ಧಾರವಾಡ: ಡಾ. ದ.ರಾ.ಬೇಂದ್ರೆರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕೊಡುವ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಕನ್ನಡದ ಹಿರಿಯ ಕವಿಗಳಾದ ಪ್ರೊ. ಕೆ.ಎಸ್. ನಿಸಾರ್ ಅಹ್ಮದ್ ಮತ್ತು ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ ₹50 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 31ರಂದು ಸಾಧನಕೇರಿಯಲ್ಲಿ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ.ಹಿರೇಮಠ ತಿಳಿಸಿದರು.