ಸಿದ್ದರಾಮಯ್ಯ ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಯಾಗಿದ್ದು ದಾಖಲೆ ಮಾಡುವುದಾದರೆ ಮಾಡಲಿ. ಹಾಗಾದರೆ ಒಳ್ಳೆಯದೇ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸದ್ಯ ಯಾವುದೇ ಚರ್ಚೆಯಾಗಿಲ್ಲ. ಯಥಾಸ್ಥಿತಿ ಇದೆ
ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುವ ಬಗ್ಗೆ ಮಾಧ್ಯಮದವರಿಗೆ ಅನುಮಾನ ಏಕೆ ಬರುತ್ತಿದೆ? ಅಧಿಕಾರ ಇರುವುದು ದಾಖಲೆ ಸರಿಗಟ್ಟಲು ಅಲ್ಲ. ಜನರ ಸೇವೆ ಮಾಡುವುದಕ್ಕೆ, ಅದನ್ನು ಅವರು ಮುಂದುವರಿಸಲಿದ್ದಾರೆ
ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ
ಪಕ್ಷದಲ್ಲಿ ಎಲ್ಲರ ಅಭಿಪ್ರಾಯ ಕೇಳಿ ಸಮಾವೇಶ ಮಾಡಲು ಸಾಧ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷರು ದೊಡ್ಡವರಾ? ಅಥವಾ ಎಐಸಿಸಿ ಅಧ್ಯಕ್ಷರು ದೊಡ್ಡವರಾ? ಸಮಾವೇಶದ ಬಗ್ಗೆ ಎಐಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಈ ವಿಷಯದ ಕುರಿತು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚಿಸಿಲ್ಲ. ಸಮಾವೇಶಕ್ಕೆ ಡಿ.ಕೆ.ಶಿವಕುಮಾರ್ ಬರಲಿದ್ದಾರೆ