<p><strong>ನವದೆಹಲಿ:</strong> ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಗುರುವಾರ ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ತೀಕ್ಷ್ಣವಾದ ಕೆಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. </p> <h2>ಆ ಅಭಿಪ್ರಾಯಗಳು ಹೀಗಿವೆ:</h2>.<ol><li><p>ಆರೋಪಿಗಳು ಎಷ್ಟೇ ಪ್ರಭಾವಿಯಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ. ಈ ತೀರ್ಪು ನ್ಯಾಯದಾನ ವ್ಯವಸ್ಥೆಗೆ ಒಂದು ಬಲವಾದ ಸಂದೇಶ ನೀಡುತ್ತದೆ. ಆರೋಪಿಗಳಿಗೆ ಜೈಲಿನಲ್ಲಿ ವಿಶೇಷ ಅಥವಾ ಫೈವ್ ಸ್ಟಾರ್ ಆತಿಥ್ಯ ದೊರೆಯುತ್ತಿದೆ ಎಂದು ನಮಗೆ ಗೊತ್ತಾದ ಕ್ಷಣವೇ ಜೈಲು ಅಧೀಕ್ಷಕ ಸೇರಿದಂತೆ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು.</p></li><li><p>ಆರೋಪಿಯ ವರ್ತನೆ, ಪ್ರಭಾವ, ಜೈಲಿನ ನಿಯಮಗಳ ಉಲ್ಲಂಘನೆ ಹಾಗೂ ಆರೋಪಗಳ ಗಾಂಭೀರ್ಯವು ಅವರು ಜಾಮೀನಿಗೆ ಅರ್ಹವಾಗಿಲ್ಲ ಎಂಬುದನ್ನು ಸೂಚಿಸುತ್ತವೆ.</p></li><li><p> ಪ್ರಸ್ತುತ ಪ್ರಕರಣದಲ್ಲಿ ದರ್ಶನ್ (ಎರಡನೇ ಆರೋಪಿ) ಅವರ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ಅವರಿಗೆ ಜಾಮೀನು ಮಂಜೂರು ಮಾಡಿರುವ ಆದೇಶವು ವಿವೇಚನಾ ಅಧಿಕಾರದ ಮತಿಗೆಟ್ಟ ದುರುಪಯೋಗ ಮತ್ತು ಕಾನೂನಾತ್ಮಕವಾಗಿ ಒಪ್ಪಲಾಗದಂತಹದ್ದು.</p></li><li><p> ನಾವು ಜಾಮೀನು ಮಂಜೂರು ಹಾಗೂ ರದ್ದತಿ ಎರಡನ್ನೂ ಪರಿಗಣಿಸಿದ್ದೇವೆ. ಈ ಪ್ರಕರಣದಲ್ಲಿ ಹೈಕೋರ್ಟ್ನ ತೀರ್ಪು ಗಂಭೀರ ಕಾನೂನು ನ್ಯೂನತೆಗಳನ್ನು ಒಳಗೊಂಡಿದೆ. ಈ ತೀರ್ಪು ಸೆಕ್ಷನ್ 302, 120ಬಿ ಮತ್ತು 34 ಸೆಕ್ಷನ್ಗಳ ಅಡಿಯಲ್ಲಿ ಜಾಮೀನು ಮಂಜೂರು ಮಾಡಲು ಯಾವುದೇ ವಿಶೇಷ ಅಥವಾ ಸ್ಪಷ್ಟ ಕಾರಣ ದಾಖಲಿಸಲು ವಿಫಲವಾಗಿದೆ.</p></li><li><p>ಇಂತಹ ಪ್ರಕರಣಗಳಲ್ಲಿ ಅಪರಾಧದ ಸ್ವರೂಪ ಮತ್ತು ಆಳ, ಆರೋಪಿಯ ಪಾತ್ರ ಮತ್ತು ವಿಚಾರಣೆಯಲ್ಲಿ ಮಧ್ಯಪ್ರವೇಶ ಮಾಡುವ ಅಪಾಯಗಳನ್ನು ಅರ್ಥ ಮಾಡಿಕೊಳ್ಳದೆ ಜಾಮೀನು ನೀಡುವುದು ವಿವೇಚನಾ ಅಧಿಕಾರದ ದುರುಪಯೋಗಕ್ಕೆ ಕಾರಣವಾಗುತ್ತದೆ.</p></li><li><p>ಜನಪ್ರಿಯತೆಯು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಕವಚವಾಗಲು ಸಾಧ್ಯವಿಲ್ಲ .</p></li><li><p> ಜಾಮೀನು ದೊರೆತ ತಕ್ಷಣವೇ 2ನೇ ಆರೋಪಿಯು ಸಾರ್ವಜನಿಕ ಕಾರ್ಯಕ್ರಮಗಳಿಗೆ ಮರಳಿರುವುದು, ವಿಚಾರಣಾ ಸಾಕ್ಷಿಗಳೊಂದಿಗೆ ವೇದಿಕೆ ಹಂಚಿಕೊಂಡಿರುವುದು, ಪೊಲೀಸ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿರುವುದು... ಇವೆಲ್ಲವೂ ವಿಚಾರಣೆಯ ಸಮಗ್ರತೆಗೆ ಬೆದರಿಕೆ ಒಡ್ಡುತ್ತವೆ.</p></li><li><p>ಸೆಲೆಬ್ರಿಟಿಗಳು ಸಮಾಜದಲ್ಲಿ ಮಾದರಿಯಾಗಿರುತ್ತಾರೆ. ಅವರು ತಮ್ಮ ಪ್ರಸಿದ್ಧಿಯಿಂದ ಸಾಮಾಜಿಕ ಮೌಲ್ಯಗಳ ಮೇಲೆ ಗಣನೀಯ ಪ್ರಭಾವ ಬೀರುತ್ತಾರೆ. ಅಂತಹ ವ್ಯಕ್ತಿಯು ಸಂಚುಗಾರಿಕೆ ಮತ್ತು ಹತ್ಯೆಯಂತಹ ಗಂಭೀರ ಆರೋಪಗಳನ್ನು ಹೊಂದಿದ್ದರೂ ಅವರನ್ನು ಸಡಿಲ ಬಿಡುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ.</p></li><li><p>ಸಾಕ್ಷಿಗಳ ಮೇಲೆ ಬೆದರಿಕೆ, ವಿಧಿವಿಜ್ಞಾನ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಮೇಲೆ ಒತ್ತಡವು ಜಾಮೀನಿನ ರದ್ದತಿಯ ಅಗತ್ಯತೆಯನ್ನು ಒತ್ತಿ ಹೇಳುತ್ತಿವೆ.</p></li><li><p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ವ್ಯಕ್ತಿಯು ತನ್ನ ಸಾಮಾಜಿಕ ಸ್ಥಿತಿಗತಿ ಅಥವಾ ಆರ್ಥಿಕ ಸ್ಥಿತಿಗತಿಯ ಕಾರಣದಿಂದ ಕಾನೂನಾತ್ಮಕ ಉತ್ತರದಾಯಿತ್ವದಿಂದ ಹೊರಗಿರಲು ಸಾಧ್ಯವಿಲ್ಲ .</p></li><li><p>ಸಾಕ್ಷಿಗಳ ವಿಶ್ವಾಸಾರ್ಹತೆ ಮತ್ತು ಅವಲಂಬನೆಯನ್ನು ವಿಶ್ಲೇಷಿಸುವ ಅಧಿಕಾರವಿರುವುದು ವಿಚಾರಣಾ ನ್ಯಾಯಾಲಯಕ್ಕೆ ಮಾತ್ರ.</p></li><li><p>ಈ ಪ್ರಕರಣದ ಗಾಂಭೀರ್ಯ ಪರಿಗಣಿಸಿ, ವಿಚಾರಣೆ ತ್ವರಿತಗೊಳಿಸಬೇಕು ಮತ್ತು ಕಾನೂನಾತ್ಮಕವಾಗಿ ಸೂಕ್ತ ತೀರ್ಪು ನೀಡಬೇಕು</p></li></ol>.Renukaswamy Murder | ಜಾಮೀನು ಆದೇಶ ರದ್ದು: ದರ್ಶನ್, ಪವಿತ್ರಾ ಮತ್ತೆ ಜೈಲಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಗುರುವಾರ ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ತೀಕ್ಷ್ಣವಾದ ಕೆಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. </p> <h2>ಆ ಅಭಿಪ್ರಾಯಗಳು ಹೀಗಿವೆ:</h2>.<ol><li><p>ಆರೋಪಿಗಳು ಎಷ್ಟೇ ಪ್ರಭಾವಿಯಾಗಿದ್ದರೂ ಕಾನೂನಿಗಿಂತ ದೊಡ್ಡವರಲ್ಲ. ಈ ತೀರ್ಪು ನ್ಯಾಯದಾನ ವ್ಯವಸ್ಥೆಗೆ ಒಂದು ಬಲವಾದ ಸಂದೇಶ ನೀಡುತ್ತದೆ. ಆರೋಪಿಗಳಿಗೆ ಜೈಲಿನಲ್ಲಿ ವಿಶೇಷ ಅಥವಾ ಫೈವ್ ಸ್ಟಾರ್ ಆತಿಥ್ಯ ದೊರೆಯುತ್ತಿದೆ ಎಂದು ನಮಗೆ ಗೊತ್ತಾದ ಕ್ಷಣವೇ ಜೈಲು ಅಧೀಕ್ಷಕ ಸೇರಿದಂತೆ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು.</p></li><li><p>ಆರೋಪಿಯ ವರ್ತನೆ, ಪ್ರಭಾವ, ಜೈಲಿನ ನಿಯಮಗಳ ಉಲ್ಲಂಘನೆ ಹಾಗೂ ಆರೋಪಗಳ ಗಾಂಭೀರ್ಯವು ಅವರು ಜಾಮೀನಿಗೆ ಅರ್ಹವಾಗಿಲ್ಲ ಎಂಬುದನ್ನು ಸೂಚಿಸುತ್ತವೆ.</p></li><li><p> ಪ್ರಸ್ತುತ ಪ್ರಕರಣದಲ್ಲಿ ದರ್ಶನ್ (ಎರಡನೇ ಆರೋಪಿ) ಅವರ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ಅವರಿಗೆ ಜಾಮೀನು ಮಂಜೂರು ಮಾಡಿರುವ ಆದೇಶವು ವಿವೇಚನಾ ಅಧಿಕಾರದ ಮತಿಗೆಟ್ಟ ದುರುಪಯೋಗ ಮತ್ತು ಕಾನೂನಾತ್ಮಕವಾಗಿ ಒಪ್ಪಲಾಗದಂತಹದ್ದು.</p></li><li><p> ನಾವು ಜಾಮೀನು ಮಂಜೂರು ಹಾಗೂ ರದ್ದತಿ ಎರಡನ್ನೂ ಪರಿಗಣಿಸಿದ್ದೇವೆ. ಈ ಪ್ರಕರಣದಲ್ಲಿ ಹೈಕೋರ್ಟ್ನ ತೀರ್ಪು ಗಂಭೀರ ಕಾನೂನು ನ್ಯೂನತೆಗಳನ್ನು ಒಳಗೊಂಡಿದೆ. ಈ ತೀರ್ಪು ಸೆಕ್ಷನ್ 302, 120ಬಿ ಮತ್ತು 34 ಸೆಕ್ಷನ್ಗಳ ಅಡಿಯಲ್ಲಿ ಜಾಮೀನು ಮಂಜೂರು ಮಾಡಲು ಯಾವುದೇ ವಿಶೇಷ ಅಥವಾ ಸ್ಪಷ್ಟ ಕಾರಣ ದಾಖಲಿಸಲು ವಿಫಲವಾಗಿದೆ.</p></li><li><p>ಇಂತಹ ಪ್ರಕರಣಗಳಲ್ಲಿ ಅಪರಾಧದ ಸ್ವರೂಪ ಮತ್ತು ಆಳ, ಆರೋಪಿಯ ಪಾತ್ರ ಮತ್ತು ವಿಚಾರಣೆಯಲ್ಲಿ ಮಧ್ಯಪ್ರವೇಶ ಮಾಡುವ ಅಪಾಯಗಳನ್ನು ಅರ್ಥ ಮಾಡಿಕೊಳ್ಳದೆ ಜಾಮೀನು ನೀಡುವುದು ವಿವೇಚನಾ ಅಧಿಕಾರದ ದುರುಪಯೋಗಕ್ಕೆ ಕಾರಣವಾಗುತ್ತದೆ.</p></li><li><p>ಜನಪ್ರಿಯತೆಯು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಕವಚವಾಗಲು ಸಾಧ್ಯವಿಲ್ಲ .</p></li><li><p> ಜಾಮೀನು ದೊರೆತ ತಕ್ಷಣವೇ 2ನೇ ಆರೋಪಿಯು ಸಾರ್ವಜನಿಕ ಕಾರ್ಯಕ್ರಮಗಳಿಗೆ ಮರಳಿರುವುದು, ವಿಚಾರಣಾ ಸಾಕ್ಷಿಗಳೊಂದಿಗೆ ವೇದಿಕೆ ಹಂಚಿಕೊಂಡಿರುವುದು, ಪೊಲೀಸ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿರುವುದು... ಇವೆಲ್ಲವೂ ವಿಚಾರಣೆಯ ಸಮಗ್ರತೆಗೆ ಬೆದರಿಕೆ ಒಡ್ಡುತ್ತವೆ.</p></li><li><p>ಸೆಲೆಬ್ರಿಟಿಗಳು ಸಮಾಜದಲ್ಲಿ ಮಾದರಿಯಾಗಿರುತ್ತಾರೆ. ಅವರು ತಮ್ಮ ಪ್ರಸಿದ್ಧಿಯಿಂದ ಸಾಮಾಜಿಕ ಮೌಲ್ಯಗಳ ಮೇಲೆ ಗಣನೀಯ ಪ್ರಭಾವ ಬೀರುತ್ತಾರೆ. ಅಂತಹ ವ್ಯಕ್ತಿಯು ಸಂಚುಗಾರಿಕೆ ಮತ್ತು ಹತ್ಯೆಯಂತಹ ಗಂಭೀರ ಆರೋಪಗಳನ್ನು ಹೊಂದಿದ್ದರೂ ಅವರನ್ನು ಸಡಿಲ ಬಿಡುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತದೆ.</p></li><li><p>ಸಾಕ್ಷಿಗಳ ಮೇಲೆ ಬೆದರಿಕೆ, ವಿಧಿವಿಜ್ಞಾನ ಮತ್ತು ಪ್ರತ್ಯಕ್ಷ ಸಾಕ್ಷಿಗಳ ಮೇಲೆ ಒತ್ತಡವು ಜಾಮೀನಿನ ರದ್ದತಿಯ ಅಗತ್ಯತೆಯನ್ನು ಒತ್ತಿ ಹೇಳುತ್ತಿವೆ.</p></li><li><p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ವ್ಯಕ್ತಿಯು ತನ್ನ ಸಾಮಾಜಿಕ ಸ್ಥಿತಿಗತಿ ಅಥವಾ ಆರ್ಥಿಕ ಸ್ಥಿತಿಗತಿಯ ಕಾರಣದಿಂದ ಕಾನೂನಾತ್ಮಕ ಉತ್ತರದಾಯಿತ್ವದಿಂದ ಹೊರಗಿರಲು ಸಾಧ್ಯವಿಲ್ಲ .</p></li><li><p>ಸಾಕ್ಷಿಗಳ ವಿಶ್ವಾಸಾರ್ಹತೆ ಮತ್ತು ಅವಲಂಬನೆಯನ್ನು ವಿಶ್ಲೇಷಿಸುವ ಅಧಿಕಾರವಿರುವುದು ವಿಚಾರಣಾ ನ್ಯಾಯಾಲಯಕ್ಕೆ ಮಾತ್ರ.</p></li><li><p>ಈ ಪ್ರಕರಣದ ಗಾಂಭೀರ್ಯ ಪರಿಗಣಿಸಿ, ವಿಚಾರಣೆ ತ್ವರಿತಗೊಳಿಸಬೇಕು ಮತ್ತು ಕಾನೂನಾತ್ಮಕವಾಗಿ ಸೂಕ್ತ ತೀರ್ಪು ನೀಡಬೇಕು</p></li></ol>.Renukaswamy Murder | ಜಾಮೀನು ಆದೇಶ ರದ್ದು: ದರ್ಶನ್, ಪವಿತ್ರಾ ಮತ್ತೆ ಜೈಲಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>