ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠವು ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ‘ನೂತನ ಕಾಯ್ದೆ
ಗಳ ಜಾರಿಯಿಂದ ರೈತರು ಈಗಾಗಲೇ ಪಡೆಯುತ್ತಿರುವ ಸೌಲಭ್ಯಗಳು ರದ್ದಾಗುವುದಿಲ್ಲ. ಇವುಗಳಿಂದ ರೈತರ ಸ್ವಾತಂತ್ರ್ಯ ಹರಣವಾಗುವುದಿಲ್ಲ. ಅವರನ್ನು ವ್ಯಾಪಾರಿಗಳ ಕಪಿಮುಷ್ಠಿಗೆ ದೂಡುವ ದುರುದ್ದೇಶವೂ ಅಡಗಿಲ್ಲ. ಕೆಲ ಪಕ್ಷ ಹಾಗೂ ವ್ಯಕ್ತಿಗಳು ಈ ಕಾಯ್ದೆಗಳ ಕುರಿತು ಅಪಪ್ರಚಾರ ನಡೆಸುತ್ತಿವೆ. ತಾವು ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು ಎಂಬುದು ರೈತರ ಬಹುಕಾಲದ ಬೇಡಿಕೆ. ಹೊಸ ಕಾಯ್ದೆಗಳ ಮೂಲಕ ಸರ್ಕಾರವು ಅವರ ಬೇಡಿಕೆಗೆ ಸ್ಪಂದಿಸುವ ಕೆಲಸ ಮಾಡಿದೆ’ ಎಂದು ಪ್ರತಿಪಾದಿಸಿದರು.