<p><strong>ಬೆಂಗಳೂರು:</strong> ಡಿಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯಲು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ 3ರಿಂದ ಆರಂಭವಾಗಲಿದೆ.</p>.<p>ಅಭ್ಯರ್ಥಿಗಳು ಕೋರ್ಸ್ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜುಲೈ 5ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಜುಲೈ 7ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಜುಲೈ 8ರಂದು ಸಂಜೆ 4ರವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆ, ಆಯ್ಕೆಗಳನ್ನು ಬದಲಿಸಿಕೊಳ್ಳಬಹುದು. ಜುಲೈ 9ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.</p>.<p>ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡ ಕೋರ್ಸ್, ಕಾಲೇಜುಗಳಿಗೆ ಪ್ರವೇಶ ಪಡೆಯುವ, ನಿರಾಕರಿಸುವ ಆಯ್ಕೆ (ಚಾಯ್ಸ್) ನಮೂದಿಸಲು ಜುಲೈ 10ರಿಂದ 13ರವರೆಗೆ ಅವಕಾಶ ಇರುತ್ತದೆ. ಆಯ್ಕೆ–1 ನಮೂದಿಸಿದ ವಿದ್ಯಾರ್ಥಿಗಳು ಚಲನ್ ಡೌನ್ ಲೋಡ್ ಮಾಡಿಕೊಂಡು, ಶುಲ್ಕ ಪಾವತಿಸಬೇಕು. ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಜುಲೈ 16ರ ಒಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ 2ನೇ ವರ್ಷಕ್ಕೆ ನೇರ ಪ್ರವೇಶ ಪಡೆಯಲು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಜುಲೈ 3ರಿಂದ ಆರಂಭವಾಗಲಿದೆ.</p>.<p>ಅಭ್ಯರ್ಥಿಗಳು ಕೋರ್ಸ್ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜುಲೈ 5ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಜುಲೈ 7ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಬಳಿಕ ಜುಲೈ 8ರಂದು ಸಂಜೆ 4ರವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆ, ಆಯ್ಕೆಗಳನ್ನು ಬದಲಿಸಿಕೊಳ್ಳಬಹುದು. ಜುಲೈ 9ರಂದು ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.</p>.<p>ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡ ಕೋರ್ಸ್, ಕಾಲೇಜುಗಳಿಗೆ ಪ್ರವೇಶ ಪಡೆಯುವ, ನಿರಾಕರಿಸುವ ಆಯ್ಕೆ (ಚಾಯ್ಸ್) ನಮೂದಿಸಲು ಜುಲೈ 10ರಿಂದ 13ರವರೆಗೆ ಅವಕಾಶ ಇರುತ್ತದೆ. ಆಯ್ಕೆ–1 ನಮೂದಿಸಿದ ವಿದ್ಯಾರ್ಥಿಗಳು ಚಲನ್ ಡೌನ್ ಲೋಡ್ ಮಾಡಿಕೊಂಡು, ಶುಲ್ಕ ಪಾವತಿಸಬೇಕು. ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ಜುಲೈ 16ರ ಒಳಗೆ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>