<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಗಳ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್ಪಿ) ಅನುದಾನದಲ್ಲಿ ₹39,000 ಕೋಟಿಗೂ ಹೆಚ್ಚು ಮೊತ್ತವನ್ನು, ಅನ್ಯ ಉದ್ದೇಶಕ್ಕೆ ಬಳಸುವ ತೀರ್ಮಾನವನ್ನು ಸರ್ಕಾರ ಕೈಬಿಡಬೇಕು’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಗಳ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೇರ ಸಹಾಯ ಒದಗಿಸುವುದು ಈ ಉಪಯೋಜನೆಗಳ ಗುರಿ. ಯೋಜನೆಗಳ ಅಡಿಯಲ್ಲಿ ಸರ್ಕಾರವು ಕೌಶಲಾಭಿವೃದ್ಧಿ, ಉದ್ಯೋಗಾರ್ಹತೆ ಮತ್ತು ಮಹಿಳೆಯರಲ್ಲಿ ಉದ್ಯಮಶೀಲತೆ ವೃದ್ಧಿ, ಕೃಷಿಗೆ ತಂತ್ರಜ್ಞಾನದ ಬೆಂಬಲ ಸೇರಿ ಹಲವು ಕಾರ್ಯಕ್ರಮಗಳನ್ನು ಆರಂಭಿಸಬೇಕಿತ್ತು. ಅನುದಾನವೇ ಇಲ್ಲವಾಗಿರುವುದರಿಂದ ಈ ಎಲ್ಲ ಕಾರ್ಯಕ್ರಮಗಳು ಸ್ಥಗಿತವಾಗಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಪರಿಶಿಷ್ಟ ಸಮುದಾಯಗಳ ಜನರ ಸಬಲೀಕರಣಕ್ಕೆಂದು ತೆಗೆದಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಾ ಹೋದರೆ, ಈ ಜನರು ಅಭಿವೃದ್ಧಿಯಾಗುವುದಾದರೂ ಹೇಗೆ. ಈ ಜನರ ಹಣವನ್ನು ಬಳಸಿಕೊಳ್ಳುವ ಮೂಲಕ ಸರ್ಕಾರವು ಅವರ ಅಭಿವೃದ್ಧಿಯನ್ನು ನಿರಾಕರಿಸುತ್ತಿದೆ’ ಎಂದು ದೂರಿದರು.</p>.<p>‘ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದರ ವಿರುದ್ಧ 2023ರಿಂದಲೂ ಹೋರಾಡುತ್ತಿದ್ದೇನೆ. ಈಗ ಸದನದ ಒಳಗೂ, ಹೊರಗೂ ತೀವ್ರ ಹೋರಾಟ ನಡೆಸುತ್ತೇವೆ’ ಎಂದರು.</p>.<div><blockquote>ತಾನು ದಲಿತ ಪರ ಎಂದು ಹೇಳಿಕೊಳ್ಳುವ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿನ ತಮ್ಮದೇ ಸರ್ಕಾರದ ಈ ನಡೆಯ ವಿರುದ್ಧ ಹೋರಾಡುವುದು ಯಾವಾಗ?</blockquote><span class="attribution">ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಶಿಷ್ಟ ಜಾತಿಗಳ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್ಪಿ) ಅನುದಾನದಲ್ಲಿ ₹39,000 ಕೋಟಿಗೂ ಹೆಚ್ಚು ಮೊತ್ತವನ್ನು, ಅನ್ಯ ಉದ್ದೇಶಕ್ಕೆ ಬಳಸುವ ತೀರ್ಮಾನವನ್ನು ಸರ್ಕಾರ ಕೈಬಿಡಬೇಕು’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಗಳ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನೇರ ಸಹಾಯ ಒದಗಿಸುವುದು ಈ ಉಪಯೋಜನೆಗಳ ಗುರಿ. ಯೋಜನೆಗಳ ಅಡಿಯಲ್ಲಿ ಸರ್ಕಾರವು ಕೌಶಲಾಭಿವೃದ್ಧಿ, ಉದ್ಯೋಗಾರ್ಹತೆ ಮತ್ತು ಮಹಿಳೆಯರಲ್ಲಿ ಉದ್ಯಮಶೀಲತೆ ವೃದ್ಧಿ, ಕೃಷಿಗೆ ತಂತ್ರಜ್ಞಾನದ ಬೆಂಬಲ ಸೇರಿ ಹಲವು ಕಾರ್ಯಕ್ರಮಗಳನ್ನು ಆರಂಭಿಸಬೇಕಿತ್ತು. ಅನುದಾನವೇ ಇಲ್ಲವಾಗಿರುವುದರಿಂದ ಈ ಎಲ್ಲ ಕಾರ್ಯಕ್ರಮಗಳು ಸ್ಥಗಿತವಾಗಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಪರಿಶಿಷ್ಟ ಸಮುದಾಯಗಳ ಜನರ ಸಬಲೀಕರಣಕ್ಕೆಂದು ತೆಗೆದಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಾ ಹೋದರೆ, ಈ ಜನರು ಅಭಿವೃದ್ಧಿಯಾಗುವುದಾದರೂ ಹೇಗೆ. ಈ ಜನರ ಹಣವನ್ನು ಬಳಸಿಕೊಳ್ಳುವ ಮೂಲಕ ಸರ್ಕಾರವು ಅವರ ಅಭಿವೃದ್ಧಿಯನ್ನು ನಿರಾಕರಿಸುತ್ತಿದೆ’ ಎಂದು ದೂರಿದರು.</p>.<p>‘ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುವುದರ ವಿರುದ್ಧ 2023ರಿಂದಲೂ ಹೋರಾಡುತ್ತಿದ್ದೇನೆ. ಈಗ ಸದನದ ಒಳಗೂ, ಹೊರಗೂ ತೀವ್ರ ಹೋರಾಟ ನಡೆಸುತ್ತೇವೆ’ ಎಂದರು.</p>.<div><blockquote>ತಾನು ದಲಿತ ಪರ ಎಂದು ಹೇಳಿಕೊಳ್ಳುವ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿನ ತಮ್ಮದೇ ಸರ್ಕಾರದ ಈ ನಡೆಯ ವಿರುದ್ಧ ಹೋರಾಡುವುದು ಯಾವಾಗ?</blockquote><span class="attribution">ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>