<p>ದಾವಣಗೆರೆ: ‘ಕಾರ್ಮಿಕ ಸಂಘಟನೆಗಳು ನಡೆಸಿದ ನಿರಂತರ ಬೀದಿ ಹೋರಾಟ ಹಾಗೂ ಕಾನೂನು ಹೋರಾಟಗಳ ಫಲವಾಗಿ ಕಾರ್ಮಿಕ ಇಲಾಖೆಯು ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿಟಿಯು) ಮುಖಂಡ ಆವರಗೆರೆ ಉಮೇಶ್ ತಿಳಿಸಿದರು.</p>.<p>‘ಕಾರ್ಮಿಕರ ಹಿತದೃಷ್ಟಿಯಿಂದ ಅಂತಿಮ ಅಧಿಸೂಚನೆಯನ್ನು ಜಾರಿಗೊಳಿಸುವ ಮುನ್ನ ಪರಿಷ್ಕರಣೆ ಮಾಡಿ, ನಮ್ಮ ಮುಖ್ಯ ಹಕ್ಕೊತ್ತಾಯವಾಗಿದ್ದ ಎಲ್ಲಾ ರೀತಿಯ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನವನ್ನು ₹ 31,000 ದಿಂದ ₹ 36,000 ಕ್ಕೆ ಹೆಚ್ಚಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಈ ಪರಿಷ್ಕೃತ ಅಂತಿಮ ಅಧಿಸೂಚನೆಯು ರಾಜ್ಯದ ಒಟ್ಟು 80 ಅನುಸೂಚಿತ ಉದ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅನ್ವಯವಾಗಲಿದೆ. 2022ರಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯ ಭಾಗವಾಗಿ ಕಳೆದ ಎರಡು ವರ್ಷಗಳ ಕಾಲದ ವೇರಿಯಬಲ್ ಡಿಯರ್ನೆಸ್ ಅಲೋಯೆನ್ಸ್ ಅನ್ನು ಸೇರಿಸುವ ಅಗತ್ಯವನ್ನು ಸರ್ಕಾರ ಪರಿಗಣಿಸಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕನಿಷ್ಠ ವೇತನ ಕಾಯ್ದೆ 1948ರ ಕಲಂ 3(1) (ಬಿ) ಮತ್ತು 5 (1) (ಬಿ)ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಕೌಶಲ, ಕುಶಲ, ಅರೆಕುಶಲ ಎಂಬ ಮೂರು ವಲಯಗಳನ್ನು ಮಾಡಿ ವೇತನ ದರದ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿದೆ’ ಎಂದರು.</p>.<p>ಸಮಿತಿಯ ಮುಖಂಡರಾದ ಸತೀಶ್ ಅರವಿಂದ್, ಲಕ್ಷ್ಮಣ್ ವಿ., ಎಸ್.ಮುರುಗೇಶ್, ಶಾಗಲೆ ಶರಣಪ್ಪ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-43-375787709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಕಾರ್ಮಿಕ ಸಂಘಟನೆಗಳು ನಡೆಸಿದ ನಿರಂತರ ಬೀದಿ ಹೋರಾಟ ಹಾಗೂ ಕಾನೂನು ಹೋರಾಟಗಳ ಫಲವಾಗಿ ಕಾರ್ಮಿಕ ಇಲಾಖೆಯು ಕನಿಷ್ಠ ವೇತನ ಪರಿಷ್ಕರಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ’ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ (ಜೆಸಿಟಿಯು) ಮುಖಂಡ ಆವರಗೆರೆ ಉಮೇಶ್ ತಿಳಿಸಿದರು.</p>.<p>‘ಕಾರ್ಮಿಕರ ಹಿತದೃಷ್ಟಿಯಿಂದ ಅಂತಿಮ ಅಧಿಸೂಚನೆಯನ್ನು ಜಾರಿಗೊಳಿಸುವ ಮುನ್ನ ಪರಿಷ್ಕರಣೆ ಮಾಡಿ, ನಮ್ಮ ಮುಖ್ಯ ಹಕ್ಕೊತ್ತಾಯವಾಗಿದ್ದ ಎಲ್ಲಾ ರೀತಿಯ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನವನ್ನು ₹ 31,000 ದಿಂದ ₹ 36,000 ಕ್ಕೆ ಹೆಚ್ಚಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಈ ಪರಿಷ್ಕೃತ ಅಂತಿಮ ಅಧಿಸೂಚನೆಯು ರಾಜ್ಯದ ಒಟ್ಟು 80 ಅನುಸೂಚಿತ ಉದ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಅನ್ವಯವಾಗಲಿದೆ. 2022ರಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯ ಭಾಗವಾಗಿ ಕಳೆದ ಎರಡು ವರ್ಷಗಳ ಕಾಲದ ವೇರಿಯಬಲ್ ಡಿಯರ್ನೆಸ್ ಅಲೋಯೆನ್ಸ್ ಅನ್ನು ಸೇರಿಸುವ ಅಗತ್ಯವನ್ನು ಸರ್ಕಾರ ಪರಿಗಣಿಸಿದೆ’ ಎಂದು ಮಾಹಿತಿ ನೀಡಿದರು.</p>.<p>‘ಕನಿಷ್ಠ ವೇತನ ಕಾಯ್ದೆ 1948ರ ಕಲಂ 3(1) (ಬಿ) ಮತ್ತು 5 (1) (ಬಿ)ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಕೌಶಲ, ಕುಶಲ, ಅರೆಕುಶಲ ಎಂಬ ಮೂರು ವಲಯಗಳನ್ನು ಮಾಡಿ ವೇತನ ದರದ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗಿದೆ’ ಎಂದರು.</p>.<p>ಸಮಿತಿಯ ಮುಖಂಡರಾದ ಸತೀಶ್ ಅರವಿಂದ್, ಲಕ್ಷ್ಮಣ್ ವಿ., ಎಸ್.ಮುರುಗೇಶ್, ಶಾಗಲೆ ಶರಣಪ್ಪ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-43-375787709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>