<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.</p>.<p>ಪ್ರಕರಣದಲ್ಲಿ ವೆಂಕಟೇಶ್ ಎಂಬ ಸಾಕ್ಷಿದಾರನನ್ನು ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಳ್ಳಲಾಯಿತು. ನಂತರ ಇತರೆ ಇಬ್ಬರು ಸಾಕ್ಷಿದಾರರನ್ನು ವಿಚಾರಣೆಗೆ ಕರೆಸಲು ಸಮನ್ಸ್ ಜಾರಿ ಮಾಡಲಾಯಿತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 2ಕ್ಕೆ ಮುಂದೂಡಿದೆ.</p>.<p>ಪ್ರಮಾಣ ಪತ್ರ ಸಲ್ಲಿಸಲು ಸೂಚನೆ: ‘ಬೇರೆಡೆ ಮೊಬೈಲ್ ಜಪ್ತಿ ಮಾಡಿ, ಠಾಣೆಯಲ್ಲಿ ಜಪ್ತಿ ಮಾಡಿದ್ದಾಗಿ ತನಿಖಾಧಿಕಾರಿಗಳು ಹೇಳಿದ್ದಾರೆ. ಠಾಣೆ ಭೇಟಿಗೆ ಅವಕಾಶ ನೀಡಬೇಕು’ ಎಂದು ಪ್ರಕರಣದ 3ನೇ ಆರೋಪಿ ಪವನ್ ಪರ ವಕೀಲ ಡಿ.ಎಸ್. ಸುಧನ್ವ ನ್ಯಾಯಾಧೀಶರಲ್ಲಿ ಕೋರಿದರು.</p>.<p>ಅದಕ್ಕೆ ನ್ಯಾಯಾಧೀಶರು, ಪೊಲೀಸ್ ಠಾಣೆ ಸಾರ್ವಜನಿಕ ಸ್ಥಳ ಅಗಿದ್ದು, ಅಲ್ಲಿ ಯಾರು ಬೇಕಾದರೂ ಭೇಟಿ ಮಾಡಬಹುದು ಎಂದರು.</p>.<p>‘ಸಹೋದ್ಯೋಗಿಯೊಬ್ಬರು ಸೋಮವಾರ ಠಾಣೆಗೆ ಹೋಗಿದ್ದರು. ಪೊಲೀಸ್ ಅಧಿಕಾರಿಗಳು ಒಳಗೆ ಬಿಟ್ಟಿಲ್ಲ. ಹಿರಿಯ ಅಧಿಕಾರಿಗಳ ಸೂಚನೆ ಇರುವುದರಿಂದ ಪ್ರವೇಶ ನಿರಾಕರಿಸಲಾಗಿದೆ ಎಂದಿದ್ದಾರೆ. ಆದ್ದರಿಂದ ಠಾಣೆಗೆ ಭೇಟಿ ನೀಡಲು ಅವಕಾಶ ನೀಡಿ’ ಎಂದು ಸುಧನ್ವ ಅವರು ಕೋರಿದರು.</p>.<p>ಬಳಿಕ ನ್ಯಾಯಾಧೀಶರು, ಈ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.</p>.<p>ಪ್ರಕರಣದಲ್ಲಿ ವೆಂಕಟೇಶ್ ಎಂಬ ಸಾಕ್ಷಿದಾರನನ್ನು ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಳ್ಳಲಾಯಿತು. ನಂತರ ಇತರೆ ಇಬ್ಬರು ಸಾಕ್ಷಿದಾರರನ್ನು ವಿಚಾರಣೆಗೆ ಕರೆಸಲು ಸಮನ್ಸ್ ಜಾರಿ ಮಾಡಲಾಯಿತು. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಮಾರ್ಚ್ 2ಕ್ಕೆ ಮುಂದೂಡಿದೆ.</p>.<p>ಪ್ರಮಾಣ ಪತ್ರ ಸಲ್ಲಿಸಲು ಸೂಚನೆ: ‘ಬೇರೆಡೆ ಮೊಬೈಲ್ ಜಪ್ತಿ ಮಾಡಿ, ಠಾಣೆಯಲ್ಲಿ ಜಪ್ತಿ ಮಾಡಿದ್ದಾಗಿ ತನಿಖಾಧಿಕಾರಿಗಳು ಹೇಳಿದ್ದಾರೆ. ಠಾಣೆ ಭೇಟಿಗೆ ಅವಕಾಶ ನೀಡಬೇಕು’ ಎಂದು ಪ್ರಕರಣದ 3ನೇ ಆರೋಪಿ ಪವನ್ ಪರ ವಕೀಲ ಡಿ.ಎಸ್. ಸುಧನ್ವ ನ್ಯಾಯಾಧೀಶರಲ್ಲಿ ಕೋರಿದರು.</p>.<p>ಅದಕ್ಕೆ ನ್ಯಾಯಾಧೀಶರು, ಪೊಲೀಸ್ ಠಾಣೆ ಸಾರ್ವಜನಿಕ ಸ್ಥಳ ಅಗಿದ್ದು, ಅಲ್ಲಿ ಯಾರು ಬೇಕಾದರೂ ಭೇಟಿ ಮಾಡಬಹುದು ಎಂದರು.</p>.<p>‘ಸಹೋದ್ಯೋಗಿಯೊಬ್ಬರು ಸೋಮವಾರ ಠಾಣೆಗೆ ಹೋಗಿದ್ದರು. ಪೊಲೀಸ್ ಅಧಿಕಾರಿಗಳು ಒಳಗೆ ಬಿಟ್ಟಿಲ್ಲ. ಹಿರಿಯ ಅಧಿಕಾರಿಗಳ ಸೂಚನೆ ಇರುವುದರಿಂದ ಪ್ರವೇಶ ನಿರಾಕರಿಸಲಾಗಿದೆ ಎಂದಿದ್ದಾರೆ. ಆದ್ದರಿಂದ ಠಾಣೆಗೆ ಭೇಟಿ ನೀಡಲು ಅವಕಾಶ ನೀಡಿ’ ಎಂದು ಸುಧನ್ವ ಅವರು ಕೋರಿದರು.</p>.<p>ಬಳಿಕ ನ್ಯಾಯಾಧೀಶರು, ಈ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>