ಸುಬ್ರಹ್ಮಣ್ಯ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ.
‘ಅರ್ಚಕರು ಮತ್ತು ಅಗತ್ಯ ಸಿಬ್ಬಂದಿ ಮೂಲಕ ದೇವಳದಲ್ಲಿ ದೈನಂದಿನ ಪೂಜಾ ವಿನಿಯೋಗ ನಡೆಸಲಾಗುವುದು.ಮುಂದಿನ ಆದೇಶದ ತನಕ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಮಾದ್ಯಮಗಳಿಗೆತಿಳಿಸಿದ್ದಾರೆ.