<p><strong>ಬೆಂಗಳೂರು:</strong> ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಬಂದು ಸರಣಿ ಸಭೆಗಳನ್ನು ನಡೆಸಿದರೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿಯಿತು. </p>.<p>ಶುಕ್ರವಾರ ಬೆಂಗಳೂರಿಗೆ ಬಂದ ಸುರ್ಜೇವಾಲಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆ ಸಮಾಲೋಚನೆ ನಡೆಸಿ ಎರಡು ಕ್ಷೇತ್ರಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. </p>.<p>ಅದಾದ ಬಳಿಕ, ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥ್ ಪಳನಿಸ್ವಾಮಿ, ಸಚಿವರಾದ ಈಶ್ವರ ಖಂಡ್ರೆ, ಜಮೀರ್ ಅಹಮದ್ ಖಾನ್, ಕೃಷ್ಣ ಬೈರೇಗೌಡ, ಶರಣ ಪ್ರಕಾಶ ಪಾಟೀಲ, ರಹೀಂ ಖಾನ್, ಮಧು ಬಂಗಾರಪ್ಪ, ಆರ್.ಬಿ ತಿಮ್ಮಾಪುರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ, ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ಚರ್ಚೆ ನಡೆಸಿದರು. </p>.<p>ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವು ಮುಖಂಡರು ಅಲ್ಪಸಂಖ್ಯಾತರಿಗೇ ಟಿಕೆಟ್ ನೀಡುವಂತೆ ಬಿಗಿಪಟ್ಟು ಹಿಡಿದರೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರನಿಗೆ ಟಿಕೆಟ್ ಕೊಡಿಸಲು ಹಲವರು ಇನ್ನಿಲ್ಲದ ಪ್ರಯತ್ನ ನಡೆಸಿದರು. </p>.<p>‘ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಿದರೆ ಗೆಲುವು ಸಾಧ್ಯ’ ಎನ್ನುವ ಜಮೀರ್ ಮಾತಿಗೆ ರಹೀಂ ಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಸಲೀಂ ಅಹಮದ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್, ಎನ್.ಎ.ಹ್ಯಾರಿಸ್ ಸೇರಿದಂತೆ ಅಲ್ಪಸಂಖ್ಯಾತ ನಾಯಕರು ಧ್ವನಿಗೂಡಿಸಿದ್ದಾರೆ. ಈ ಕ್ಷೇತ್ರದಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸಾಧಿಕ್ ಪೈಲ್ವಾನ್, ಸೈಫುಲ್ಲಾ ಅವರ ಪುತ್ರನ ಹೆಸರು ನೀಡಿದ್ದಾರೆ ಎನ್ನಲಾಗಿದೆ. </p>.<p>ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಸಲೀಂ ಅಹಮದ್, ‘ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಮನವಿ ಮಾಡಿದ್ದೇವೆ. ಹೈಕಮಾಂಡ್ ನಾಯಕರ ಬಳಿ ಚರ್ಚಿಸಿ, ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ’ ಎಂದರು.</p>.<p>ಸುರ್ಜೇವಾಲಾ ಜತೆ ಸಭೆ ನಡೆಸಿದ ಬಳಿಕ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಶಾಸಕರು, ಪ್ರಮುಖರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಮುಂದಿಟ್ಟಿದ್ದಾರೆ. </p>.<h2>ಸಮರ್ಥ್ಗೆ ಟಿಕೆಟ್: ಹೈಕಮಾಂಡ್ಗೆ ಒತ್ತಡ </h2><p>ಅಲ್ಪಸಂಖ್ಯಾತ ನಾಯಕರ ಬಿಗಿಪಟ್ಟಿನ ನಡುವೆಯೇ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ಕೊಡಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ‘ಬಾಗಲಕೋಟೆಯಲ್ಲಿ ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾದರೆ ದಾವಣಗೆರೆಗೂ ಅದೇ ನಿಯಮ ಅನ್ವಯವಾಗಬೇಕು ಎಂದು ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಸಚಿವರಾದ ಈಶ್ವರ ಖಂಡ್ರೆ ಸೇರಿದಂತೆ ಹಲವರು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹಾಕಿದ್ದಾರೆ. ‘ಇದುವರೆಗೂ ಇಂತಹ ಸನ್ನಿವೇಶಗಳಲ್ಲಿ ಅನುಕಂಪದ ಮಾನದಂಡವನ್ನೇ ಅನುಸರಿಸಲಾಗುತ್ತಿದೆ. ನಿಧನರಾಗುವ ಕುಟುಂಬದ ಸದಸ್ಯರಿಗೆ ನೀಡುತ್ತಾ ಬರಲಾಗಿದೆ. ಈಗಲೂ ಅದೇ ಮಾದರಿ ಅನುಸರಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ. </p>.<h2>ಬಾಗಲಕೋಟೆ: ಮೇಟಿ ಕುಟುಂಬಕ್ಕೇ ಟಿಕೆಟ್ </h2><p>ಬಾಗಲಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಲಾಗಿದ್ದು ಎಚ್.ವೈ.ಮೇಟಿ ಅವರ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಮೇಟಿ ಅವರ ಕುಟುಂಬದ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಲು ಪೈಪೋಟಿ ನಡೆಸುತ್ತಿದ್ದಾರೆ. ಪುತ್ರಿ ಬಾಯಕ್ಕ ಅವರಿಗೆ ಟಿಕೆಟ್ ನೀಡುವಂತೆ ಹಲವರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. </p>.<h2> ಗೆಲುವಿಗೆ ಒಮ್ಮತ: ಡಿಕೆಶಿ </h2><p>ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. </p><p>ಸುದ್ದಿಗಾರರ ಜತೆ ಮಾತನಾಡಿದ ಅವರು ‘ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಅಭಿಪ್ರಾಯದಂತೆ ಹೈಕಮಾಂಡ್ ನಾಯಕರಿಗೆ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ’ ಎಂದರು. </p>.<div><blockquote>ಚುನಾವಣಾ ಉಸ್ತುವಾರಿ ಸಮಿತಿಗಳು ನೀಡಿದ ವರದಿ ಎಲ್ಲರ ಅಭಿಪ್ರಾಯಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೆ ತಂದು ಶನಿವಾರ ಸಂಜೆಯ ಒಳಗೆ ಅಭ್ಯರ್ಥಿಗಳ ಆಯ್ಕೆ ಘೋಷಿಸಲಾಗುವುದು.</blockquote><span class="attribution">–ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯ ಉಸ್ತುವಾರಿ</span></div>.<div><blockquote>ಯಾರಿಗೆ ಟಿಕೆಟ್ ನೀಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ. </blockquote><span class="attribution">–ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಬಂದು ಸರಣಿ ಸಭೆಗಳನ್ನು ನಡೆಸಿದರೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿಯಿತು. </p>.<p>ಶುಕ್ರವಾರ ಬೆಂಗಳೂರಿಗೆ ಬಂದ ಸುರ್ಜೇವಾಲಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆ ಸಮಾಲೋಚನೆ ನಡೆಸಿ ಎರಡು ಕ್ಷೇತ್ರಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. </p>.<p>ಅದಾದ ಬಳಿಕ, ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥ್ ಪಳನಿಸ್ವಾಮಿ, ಸಚಿವರಾದ ಈಶ್ವರ ಖಂಡ್ರೆ, ಜಮೀರ್ ಅಹಮದ್ ಖಾನ್, ಕೃಷ್ಣ ಬೈರೇಗೌಡ, ಶರಣ ಪ್ರಕಾಶ ಪಾಟೀಲ, ರಹೀಂ ಖಾನ್, ಮಧು ಬಂಗಾರಪ್ಪ, ಆರ್.ಬಿ ತಿಮ್ಮಾಪುರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ, ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ಚರ್ಚೆ ನಡೆಸಿದರು. </p>.<p>ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಹಲವು ಮುಖಂಡರು ಅಲ್ಪಸಂಖ್ಯಾತರಿಗೇ ಟಿಕೆಟ್ ನೀಡುವಂತೆ ಬಿಗಿಪಟ್ಟು ಹಿಡಿದರೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರನಿಗೆ ಟಿಕೆಟ್ ಕೊಡಿಸಲು ಹಲವರು ಇನ್ನಿಲ್ಲದ ಪ್ರಯತ್ನ ನಡೆಸಿದರು. </p>.<p>‘ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಿದರೆ ಗೆಲುವು ಸಾಧ್ಯ’ ಎನ್ನುವ ಜಮೀರ್ ಮಾತಿಗೆ ರಹೀಂ ಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಸಲೀಂ ಅಹಮದ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್, ಎನ್.ಎ.ಹ್ಯಾರಿಸ್ ಸೇರಿದಂತೆ ಅಲ್ಪಸಂಖ್ಯಾತ ನಾಯಕರು ಧ್ವನಿಗೂಡಿಸಿದ್ದಾರೆ. ಈ ಕ್ಷೇತ್ರದಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸಾಧಿಕ್ ಪೈಲ್ವಾನ್, ಸೈಫುಲ್ಲಾ ಅವರ ಪುತ್ರನ ಹೆಸರು ನೀಡಿದ್ದಾರೆ ಎನ್ನಲಾಗಿದೆ. </p>.<p>ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಸಲೀಂ ಅಹಮದ್, ‘ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಮನವಿ ಮಾಡಿದ್ದೇವೆ. ಹೈಕಮಾಂಡ್ ನಾಯಕರ ಬಳಿ ಚರ್ಚಿಸಿ, ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ’ ಎಂದರು.</p>.<p>ಸುರ್ಜೇವಾಲಾ ಜತೆ ಸಭೆ ನಡೆಸಿದ ಬಳಿಕ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಶಾಸಕರು, ಪ್ರಮುಖರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಮುಂದಿಟ್ಟಿದ್ದಾರೆ. </p>.<h2>ಸಮರ್ಥ್ಗೆ ಟಿಕೆಟ್: ಹೈಕಮಾಂಡ್ಗೆ ಒತ್ತಡ </h2><p>ಅಲ್ಪಸಂಖ್ಯಾತ ನಾಯಕರ ಬಿಗಿಪಟ್ಟಿನ ನಡುವೆಯೇ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ಕೊಡಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ‘ಬಾಗಲಕೋಟೆಯಲ್ಲಿ ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾದರೆ ದಾವಣಗೆರೆಗೂ ಅದೇ ನಿಯಮ ಅನ್ವಯವಾಗಬೇಕು ಎಂದು ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಸಚಿವರಾದ ಈಶ್ವರ ಖಂಡ್ರೆ ಸೇರಿದಂತೆ ಹಲವರು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹಾಕಿದ್ದಾರೆ. ‘ಇದುವರೆಗೂ ಇಂತಹ ಸನ್ನಿವೇಶಗಳಲ್ಲಿ ಅನುಕಂಪದ ಮಾನದಂಡವನ್ನೇ ಅನುಸರಿಸಲಾಗುತ್ತಿದೆ. ನಿಧನರಾಗುವ ಕುಟುಂಬದ ಸದಸ್ಯರಿಗೆ ನೀಡುತ್ತಾ ಬರಲಾಗಿದೆ. ಈಗಲೂ ಅದೇ ಮಾದರಿ ಅನುಸರಿಸಬೇಕು’ ಎಂದು ಪ್ರತಿಪಾದಿಸಿದ್ದಾರೆ. </p>.<h2>ಬಾಗಲಕೋಟೆ: ಮೇಟಿ ಕುಟುಂಬಕ್ಕೇ ಟಿಕೆಟ್ </h2><p>ಬಾಗಲಕೋಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಸಲಾಗಿದ್ದು ಎಚ್.ವೈ.ಮೇಟಿ ಅವರ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಮೇಟಿ ಅವರ ಕುಟುಂಬದ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸಲು ಪೈಪೋಟಿ ನಡೆಸುತ್ತಿದ್ದಾರೆ. ಪುತ್ರಿ ಬಾಯಕ್ಕ ಅವರಿಗೆ ಟಿಕೆಟ್ ನೀಡುವಂತೆ ಹಲವರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. </p>.<h2> ಗೆಲುವಿಗೆ ಒಮ್ಮತ: ಡಿಕೆಶಿ </h2><p>ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. </p><p>ಸುದ್ದಿಗಾರರ ಜತೆ ಮಾತನಾಡಿದ ಅವರು ‘ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಪಕ್ಷದ ಮುಖಂಡರ ಸಭೆ ನಡೆಸಿದ್ದು ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಅಭಿಪ್ರಾಯದಂತೆ ಹೈಕಮಾಂಡ್ ನಾಯಕರಿಗೆ ಪಟ್ಟಿ ಕಳುಹಿಸುತ್ತೇವೆ. ಅಂತಿಮವಾಗಿ ಅವರು ತೀರ್ಮಾನ ಮಾಡಲಿದ್ದಾರೆ’ ಎಂದರು. </p>.<div><blockquote>ಚುನಾವಣಾ ಉಸ್ತುವಾರಿ ಸಮಿತಿಗಳು ನೀಡಿದ ವರದಿ ಎಲ್ಲರ ಅಭಿಪ್ರಾಯಗಳನ್ನು ಹೈಕಮಾಂಡ್ ನಾಯಕರ ಗಮನಕ್ಕೆ ತಂದು ಶನಿವಾರ ಸಂಜೆಯ ಒಳಗೆ ಅಭ್ಯರ್ಥಿಗಳ ಆಯ್ಕೆ ಘೋಷಿಸಲಾಗುವುದು.</blockquote><span class="attribution">–ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯ ಉಸ್ತುವಾರಿ</span></div>.<div><blockquote>ಯಾರಿಗೆ ಟಿಕೆಟ್ ನೀಡಿದರೂ ಒಮ್ಮತದಿಂದ ಕೆಲಸ ಮಾಡುವುದಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹೇಳಿದ್ದಾರೆ. </blockquote><span class="attribution">–ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>