<p><strong>ಬೆಂಗಳೂರು:</strong> ನಿರಶನನಿರತ ರೈತ ಜಗಜೀತ್ ಸಿಂಗ್ ದಲ್ಲೇವಾಲ್ ಅವರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಬಿ.ಆರ್. ಪಾಟೀಲ ಅವರು ಏಕಾಂಗಿಯಾಗಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲ್ಲೇವಾಲ್ ನ. 26ರಿಂದ ಪಂಜಾಬ್–ಹರಿಯಾಣ ಗಡಿಯಲ್ಲಿ ನಿರಶನ ನಡೆಸುತ್ತಿದ್ದಾರೆ. </p>.<p>‘ದಲ್ಲೇವಾಲ್ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ. ಆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ’ ಎಂದು ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ದಲ್ಲೇವಾಲ್ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಸರ್ಕಾರ ದಲ್ಲೇವಾಲ್ ಅವರ ಹಕ್ಕೊತ್ತಾಯಕ್ಕೆ ತಕ್ಷಣ ಸ್ಪಂದಿಸಬೇಕು. ಎಂಎಸ್ಪಿ ಕಾನೂನು ರಕ್ಷಣೆ ನೀಡಿ ರೈತರನ್ನೂ ಉಳಿಸಬೇಕು ಎಂದೂ ಆಗ್ರಹಿಸಿದರು.</p>.<p>ಬಿ.ಆರ್. ಪಾಟೀಲ ಅವರಿಗೆ ರೈತ ಹೋರಾಟಗಾರ ವೀರಸಂಗಯ್ಯ ಬೆಂಬಲ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿರಶನನಿರತ ರೈತ ಜಗಜೀತ್ ಸಿಂಗ್ ದಲ್ಲೇವಾಲ್ ಅವರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಬಿ.ಆರ್. ಪಾಟೀಲ ಅವರು ಏಕಾಂಗಿಯಾಗಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲ್ಲೇವಾಲ್ ನ. 26ರಿಂದ ಪಂಜಾಬ್–ಹರಿಯಾಣ ಗಡಿಯಲ್ಲಿ ನಿರಶನ ನಡೆಸುತ್ತಿದ್ದಾರೆ. </p>.<p>‘ದಲ್ಲೇವಾಲ್ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ. ಆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ’ ಎಂದು ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ದಲ್ಲೇವಾಲ್ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಂದ್ರ ಸರ್ಕಾರ ದಲ್ಲೇವಾಲ್ ಅವರ ಹಕ್ಕೊತ್ತಾಯಕ್ಕೆ ತಕ್ಷಣ ಸ್ಪಂದಿಸಬೇಕು. ಎಂಎಸ್ಪಿ ಕಾನೂನು ರಕ್ಷಣೆ ನೀಡಿ ರೈತರನ್ನೂ ಉಳಿಸಬೇಕು ಎಂದೂ ಆಗ್ರಹಿಸಿದರು.</p>.<p>ಬಿ.ಆರ್. ಪಾಟೀಲ ಅವರಿಗೆ ರೈತ ಹೋರಾಟಗಾರ ವೀರಸಂಗಯ್ಯ ಬೆಂಬಲ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>