<p><strong>ಬೆಂಗಳೂರು:</strong> ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ ಇಲ್ಲವೇ ಪ್ರತಿಭಟನೆ ನಡೆಸಲು ಅವಕಾಶ ನೀಡಬಹುದು. ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಅನುಮತಿ ನೀಡಬಾರದು’ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಒತ್ತಾಯಿಸಿದೆ.</p>.<p>‘ಸಾಂವಿಧಾನಿಕವಾಗಿ ಪಥ ಸಂಚಲನ ಮಾಡುವ ಅಧಿಕಾರ ಇರುವುದು ಪೊಲೀಸ್ ಹಾಗೂ ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್ಎಸ್ಎಸ್ ಮೆರವಣಿಗೆ ಮಾಡಲು ಬಯಸಿದರೆ ಅದಕ್ಕೆ ನಮ್ಮ ಯಾವುದೇ ತಕರಾರು ಇಲ್ಲ. ದೊಣ್ಣೆ ಹಿಡಿದೇ ಮೆರವಣಿಗೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲದೇ ಇರುವುದರಿಂದ ಈ ನಡೆಯನ್ನು ಸಮಿತಿ ವಿರೋಧಿಸಲಿದೆ’ ಎಂದು ಗುರುಪ್ರಸಾದ್ ಕೆರಗೋಡು, ಇಂದೂಧರ ಹೊನ್ನಾಪುರ, ಮಾವಳ್ಳಿ ಶಂಕರ್, ವಿ.ನಾಗರಾಜು, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್ ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಜಾತ್ಯತೀತವನ್ನು ಒಪ್ಪದ ಆರ್ಎಸ್ಎಸ್ ಒಂದೇ ಧರ್ಮದ ಚೌಕಟ್ಟಿನೊಳಗೆ ದೇಶ ಕಟ್ಟುವ ಮಾತನಾಡುತ್ತಿದೆ. ಪಂಚಾಂಗದ ಮೂಲಕ ಆಡಳಿತ ನಡೆಸಲು ಹವಣಿಸುತ್ತಿರುವ ಆರ್ಎಸ್ಎಸ್ನ ಅನಾಗರಿಕ ಪ್ರವೃತ್ತಿ ವಿರುದ್ದ ದನಿ ಎತ್ತಬೇಕಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಸೇರಿದಂತೆ ಯಾವುದೇ ಸಂಘ ಸಂಸ್ಥೆಗಳು ಮೆರವಣಿಗೆ ಇಲ್ಲವೇ ಪ್ರತಿಭಟನೆ ನಡೆಸಲು ಅವಕಾಶ ನೀಡಬಹುದು. ದೊಣ್ಣೆ ಹಿಡಿದು ಪಥ ಸಂಚಲನ ನಡೆಸುವುದಕ್ಕೆ ಅನುಮತಿ ನೀಡಬಾರದು’ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಒತ್ತಾಯಿಸಿದೆ.</p>.<p>‘ಸಾಂವಿಧಾನಿಕವಾಗಿ ಪಥ ಸಂಚಲನ ಮಾಡುವ ಅಧಿಕಾರ ಇರುವುದು ಪೊಲೀಸ್ ಹಾಗೂ ಇನ್ನಿತರ ರಕ್ಷಣಾ ಪಡೆಗಳಿಗೆ ಮಾತ್ರ. ಆರ್ಎಸ್ಎಸ್ ಮೆರವಣಿಗೆ ಮಾಡಲು ಬಯಸಿದರೆ ಅದಕ್ಕೆ ನಮ್ಮ ಯಾವುದೇ ತಕರಾರು ಇಲ್ಲ. ದೊಣ್ಣೆ ಹಿಡಿದೇ ಮೆರವಣಿಗೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲದೇ ಇರುವುದರಿಂದ ಈ ನಡೆಯನ್ನು ಸಮಿತಿ ವಿರೋಧಿಸಲಿದೆ’ ಎಂದು ಗುರುಪ್ರಸಾದ್ ಕೆರಗೋಡು, ಇಂದೂಧರ ಹೊನ್ನಾಪುರ, ಮಾವಳ್ಳಿ ಶಂಕರ್, ವಿ.ನಾಗರಾಜು, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್ ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಜಾತ್ಯತೀತವನ್ನು ಒಪ್ಪದ ಆರ್ಎಸ್ಎಸ್ ಒಂದೇ ಧರ್ಮದ ಚೌಕಟ್ಟಿನೊಳಗೆ ದೇಶ ಕಟ್ಟುವ ಮಾತನಾಡುತ್ತಿದೆ. ಪಂಚಾಂಗದ ಮೂಲಕ ಆಡಳಿತ ನಡೆಸಲು ಹವಣಿಸುತ್ತಿರುವ ಆರ್ಎಸ್ಎಸ್ನ ಅನಾಗರಿಕ ಪ್ರವೃತ್ತಿ ವಿರುದ್ದ ದನಿ ಎತ್ತಬೇಕಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>