‘ಪ್ರಾಚೀನ ಭಾರತದ ವಿದ್ವತ್ತು ಶಾಂತಿ, ಭ್ರಾತೃತ್ವ ಮತ್ತು ಜಗತ್ತಿನ ಎಲ್ಲರ ಒಳಿತನ್ನು ಬಯಸುವುದಕ್ಕೆ ಪೂರಕವಾಗಿತ್ತು. ‘ಉದಾರ ಚರಿತಾನಾಂ ತು ವಸುಧೈವ ಕುಟುಂಬಕಂ’ ಎಂಬ ತತ್ವದಲ್ಲಿ ದೇಶ ನಂಬಿಕೆ ಹೊಂದಿದೆ. ಈ ಕುರಿತು ದೇಶದ ಪ್ರಸಿದ್ಧ ಚಿಂತಕರು ಎರಡು ದಿನಗಳ ಸಾಹಿತ್ಯೋತ್ಸವದಲ್ಲಿ ಚಿಂತನ ಮಂಥನ ನಡೆಸಲಿದ್ದಾರೆ. ವಿಚಾರ ಮಂಡನೆ, ಚರ್ಚೆ, ಸಂವಾದ, ಪುಸ್ತಕ ವಿಮರ್ಶೆ, ಕಾರ್ಯಾಗಾರ, ಪುಸ್ತಕ ಮತ್ತು ಚಿತ್ರಕಲಾ ಪ್ರದರ್ಶನಗಳು ಈ ಉತ್ಸವದ ಭಾಗವಾಗಿರುತ್ತವೆ’ ಎಂದು ಮಂಗಳೂರು ಸಾಹಿತ್ಯೋತ್ಸವದ ಸಂಘಟನಾ ಸಮಿತಿಯ ಪ್ರಕಟಣೆ ತಿಳಿಸಿದೆ.