<p>ದಾವಣಗೆರೆ: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯ ಎಲ್ಲ ಮಂಡಲಗಳ ವ್ಯಾಪ್ತಿಯಿಂದ 1 ಲಕ್ಷ ಜನರು ತೆರಳುತ್ತಿದ್ದೇವೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.</p>.<p>‘50 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿರುವ ಯಡಿಯೂರಪ್ಪ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರಾಗಿದ್ದ ಅವರು, ಶಿಕಾರಿಪುರ ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹುದ್ದೆಗೆ ಏರಿದವರು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಬಿಜೆಪಿ ರಾಜ್ಯ ಘಟಕಕ್ಕೆ ನಾಲ್ಕು ಬಾರಿ ಅಧ್ಯಕ್ಷರಾಗಿದ್ದರು. 7 ಬಾರಿ ಶಾಸಕ, ಒಮ್ಮೆ ಲೋಕಸಭೆ ಹಾಗೂ ವಿಧಾನಪರಿಷತ್ ಸದಸ್ಯರಾಗಿದ್ದರು. ಉತ್ತರ ಭಾರತದಲ್ಲಿದ್ದ ಬಿಜೆಪಿ ಪ್ರಾಬಲ್ಯವನ್ನು ದಕ್ಷಿಣ ಭಾರತದತ್ತ ತಂದವರು ಯಡಿಯೂರಪ್ಪ. ದಕ್ಷಿಣ ಭಾರತದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯ ಇಲ್ಲ ಎಂಬ ಮಾತನ್ನು ಸುಳ್ಳಾಗಿಸಿದರು. ಈ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ’ ಎಂದರು.</p>.<p>‘ಯಡಿಯೂರಪ್ಪ ಅವರು ಹೋರಾಟದ ಮೂಲಕ ಜನರ ಧ್ವನಿಯಾಗಿದ್ದರು. ರಾಜ್ಯದ ಹಲವೆಡೆ ಪಾದಯಾತ್ರೆ ಮಾಡಿ ಪಕ್ಷ ಸಂಘಟಿಸಿದ್ದಾರೆ. ಬಗರ್ಹುಕುಂ ಸಂಬಂಧ ಶಿಕಾರಿಪುರದಿಂದ ಶಿವಮೊಗ್ಗ ದವರೆಗೆ ಹಾಗೂ ಬೆಂಗಳೂರಿ ನವರೆಗೆ ನಡೆಸಿದ ಪಾದಯಾತ್ರೆಯಲ್ಲಿ ನಾನೂ ಪಾಲ್ಗೊಂಡಿದ್ದೆ’ ಎಂದು ನೆನಪಿಸಿಕೊಂಡರು.</p>.<p>ಬಿಜೆಪಿ ಮುಖಂಡರಾದ ಬಿ.ಜಿ. ಅಜಯ್ಕುಮಾರ್, ಲೋಕಿಕೆರೆ ನಾಗರಾಜ್, ಮಾಜಿ ಶಾಸಕ ಬಸವರಾಜ ನಾಯ್ಕ, ರುದ್ರೇಗೌಡ, ಆರನೇಕಲ್ಲು ವಿಜಯಕುಮಾರ್, ಜರೆಕಟ್ಟೆ ಹನುಮಂತಪ್ಪ, ವಿಶ್ವನಾಥ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1403759986</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಂಡಿರುವ ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯ ಎಲ್ಲ ಮಂಡಲಗಳ ವ್ಯಾಪ್ತಿಯಿಂದ 1 ಲಕ್ಷ ಜನರು ತೆರಳುತ್ತಿದ್ದೇವೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.</p>.<p>‘50 ವರ್ಷಗಳಿಂದ ಸುದೀರ್ಘ ರಾಜಕಾರಣದಲ್ಲಿರುವ ಯಡಿಯೂರಪ್ಪ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರಾಗಿದ್ದ ಅವರು, ಶಿಕಾರಿಪುರ ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಹುದ್ದೆಗೆ ಏರಿದವರು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಬಿಜೆಪಿ ರಾಜ್ಯ ಘಟಕಕ್ಕೆ ನಾಲ್ಕು ಬಾರಿ ಅಧ್ಯಕ್ಷರಾಗಿದ್ದರು. 7 ಬಾರಿ ಶಾಸಕ, ಒಮ್ಮೆ ಲೋಕಸಭೆ ಹಾಗೂ ವಿಧಾನಪರಿಷತ್ ಸದಸ್ಯರಾಗಿದ್ದರು. ಉತ್ತರ ಭಾರತದಲ್ಲಿದ್ದ ಬಿಜೆಪಿ ಪ್ರಾಬಲ್ಯವನ್ನು ದಕ್ಷಿಣ ಭಾರತದತ್ತ ತಂದವರು ಯಡಿಯೂರಪ್ಪ. ದಕ್ಷಿಣ ಭಾರತದಲ್ಲಿ ಬಿಜೆಪಿ ಖಾತೆ ತೆರೆಯಲು ಸಾಧ್ಯ ಇಲ್ಲ ಎಂಬ ಮಾತನ್ನು ಸುಳ್ಳಾಗಿಸಿದರು. ಈ ಅಭಿಮಾನೋತ್ಸವಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ’ ಎಂದರು.</p>.<p>‘ಯಡಿಯೂರಪ್ಪ ಅವರು ಹೋರಾಟದ ಮೂಲಕ ಜನರ ಧ್ವನಿಯಾಗಿದ್ದರು. ರಾಜ್ಯದ ಹಲವೆಡೆ ಪಾದಯಾತ್ರೆ ಮಾಡಿ ಪಕ್ಷ ಸಂಘಟಿಸಿದ್ದಾರೆ. ಬಗರ್ಹುಕುಂ ಸಂಬಂಧ ಶಿಕಾರಿಪುರದಿಂದ ಶಿವಮೊಗ್ಗ ದವರೆಗೆ ಹಾಗೂ ಬೆಂಗಳೂರಿ ನವರೆಗೆ ನಡೆಸಿದ ಪಾದಯಾತ್ರೆಯಲ್ಲಿ ನಾನೂ ಪಾಲ್ಗೊಂಡಿದ್ದೆ’ ಎಂದು ನೆನಪಿಸಿಕೊಂಡರು.</p>.<p>ಬಿಜೆಪಿ ಮುಖಂಡರಾದ ಬಿ.ಜಿ. ಅಜಯ್ಕುಮಾರ್, ಲೋಕಿಕೆರೆ ನಾಗರಾಜ್, ಮಾಜಿ ಶಾಸಕ ಬಸವರಾಜ ನಾಯ್ಕ, ರುದ್ರೇಗೌಡ, ಆರನೇಕಲ್ಲು ವಿಜಯಕುಮಾರ್, ಜರೆಕಟ್ಟೆ ಹನುಮಂತಪ್ಪ, ವಿಶ್ವನಾಥ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-1403759986</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>