<p><strong>ಬೆಂಗಳೂರು</strong>: ‘ದಲಿತ ಸಮುದಾಯದ ಸಬಲೀಕರಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಡಿ ತೆಗೆದಿರಿಸುವ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು’ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.</p>.<p>ಉಪ ಯೋಜನೆಗಳ ಅಡಿಯಲ್ಲಿ (ಎಸ್ಸಿಎಸ್ಪಿ/ಟಿಎಸ್ಪಿ) ಸರ್ಕಾರವು ಬಜೆಟ್ನಲ್ಲಿ ತೆಗೆದಿರಿಸಿದ ಅನುದಾನ ಮತ್ತು ಗ್ಯಾರಂಟಿ ಯೋಜನೆಗಳಿಗೆ ಅದರಲ್ಲಿ ಬಳಕೆ ಮಾಡಿಕೊಂಡ ಅನುದಾನದ ಮಾಹಿತಿಯನ್ನು, ಒಕ್ಕೂಟದ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಮುಂದೆ ಇರಿಸಿದರು.</p>.<p>‘ದಲಿತ ಸಂಘಟನೆಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವೈಯಕ್ತಿಕ ಸಮಸ್ಯೆಗಳ ಕುರಿತ ಮನವಿಗಳನ್ನೇ ಮುಂದಿಡಲಾಯಿತು. ಸಿದ್ದರಾಮಯ್ಯ ಸಹ ಇತರ ವಿಚಾರಗಳನ್ನು ಪ್ರಸ್ತಾಪಿಸಲಿಲ್ಲ. ಸಭೆ ಸಂಪೂರ್ಣ ವಿಫಲವಾಗಿದೆ’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.</p>.<p>‘ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದೆಡೆ ಕಸಿದುಕೊಳ್ಳುತ್ತಿದೆ. ದಲಿತರಿಗೆ ಅನ್ಯಾಯ ಮಾಡುತ್ತಿದೆ. ಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ಬಜೆಟ್ನಲ್ಲಿ ಖಾತರಿ ಕೊಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಬೇಕು’ ಎಂದು ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<p>ಆರ್ಪಿಐ, ಶೋಷಿತ ಸಮುದಾಯಗಳ ವೇದಿಕೆ, ಹಿಂದ ಸಂಘಟನೆಗಳ ಒಕ್ಕೂಟ, ಛಲವಾದಿ ಯುವ ಬ್ರಿಗೇಡ್, ದಲಿತ ಸಂರಕ್ಷ ಸೇನೆ, ಭೀಮ್ ಆರ್ಮಿ ಸೇರಿ ಹಲವು ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದಲಿತ ಸಮುದಾಯದ ಸಬಲೀಕರಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪಯೋಜನೆಯಡಿ ತೆಗೆದಿರಿಸುವ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು’ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಒತ್ತಾಯಿಸಿದರು.</p>.<p>ಉಪ ಯೋಜನೆಗಳ ಅಡಿಯಲ್ಲಿ (ಎಸ್ಸಿಎಸ್ಪಿ/ಟಿಎಸ್ಪಿ) ಸರ್ಕಾರವು ಬಜೆಟ್ನಲ್ಲಿ ತೆಗೆದಿರಿಸಿದ ಅನುದಾನ ಮತ್ತು ಗ್ಯಾರಂಟಿ ಯೋಜನೆಗಳಿಗೆ ಅದರಲ್ಲಿ ಬಳಕೆ ಮಾಡಿಕೊಂಡ ಅನುದಾನದ ಮಾಹಿತಿಯನ್ನು, ಒಕ್ಕೂಟದ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಮುಂದೆ ಇರಿಸಿದರು.</p>.<p>‘ದಲಿತ ಸಂಘಟನೆಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವೈಯಕ್ತಿಕ ಸಮಸ್ಯೆಗಳ ಕುರಿತ ಮನವಿಗಳನ್ನೇ ಮುಂದಿಡಲಾಯಿತು. ಸಿದ್ದರಾಮಯ್ಯ ಸಹ ಇತರ ವಿಚಾರಗಳನ್ನು ಪ್ರಸ್ತಾಪಿಸಲಿಲ್ಲ. ಸಭೆ ಸಂಪೂರ್ಣ ವಿಫಲವಾಗಿದೆ’ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.</p>.<p>‘ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದೆಡೆ ಕಸಿದುಕೊಳ್ಳುತ್ತಿದೆ. ದಲಿತರಿಗೆ ಅನ್ಯಾಯ ಮಾಡುತ್ತಿದೆ. ಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ಬಜೆಟ್ನಲ್ಲಿ ಖಾತರಿ ಕೊಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಬೇಕು’ ಎಂದು ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.</p>.<p>ಆರ್ಪಿಐ, ಶೋಷಿತ ಸಮುದಾಯಗಳ ವೇದಿಕೆ, ಹಿಂದ ಸಂಘಟನೆಗಳ ಒಕ್ಕೂಟ, ಛಲವಾದಿ ಯುವ ಬ್ರಿಗೇಡ್, ದಲಿತ ಸಂರಕ್ಷ ಸೇನೆ, ಭೀಮ್ ಆರ್ಮಿ ಸೇರಿ ಹಲವು ಸಂಘಟನೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>