<p><strong>ಹುಣಸೂರು (ಮೈಸೂರು ಜಿಲ್ಲೆ):</strong> ದಸರಾ ಜಂಬೂಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆ (67) ಅಸ್ವಸ್ಥಗೊಂಡಿದೆ. </p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿರುವ ಆನೆ ಕೆಲವು ದಿನಗಳಿಂದ ಆಹಾರ ತ್ಯಜಿಸಿದೆ. ಅರಣ್ಯ ಇಲಾಖೆಯ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದಾರೆ. </p>.<p>‘ಆನೆಗೆ ಗಂಟಲಿನಲ್ಲಿ ಹುಣ್ಣಾಗಿದೆ. ಮೇವು ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿದೆ. ಎಂಡೋಸ್ಕೋಪಿ ಮಾಡಿ ರಕ್ತ, ಅಂಗಾಂಗದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಆಧರಿಸಿ ಚಿಕಿತ್ಸೆ ನಡೆಸಲು ಸಿದ್ದತೆ ನಡೆದಿದೆ’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃದು ಆಹಾರವಾದ ರಾಗಿ ಗಂಜಿ, ರಾಗಿ ಮುದ್ದೆ, ಕಲ್ಲಂಗಡಿ, ಬಾಳೆ ಹಣ್ಣು ಮತ್ತು ಗ್ಲೂಕೋಸ್ ನೀಡಲಾಗುತ್ತಿದೆ. ಪಶುವೈದ್ಯಾಧಿಕಾರಿಗಳಾದ ಡಾ.ಚಟ್ಟಿಯಪ್ಪ ಹಾಗೂ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದಾರೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ):</strong> ದಸರಾ ಜಂಬೂಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆ (67) ಅಸ್ವಸ್ಥಗೊಂಡಿದೆ. </p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿರುವ ಆನೆ ಕೆಲವು ದಿನಗಳಿಂದ ಆಹಾರ ತ್ಯಜಿಸಿದೆ. ಅರಣ್ಯ ಇಲಾಖೆಯ ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡುತ್ತಿದ್ದಾರೆ. </p>.<p>‘ಆನೆಗೆ ಗಂಟಲಿನಲ್ಲಿ ಹುಣ್ಣಾಗಿದೆ. ಮೇವು ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿದೆ. ಎಂಡೋಸ್ಕೋಪಿ ಮಾಡಿ ರಕ್ತ, ಅಂಗಾಂಗದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿ ಆಧರಿಸಿ ಚಿಕಿತ್ಸೆ ನಡೆಸಲು ಸಿದ್ದತೆ ನಡೆದಿದೆ’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃದು ಆಹಾರವಾದ ರಾಗಿ ಗಂಜಿ, ರಾಗಿ ಮುದ್ದೆ, ಕಲ್ಲಂಗಡಿ, ಬಾಳೆ ಹಣ್ಣು ಮತ್ತು ಗ್ಲೂಕೋಸ್ ನೀಡಲಾಗುತ್ತಿದೆ. ಪಶುವೈದ್ಯಾಧಿಕಾರಿಗಳಾದ ಡಾ.ಚಟ್ಟಿಯಪ್ಪ ಹಾಗೂ ಡಾ.ರಮೇಶ್ ಚಿಕಿತ್ಸೆ ನೀಡುತ್ತಿದ್ದಾರೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>