<p>ದಾವಣಗೆರೆ: ‘ಕಾಂಗ್ರೆಸ್ನ ಆಂತರಿಕ ಕಚ್ಚಾಟದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನವಾಗಲಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>‘ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್ ಬಣ, ಸತೀಶ್ ಜಾರಕಿಹೊಳಿ ಬಣ ಸೇರಿದಂತೆ ಹಲವು ಬಣಗಳಾಗಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಇನ್ನಿತರ ಸಚಿವರು ಬಿಜೆಪಿಯನ್ನು ಟೀಕಿಸುವ ವಿಚಾರದಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಅವರು ತಮ್ಮ ತಮ್ಮ ಇಲಾಖೆಗಳನ್ನೇ ಮರೆತಿದ್ದಾರೆ’ ಎಂದು ದೂರಿದರು.</p>.<p>‘ರಾಜ್ಯ ಸರ್ಕಾರ ದಿಕ್ಕು ದೆಸೆಯಿಲ್ಲದೇ ದಿವಾಳಿಯಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಹೊಂದಿಸಲಾಗದೇ ಪರದಾಡುತ್ತಿದೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಜನವಿರೋಧಿ ಸರ್ಕಾರದಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಂಘ ಪರಿವಾರವನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಈ ಮೂಲಕ ಇಡೀ ದೇಶವನ್ನು ಅಪಮಾನಿಸಿದ್ದಾರೆ. ಖರ್ಗೆ ಹೇಳಿಕೆಯು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಅವರು ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಸ್ಮಾರ್ಟ್ ಮೀಟರ್ ಅಳವಡಿಕೆಯ ಹೆಸರಿನಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹಗಲು ದರೋಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ವಿದ್ಯುತ್ ದರ ಏರಿಕೆ ಮೂಲಕ ಮತ್ತೊಮ್ಮೆ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ’ ಎಂದರು.</p>.<p>ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ಮುಖಂಡರಾದ ಬಿ.ಜಿ.ಅಜಯಕುಮಾರ್, ಧನಂಜಯ ಕಡ್ಲೇಬಾಳು, ರಾಜು ವೀರಣ್ಣಮ, ಪಂಜು ಪೈಲ್ವಾನ್, ಪ್ರವೀಣ ಜಾಧವ್, ರವಿಗೌಡ, ಚೇತನ್ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-43-1020949355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಕಾಂಗ್ರೆಸ್ನ ಆಂತರಿಕ ಕಚ್ಚಾಟದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನವಾಗಲಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.</p>.<p>‘ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ್ ಬಣ, ಸತೀಶ್ ಜಾರಕಿಹೊಳಿ ಬಣ ಸೇರಿದಂತೆ ಹಲವು ಬಣಗಳಾಗಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಇನ್ನಿತರ ಸಚಿವರು ಬಿಜೆಪಿಯನ್ನು ಟೀಕಿಸುವ ವಿಚಾರದಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಅವರು ತಮ್ಮ ತಮ್ಮ ಇಲಾಖೆಗಳನ್ನೇ ಮರೆತಿದ್ದಾರೆ’ ಎಂದು ದೂರಿದರು.</p>.<p>‘ರಾಜ್ಯ ಸರ್ಕಾರ ದಿಕ್ಕು ದೆಸೆಯಿಲ್ಲದೇ ದಿವಾಳಿಯಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಹೊಂದಿಸಲಾಗದೇ ಪರದಾಡುತ್ತಿದೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಜನವಿರೋಧಿ ಸರ್ಕಾರದಲ್ಲಿ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಂಘ ಪರಿವಾರವನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಈ ಮೂಲಕ ಇಡೀ ದೇಶವನ್ನು ಅಪಮಾನಿಸಿದ್ದಾರೆ. ಖರ್ಗೆ ಹೇಳಿಕೆಯು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಅವರು ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಸ್ಮಾರ್ಟ್ ಮೀಟರ್ ಅಳವಡಿಕೆಯ ಹೆಸರಿನಲ್ಲಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹಗಲು ದರೋಡೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ವಿದ್ಯುತ್ ದರ ಏರಿಕೆ ಮೂಲಕ ಮತ್ತೊಮ್ಮೆ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ’ ಎಂದರು.</p>.<p>ಮಾಜಿ ಶಾಸಕ ಬಸವರಾಜ ನಾಯ್ಕ, ಬಿಜೆಪಿ ಮುಖಂಡರಾದ ಬಿ.ಜಿ.ಅಜಯಕುಮಾರ್, ಧನಂಜಯ ಕಡ್ಲೇಬಾಳು, ರಾಜು ವೀರಣ್ಣಮ, ಪಂಜು ಪೈಲ್ವಾನ್, ಪ್ರವೀಣ ಜಾಧವ್, ರವಿಗೌಡ, ಚೇತನ್ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-43-1020949355</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>