ಕೃಷ್ಣಾ ಜಲಾನಯನ ಪ್ರದೇಶದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳ ಒಟ್ಟು ಸಾಮರ್ಥ್ಯ 422.45 ಟಿಎಂಸಿ ಅಡಿ ಇದ್ದು, ಈಗ 88.57 ಟಿಎಂಸಿ ಅಡಿ ನೀರು ಇದೆ. ಕಳೆದ ವರ್ಷ ಇದೇ ವೇಳೆ 123.25 ಟಿಎಂಸಿ ಅಡಿ ನೀರು ಇತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಂಗಳವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆ.