<p><strong>ಬೆಂಗಳೂರು</strong>: ‘ಶಿಕ್ಷಣವೊಂದೇ ಶೋಷಿತರ ಭವಿಷ್ಯ ಮತ್ತು ಭರವಸೆ. ಹೀಗಾಗಿ, ಈ ಹಾದಿಯಲ್ಲಿ ದಲಿತ ಯುವಜನತೆ ಶ್ರಮವಹಿಸಬೇಕು’ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ ಡಿ. ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.</p>.<p>ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನದ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ಕಾಲೇಜುಗಳ ಎಸ್ಸಿ, ಎಸ್ಟಿ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ರೋಸ್ಟರ್ ಬಿಂದುಗಳನ್ನು ಸಮರ್ಪಕವಾಗಿ ಹಂಚದಿರುವ ಕಾರಣದಿಂದ ಮುಂಬಡ್ತಿಯಲ್ಲಿ ದಲಿತ ನೌಕರರಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಹೋರಾಟಕ್ಕೆ ದಲಿತ ಚುನಾಯಿತ ಪ್ರತಿನಿಧಿಗಳೂ ಸೇರಿದಂತೆ ಎಲ್ಲ ನೌಕರರೂ ಒಗ್ಗೂಡಬೇಕು’ ಎಂದರು.</p>.<p>‘ಅತಿ ಹೆಚ್ಚು ಮುಂಬಡ್ತಿಗಳು ನಡೆಯುವ ಶಿಕ್ಷಣ, ಗೃಹ ಮತ್ತು ಆರೋಗ್ಯ ಇಲಾಖೆಯಲ್ಲಿ ದಲಿತರಿಗೆ ಬಡ್ತಿ ನೀಡದೆ ವಂಚಿಸಲಾಗುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಾರೆ. ಆದರೆ, ವಂಚನೆ ನಡೆಯುತ್ತಲೇ ಇದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಜಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ ಮಾತನಾಡಿ, ‘ಶೋಷಿತ ಸಮುದಾಯದ ಶಿಕ್ಷಕರು, ಉಪನ್ಯಾಸಕರು ತಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಮುಂದಿನ ತಲೆಮಾರಿಗೆ ಶಿಕ್ಷಣದ ಮಹತ್ವವನ್ನು ಅರ್ಥ ಮಾಡಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಇಲಾಖೆಯ ಮತ್ತೊಬ್ಬ ಜಂಟಿ ನಿರ್ದೇಶಕ ಎನ್. ರಾಜು, ‘ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಮೀಸಲಾತಿ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬಹುದು’ ಎಂದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪ ನಿರ್ದೇಶಕ ಪಾಲಾಕ್ಷ ಮಾತನಾಡಿ, ‘ಶೋಷಿತ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದ ಯಾವುದೇ ಮಟ್ಟದಲ್ಲಿ ಹಿಂದುಳಿಯದೆ ಸಾಧನೆ ತೋರಿಸಬೇಕು’ ಎಂದರು.</p>.<p>ಉಪ ನಿರ್ದೇಶಕರಾದ ನರಸಿಂಹಮೂರ್ತಿ, ರಾಜೇಂದ್ರ, ಎಸ್ಸಿ, ಎಸ್ಟಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಜಯರಾಮ್, ಸಂಘದ ಜಿಲ್ಲಾ ಅಧ್ಯಕ್ಷರುಗಳಾದ ಶಿವಲಿಂಗಯ್ಯ, ಶಂಕರಯ್ಯ, ಶ್ರೀಕಂಠಯ್ಯ, ರಾಜು, ಸುರೇಶ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಿಕ್ಷಣವೊಂದೇ ಶೋಷಿತರ ಭವಿಷ್ಯ ಮತ್ತು ಭರವಸೆ. ಹೀಗಾಗಿ, ಈ ಹಾದಿಯಲ್ಲಿ ದಲಿತ ಯುವಜನತೆ ಶ್ರಮವಹಿಸಬೇಕು’ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ ಡಿ. ಚಂದ್ರಶೇಖರಯ್ಯ ಅಭಿಪ್ರಾಯಪಟ್ಟರು.</p>.<p>ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನದ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ಕಾಲೇಜುಗಳ ಎಸ್ಸಿ, ಎಸ್ಟಿ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಂಘವು ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ರೋಸ್ಟರ್ ಬಿಂದುಗಳನ್ನು ಸಮರ್ಪಕವಾಗಿ ಹಂಚದಿರುವ ಕಾರಣದಿಂದ ಮುಂಬಡ್ತಿಯಲ್ಲಿ ದಲಿತ ನೌಕರರಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಹೋರಾಟಕ್ಕೆ ದಲಿತ ಚುನಾಯಿತ ಪ್ರತಿನಿಧಿಗಳೂ ಸೇರಿದಂತೆ ಎಲ್ಲ ನೌಕರರೂ ಒಗ್ಗೂಡಬೇಕು’ ಎಂದರು.</p>.<p>‘ಅತಿ ಹೆಚ್ಚು ಮುಂಬಡ್ತಿಗಳು ನಡೆಯುವ ಶಿಕ್ಷಣ, ಗೃಹ ಮತ್ತು ಆರೋಗ್ಯ ಇಲಾಖೆಯಲ್ಲಿ ದಲಿತರಿಗೆ ಬಡ್ತಿ ನೀಡದೆ ವಂಚಿಸಲಾಗುತ್ತಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಾರೆ. ಆದರೆ, ವಂಚನೆ ನಡೆಯುತ್ತಲೇ ಇದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ಜಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ ಮಾತನಾಡಿ, ‘ಶೋಷಿತ ಸಮುದಾಯದ ಶಿಕ್ಷಕರು, ಉಪನ್ಯಾಸಕರು ತಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಮುಂದಿನ ತಲೆಮಾರಿಗೆ ಶಿಕ್ಷಣದ ಮಹತ್ವವನ್ನು ಅರ್ಥ ಮಾಡಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಇಲಾಖೆಯ ಮತ್ತೊಬ್ಬ ಜಂಟಿ ನಿರ್ದೇಶಕ ಎನ್. ರಾಜು, ‘ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಮೀಸಲಾತಿ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬಹುದು’ ಎಂದರು.</p>.<p>ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲಾ ಉಪ ನಿರ್ದೇಶಕ ಪಾಲಾಕ್ಷ ಮಾತನಾಡಿ, ‘ಶೋಷಿತ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದ ಯಾವುದೇ ಮಟ್ಟದಲ್ಲಿ ಹಿಂದುಳಿಯದೆ ಸಾಧನೆ ತೋರಿಸಬೇಕು’ ಎಂದರು.</p>.<p>ಉಪ ನಿರ್ದೇಶಕರಾದ ನರಸಿಂಹಮೂರ್ತಿ, ರಾಜೇಂದ್ರ, ಎಸ್ಸಿ, ಎಸ್ಟಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಜಯರಾಮ್, ಸಂಘದ ಜಿಲ್ಲಾ ಅಧ್ಯಕ್ಷರುಗಳಾದ ಶಿವಲಿಂಗಯ್ಯ, ಶಂಕರಯ್ಯ, ಶ್ರೀಕಂಠಯ್ಯ, ರಾಜು, ಸುರೇಶ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>