<p><strong>ಬೆಂಗಳೂರು</strong>: ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರು ತಮ್ಮ ಖಾತೆಯಿಂದ ಪವಿತ್ರಾ ಪಿ. ಎಂಬುವವರ ಖಾತೆಗೆ ₹ 2 ಕೋಟಿ ಸಂದಾಯ ಮಾಡಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದ್ದು, ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾಗೌಡ ಅವರಿಗೇ ಈ ಹಣ ಸಂದಾಯ ಆಗಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ಧಾರೆ.</p>.<p>ನಟ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಅವರು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ–1 ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>‘ರಾಜಾಜಿನಗರದಲ್ಲಿ ಇರುವ ಬ್ಯಾಂಕ್ವೊಂದಕ್ಕೆ ಪವಿತ್ರಾ ಪಿ. ಹೆಸರಿನ ಖಾತೆಗೆ 2017ರಲ್ಲಿ ₹1 ಕೋಟಿ ಹಾಗೂ 2018ರಲ್ಲಿ ₹1 ಕೋಟಿ ಜಮಾವಣೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸೌಂದರ್ಯ ಜಗದೀಶ್ ಅವರ ಪಾಲುದಾರರೊಬ್ಬರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>ಸೌಂದರ್ಯ ಜಗದೀಶ್ ಅವರು ಏಪ್ರಿಲ್ 14ರಂದು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿತ್ತು.</p>.<p>ಅದಾದ ಮೇಲೆ, ಮೇ 24ರಂದು ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ‘₹ 60 ಕೋಟಿ ವಂಚನೆಯಿಂದ ಪತಿ ನೊಂದಿದ್ದರು’ ಎಂದು ಆರೋಪಿಸಿ, ದೂರು ನೀಡಿದ್ದರು. ಪ್ರತ್ಯೇಕ ದೂರು ನೀಡಿದ್ದರಿಂದ ಆತ್ಮಹತ್ಯೆ ಪ್ರಚೋದನೆ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದರು. ಇದೀಗ ಪವಿತ್ರಾ ಪಿ. ಹೆಸರಿನ ಖಾತೆಗೆ ಹಣ ಸಂದಾಯ ಆಗಿರುವುದು ಗೊತ್ತಾಗಿದೆ.</p>.<p>‘ಹಣದ ವ್ಯವಹಾರದ ಬಗ್ಗೆ ಸೌಂದರ್ಯ ಜಗದೀಶ್ ಅವರ ಪಾಲುದಾರ ಸುರೇಶ್ ಅವರು ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಸೌಂದರ್ಯ ಜಗದೀಶ್ ಅವರು ‘ಸೌಂದರ್ಯ ಕನ್ಸ್ಟ್ರಕ್ಷನ್’ ಕಂಪನಿ ನಡೆಸುತ್ತಿದ್ದರು. ವಿ.ಎಸ್.ಸುರೇಶ್, ಎಸ್.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪನಿಯ ಸಹ ಪಾಲುದಾರರು ಆಗಿದ್ದರು. ತಮ್ಮ ಕೆಲ ಆಸ್ತಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ ಸೌಂದರ್ಯ ಜಗದೀಶ್, ₹60 ಕೋಟಿ ಸಾಲ ಪಡೆದು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು, ₹60 ಕೋಟಿ ವಂಚಿಸಿದ್ದರು. ಜೊತೆಗೆ, ಸೌಂದರ್ಯ ಜಗದೀಶ್ ಅವರಿಂದ ಹಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಸಹ ಪಾಲುದಾರರು, ಜೀವ ಬೆದರಿಕೆ ಒಡ್ಡಿದ್ದರು. ಇದರ ಕಿರುಕುಳದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ’ ಎಂದು ಶಶಿರೇಖಾ ದೂರಿನಲ್ಲಿ ತಿಳಿಸಿದ್ದರು.</p>.<p>‘ಸೌಂದರ್ಯ ಜಗದೀಶ್ ಅವರ ಕೊಠಡಿಯಲ್ಲಿದ್ದ ಬಟ್ಟೆಯಲ್ಲಿ ಮರಣ ಪತ್ರವೊಂದು ಸಿಕ್ಕಿತ್ತು. ಅದೇ ಮರಣಪತ್ರ ಆಧರಿಸಿ ಪತ್ನಿ ದೂರು ನೀಡಿದ್ದರು. ಅದನ್ನು ಆಧರಿಸಿಯೇ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿನಿಮಾ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್ ಅವರು ತಮ್ಮ ಖಾತೆಯಿಂದ ಪವಿತ್ರಾ ಪಿ. ಎಂಬುವವರ ಖಾತೆಗೆ ₹ 2 ಕೋಟಿ ಸಂದಾಯ ಮಾಡಿರುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದ್ದು, ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ಪವಿತ್ರಾಗೌಡ ಅವರಿಗೇ ಈ ಹಣ ಸಂದಾಯ ಆಗಿರಬಹುದೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ಧಾರೆ.</p>.<p>ನಟ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಅವರು ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ–1 ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<p>‘ರಾಜಾಜಿನಗರದಲ್ಲಿ ಇರುವ ಬ್ಯಾಂಕ್ವೊಂದಕ್ಕೆ ಪವಿತ್ರಾ ಪಿ. ಹೆಸರಿನ ಖಾತೆಗೆ 2017ರಲ್ಲಿ ₹1 ಕೋಟಿ ಹಾಗೂ 2018ರಲ್ಲಿ ₹1 ಕೋಟಿ ಜಮಾವಣೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸೌಂದರ್ಯ ಜಗದೀಶ್ ಅವರ ಪಾಲುದಾರರೊಬ್ಬರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ’ ಎಂದು ಮೂಲಗಳು ಹೇಳಿವೆ.</p>.<p>ಸೌಂದರ್ಯ ಜಗದೀಶ್ ಅವರು ಏಪ್ರಿಲ್ 14ರಂದು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಾಗಿತ್ತು.</p>.<p>ಅದಾದ ಮೇಲೆ, ಮೇ 24ರಂದು ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ‘₹ 60 ಕೋಟಿ ವಂಚನೆಯಿಂದ ಪತಿ ನೊಂದಿದ್ದರು’ ಎಂದು ಆರೋಪಿಸಿ, ದೂರು ನೀಡಿದ್ದರು. ಪ್ರತ್ಯೇಕ ದೂರು ನೀಡಿದ್ದರಿಂದ ಆತ್ಮಹತ್ಯೆ ಪ್ರಚೋದನೆ ಆಯಾಮದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದರು. ಇದೀಗ ಪವಿತ್ರಾ ಪಿ. ಹೆಸರಿನ ಖಾತೆಗೆ ಹಣ ಸಂದಾಯ ಆಗಿರುವುದು ಗೊತ್ತಾಗಿದೆ.</p>.<p>‘ಹಣದ ವ್ಯವಹಾರದ ಬಗ್ಗೆ ಸೌಂದರ್ಯ ಜಗದೀಶ್ ಅವರ ಪಾಲುದಾರ ಸುರೇಶ್ ಅವರು ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>‘ಸೌಂದರ್ಯ ಜಗದೀಶ್ ಅವರು ‘ಸೌಂದರ್ಯ ಕನ್ಸ್ಟ್ರಕ್ಷನ್’ ಕಂಪನಿ ನಡೆಸುತ್ತಿದ್ದರು. ವಿ.ಎಸ್.ಸುರೇಶ್, ಎಸ್.ಪಿ. ಹೊಂಬಣ್ಣ ಹಾಗೂ ಸುಧೀಂದ್ರ ಅವರು ಕಂಪನಿಯ ಸಹ ಪಾಲುದಾರರು ಆಗಿದ್ದರು. ತಮ್ಮ ಕೆಲ ಆಸ್ತಿಯನ್ನು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ ಸೌಂದರ್ಯ ಜಗದೀಶ್, ₹60 ಕೋಟಿ ಸಾಲ ಪಡೆದು ಕಂಪನಿಯಲ್ಲಿ ಹೂಡಿಕೆ ಮಾಡಿದ್ದರು. ಕಂಪನಿ ನಷ್ಟದಲ್ಲಿರುವುದಾಗಿ ಹೇಳಿದ್ದ ಸಹ ಪಾಲುದಾರರು, ₹60 ಕೋಟಿ ವಂಚಿಸಿದ್ದರು. ಜೊತೆಗೆ, ಸೌಂದರ್ಯ ಜಗದೀಶ್ ಅವರಿಂದ ಹಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಸಹ ಪಾಲುದಾರರು, ಜೀವ ಬೆದರಿಕೆ ಒಡ್ಡಿದ್ದರು. ಇದರ ಕಿರುಕುಳದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ಧಾರೆ’ ಎಂದು ಶಶಿರೇಖಾ ದೂರಿನಲ್ಲಿ ತಿಳಿಸಿದ್ದರು.</p>.<p>‘ಸೌಂದರ್ಯ ಜಗದೀಶ್ ಅವರ ಕೊಠಡಿಯಲ್ಲಿದ್ದ ಬಟ್ಟೆಯಲ್ಲಿ ಮರಣ ಪತ್ರವೊಂದು ಸಿಕ್ಕಿತ್ತು. ಅದೇ ಮರಣಪತ್ರ ಆಧರಿಸಿ ಪತ್ನಿ ದೂರು ನೀಡಿದ್ದರು. ಅದನ್ನು ಆಧರಿಸಿಯೇ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>