<p><strong>ಕಲಬುರ್ಗಿ: </strong>‘ದಲಿತ’ ಪದ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ. ದೇಶದಾದ್ಯಂತ ವಿದ್ಯುತ್ ಸಂಚಲನ ಮೂಡಿಸುತ್ತದೆ. ಆದ್ದರಿಂದ ದಲಿತ ಪದ ಬಳಕೆ ಇರಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಅರವಿಂದ ಮಾಲಗತ್ತಿ ಪ್ರತಿಪಾದಿಸಿದರು.</p>.<p>ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ‘ಅಂಬೇಡ್ಕರ್ ಚಿಂತನೆಗಳ ಜಿಜ್ಞಾಸೆ’ ಕುರಿತ ಎರಡು ದಿನಗಳ ಕಮ್ಮಟದಲ್ಲಿ ಅವರು ಮಾತನಾಡಿದರು.</p>.<p>‘ದಲಿತ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ದೇಶಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಈಚೆಗೆ ಸೂಚಿಸಿದೆ. ಸರ್ಕಾರಿ ದಾಖಲೆಗಳಿಂದ ಆ ಪದವನ್ನು ತೆಗೆದು ಹಾಕುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ದಲಿತ ಪದವನ್ನು ತೆಗೆದು ಹಾಕಿದರೆ ಸಂಘಟನೆಗಳು ನೆಲ ಕಚ್ಚುತ್ತವೆ ಎಂಬ ಹುನ್ನಾರ ಇದರ ಹಿಂದೆ ಇದೆ’ ಎಂದು ಆರೋಪಿಸಿದರು.</p>.<p>‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಂಬೇಡ್ಕರ್ ಅವರ ಪೂರ್ಣ ಹೆಸರನ್ನು ಬರೆಯಬೇಕು ಎಂದು ಆದೇಶಿಸಿದ್ದಾರೆ. ಇದು ಸ್ವಾಗತಾರ್ಹ. ಆದರೆ, ಆದಿತ್ಯನಾಥರ ತಂದೆಯ ಹೆಸರು ರಾಮ್ಜಿ ಎಂಬುದು ಎಲ್ಲರಿಗೂ ಗೊತ್ತಾಗಲಿ ಎಂಬುದು ಅವರ ಉದ್ದೇಶವಾಗಿದೆ’ ಎಂದು ದೂರಿದರು.</p>.<p>‘ರಾಮ, ಕೃಷ್ಣನ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ ಅವರ ಹೆಸರಿನ ಬಗ್ಗೆ ಚರ್ಚೆ ನಡೆಯುವುದಿಲ್ಲ. ಆದರೆ, ಅಂಬೇಡ್ಕರ್ ವಿಷಯದಲ್ಲಿ ಅವರ ವಿಚಾರ ಧಾರೆಗಳ ಬಗ್ಗೆ ಚರ್ಚಿಸದೇ ಹೆಸರಿನ ಬಗ್ಗೆ ಚರ್ಚೆಗಳಾಗುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ದಲಿತ’ ಪದ ಸಂಘಟನಾತ್ಮಕ ಶಕ್ತಿಯನ್ನು ಹೊಂದಿದೆ. ದೇಶದಾದ್ಯಂತ ವಿದ್ಯುತ್ ಸಂಚಲನ ಮೂಡಿಸುತ್ತದೆ. ಆದ್ದರಿಂದ ದಲಿತ ಪದ ಬಳಕೆ ಇರಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಅರವಿಂದ ಮಾಲಗತ್ತಿ ಪ್ರತಿಪಾದಿಸಿದರು.</p>.<p>ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬುಧವಾರ ಏರ್ಪಡಿಸಿದ್ದ ‘ಅಂಬೇಡ್ಕರ್ ಚಿಂತನೆಗಳ ಜಿಜ್ಞಾಸೆ’ ಕುರಿತ ಎರಡು ದಿನಗಳ ಕಮ್ಮಟದಲ್ಲಿ ಅವರು ಮಾತನಾಡಿದರು.</p>.<p>‘ದಲಿತ ಪದವನ್ನು ಬಳಸದಂತೆ ಮಾಧ್ಯಮಗಳಿಗೆ ನಿರ್ದೇಶಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಈಚೆಗೆ ಸೂಚಿಸಿದೆ. ಸರ್ಕಾರಿ ದಾಖಲೆಗಳಿಂದ ಆ ಪದವನ್ನು ತೆಗೆದು ಹಾಕುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ದಲಿತ ಪದವನ್ನು ತೆಗೆದು ಹಾಕಿದರೆ ಸಂಘಟನೆಗಳು ನೆಲ ಕಚ್ಚುತ್ತವೆ ಎಂಬ ಹುನ್ನಾರ ಇದರ ಹಿಂದೆ ಇದೆ’ ಎಂದು ಆರೋಪಿಸಿದರು.</p>.<p>‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಂಬೇಡ್ಕರ್ ಅವರ ಪೂರ್ಣ ಹೆಸರನ್ನು ಬರೆಯಬೇಕು ಎಂದು ಆದೇಶಿಸಿದ್ದಾರೆ. ಇದು ಸ್ವಾಗತಾರ್ಹ. ಆದರೆ, ಆದಿತ್ಯನಾಥರ ತಂದೆಯ ಹೆಸರು ರಾಮ್ಜಿ ಎಂಬುದು ಎಲ್ಲರಿಗೂ ಗೊತ್ತಾಗಲಿ ಎಂಬುದು ಅವರ ಉದ್ದೇಶವಾಗಿದೆ’ ಎಂದು ದೂರಿದರು.</p>.<p>‘ರಾಮ, ಕೃಷ್ಣನ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತದೆ. ಆದರೆ ಅವರ ಹೆಸರಿನ ಬಗ್ಗೆ ಚರ್ಚೆ ನಡೆಯುವುದಿಲ್ಲ. ಆದರೆ, ಅಂಬೇಡ್ಕರ್ ವಿಷಯದಲ್ಲಿ ಅವರ ವಿಚಾರ ಧಾರೆಗಳ ಬಗ್ಗೆ ಚರ್ಚಿಸದೇ ಹೆಸರಿನ ಬಗ್ಗೆ ಚರ್ಚೆಗಳಾಗುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>