'ಪ್ರಕರಣಕ್ಕೆ ಸಂಬಂಧಿಸಿ ಮುರುಘಾ ಶರಣರ ಬೆಂಬಲಿಗರು ಸಾಕ್ಷಿ ನಾಶಮಾಡುವಲ್ಲಿ ನಿರತರಾಗಿದ್ದಾರೆ. ಪೊಲೀಸರು ಪ್ರಾಮಾಣಿಕ ತನಿಖೆ ನಡೆಸಿ ಸತ್ಯ ಹೊರಹಾಕಬೇಕು. ಮುರುಘಾ ಶರಣರು ಪೀಠ ತ್ಯಾಗ ಮಾಡಿ ತನಿಖೆಗೆ ಸಹಕರಿಸಬೇಕು. ಮುಖ್ಯಮಂತ್ರಿ, ಸಚಿವರು, ಅಧಿಕಾರಿಗಳು, ವಿವಿಧ ಮಠಾಧೀಶರು ಸಹ ಮುರುಘಾ ಶರಣರ ಪರವಾಗಿಯೇ ನಿಲ್ಲುತ್ತಿರುವ ಸಂಶಯ ವ್ಯಕ್ತವಾಗುತ್ತಿದೆ. ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ' ಎಂದು ಆರೋಪಿಸಿದರು.