿ ಪ್ರತಿಯೊಬ್ಬ ತರಕಾರಿ ವ್ಯಾಪಾರಿಯ ಜತೆಗೆ, ಒಬ್ಬ ಪಾಲಿಕೆ ಸಿಬ್ಬಂದಿ ಉಸ್ತುವಾರಿಯಾಗಿ ಇರುತ್ತಾರೆ. ತಳ್ಳುವ ಗಾಡಿ, ವಾಹನಗಳಲ್ಲಿ ತರಕಾರಿಗಳನ್ನು ಪ್ರತಿ ಓಣಿಗೂ ಹೋಗಿ ಮನೆ ಮುಂದೆ ನಿಂತು, ಜನಸಂದಣಿ ಆಗದಂತೆ ತಲುಪಿಸಬೇಕು. ಜತೆಗೆ, ಅದರ ವರದಿ ಹಾಗೂ ಚಿತ್ರವನ್ನೂ ಜಿಲ್ಲಾಡಳಿತ ಹಾಗೂ ಪಾಲಿಕೆಗೆ ನೀಡಬೇಕು.